ಕದನ ವಿರಾಮ ಘೋಷಣೆ | ಅಮೆರಿಕಾ ಮಾತುಕತೆಗೆ ಭಾರತದ ಸ್ಪಷ್ಟ ಸಂದೇಶವೇನು?

ಹೊಸದಿಲ್ಲಿ : ಕಾಶ್ಮೀರದ ಬಗ್ಗೆ ಭಾರತ ಸ್ಪಷ್ಟ ನಿಲುವು ಹೊಂದಿದೆ. ಪಾಕ್‌ ಆಕ್ರಮಿತ ಕಾಶ್ಮೀರ ಹಿಂಪಡೆಯುವುದು ಹಾಗೂ ಉಗ್ರರ ಹಸ್ತಾಂತರದ ಕುರಿತಾಗಿ ಮಾತ್ರವೇ ಮಾತುಕತೆ ನಡೆಸಲಾಗುವುದು ಎಂದು ಅಮೆರಿಕಾಕ್ಕೆ ಭಾರತ ಸ್ಪಷ್ಟ ಸಂದೇಶ ನೀಡಿದೆ.

ಶನಿವಾರ ಕದನ ವಿರಾಮ ಘೋಷಣೆಯಾದ ಬಳಿಕ ಭಾರತ-ಪಾಕಿಸ್ತಾನದ ಯುದ್ಧದ ಆತಂಕ ದೂರವಾಗಿದೆ. ಆದಾಗ್ಯೂ ಗಡಿಯಲ್ಲಿ ಪಾಕ್‌ ಕದನ ವಿರಾಮ ಉಲ್ಲಂಘಿಸಿ ಗುಂಡಿನ ದಾಳಿ ನಡೆಸಿದೆ.

ಈ ನಡುವೆ ಅಮೆರಿಕಾ ಉಪಾಧ್ಯಕ್ಷ ಜೆ.ಡಿ ವ್ಯಾವ್ಸ್‌ ಜೊತೆ ಪ್ರಧಾನಿ ಮೋದಿ ಫೋನ್‌ ಮೂಲಕ ಮಾತುಕತೆ ನಡೆಸಿದ್ದು, ಭಾರತದ ಸ್ಪಷ್ಟತೆಯನ್ನು ಪ್ರತಿಪಾದಿಸಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.

ಈಗ ಮಾತನಾಡಲು ಬೇರೆ ಏನು ಉಳಿದಿಲ್ಲ. ಪಾಕ್‌ ಭಯೋತ್ಪಾದಕರನ್ನು ಹಸ್ತಾಂತರಿಸುವುದು ಹಾಗೂ ಪಾಕ್‌ ಆಕ್ರಮಿತ ಕಾಶ್ಮೀರವನ್ನು ಹಿಂಪಡೆಯುವುದರ ಬಗ್ಗೆ ಮಾತನಾಡಿದ್ರೆ ಮಾತ್ರ ನಾವು ಸಹ ಮಾತನಾಡುವುದು. ನಮಗೆ ಬೇರೆ ವಿಷಯದ ಉದ್ದೇಶವಲ್ಲ. ಜೊತೆಗೆ ನಮಗೆ ಯಾರ ಮಧ್ಯಸ್ಥಿಕೆಯನ್ನು ಬಯಸಲ್ಲ ಎಂದು ಸ್ಪಷ್ಟವಾಗಿ ಭಾರತ ಪ್ರತಿಪಾದಿಸಿದೆ.

ಈ ಮೂಲಕ ಭಯೋತ್ಪಾದನೆ ವಿರುದ್ಧ ಭಾರತ ರಾಜಿಯಾಗುವುದಿಲ್ಲ. ಪಾಕ್‌ ದಾಳಿ ಮಾಡಿದರೆ ತಕ್ಕಂತೆ ಪ್ರತೀದಾಳಿ ಮಾಡುತ್ತೇವೆ ಎಂಬ ಸ್ಷಷ್ಟ ಸಂದೇಶ ರವಾನಿಸಿದೆ.

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಎಲ್‌ಪಿಜಿ ಸಿಲಿಂಡರ್‌ ಸಿಗುತ್ತದೆ, ಜನರಲ್ಲಿ ಭೀತಿ ಬೇಡ : ಕೇಂದ್ರ

ಹೊಸದಿಲ್ಲಿ : ಮಧ್ಯಪ್ರಾಚ್ಯದ ಸಂಘರ್ಷದಿಂದ ಉಂಟಾಗಿರುವ ಎಲ್‌ಪಿಜಿ ಸಿಲಿಂಡರ್ ಕೊರತೆ ಬಗ್ಗೆ ಸಾರ್ವಜನಿಕರಲ್ಲಿ ಉದಿಸಿದ ಆತಂಕದ ನಡುವೆ, ಕೇಂದ್ರ ಸರ್ಕಾರವು…

1 hour ago

IPL 2026 | ಮಾ.28ರಿಂದ ಪಂದ್ಯ ಆರಂಭ, ಬೆಂಗಳೂರಿನಲ್ಲಿ ಉದ್ಘಾಟನೆ, ಹೀಗಿದೆ ವೇಳಾಪಟ್ಟಿ

ಬೆಂಗಳೂರು : ಬಹುನಿರೀಕ್ಷಿತ 2026ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟಿ-20 ಕ್ರಿಕೆಟ್ ಟೂರ್ನಿಯ ಮೊದಲ ಹಂತದ ವೇಳಾಪಟ್ಟಿಯನ್ನು…

2 hours ago

“ಸಂಶೋಧನೆಗೆ AI ನಿಂದಲ್ಲ, ಸ್ವಂತಿಕೆಯಿಂದ ಕೂಡಿರಲಿ” : ಕುಲಪತಿ ಶರಣಪ್ಪ ಹಲಸೆ ಸಲಹೆ

ಮೈಸೂರು : ಸಂಶೋಧನೆ ಮಾಡುವಾಗ ವಿದ್ಯಾರ್ಥಿಗಳು ತಮ್ಮ ಸಂಪೂರ್ಣ ಪರಿಶ್ರಮದಿಂದ ಸಂಶೋಧನೆಗಳನ್ನು ಸಿದ್ಧಪಡಿಸಬೇಕು, AI ತಂತ್ರಜ್ಞಾನದ ಕಡೆ ಮೊರೆಹೋಗುವುದನ್ನು ಕಡಿಮೆ…

2 hours ago

ಖಾತೆ ಮಾಡಿಕೊಡದ ಅಧಿಕಾರಿಗಳು : ರೈತನಿಂದ ವಿಷ ಸೇವನೆ ಯತ್ನ

ಸಾಲಿಗ್ರಾಮ : ತನ್ನ ಜಮೀನಿಗೆ ಸಂಬಂಧಿಸಿದ ಖಾತೆಯನ್ನು ಮಾಡಿಕೊಡದೆ ಸಾಲಿಗ್ರಾಮ ನಾಡಕಚೇರಿ ಅವರು ಸತಾಯಿಸುತ್ತಿದ್ದಾರೆ ಎಂದು ಮನನೊಂದು ಸಾಲಿಗ್ರಾಮದ ನಾಡ…

2 hours ago

ಹಡುಗುಗಳ ಮೇಲೆ ದಾಳಿ : ಇಬ್ಬರು ಭಾರತೀಯರ ಸಾವು

ಹೊಸದಿಲ್ಲಿ : ಪಶ್ಚಿಮ ಏಷ್ಯಾದ ಸಂಘರ್ಷ ಪೀಡಿತ ಸಮುದ್ರ ವಲಯದಲ್ಲಿ ವ್ಯಾಪಾರಿ ಹಡಗುಗಳ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಭಾರತೀಯರು…

3 hours ago

ಗುಂಡ್ಲುಪೇಟೆ | ಕತ್ತು ಕೂಯ್ದು ವ್ಯಕ್ತಿಯ ಬರ್ಬರ ಹತ್ಯೆ

ಗುಂಡ್ಲುಪೇಟೆ : ಪಟ್ಟಣದ ಹೊರವಲಯದ ವಿಜಯಪುರ ಅಮಾನಿ ಕೆರೆಯ ಬಳಿ ವ್ಯಕ್ತಿಯೊಬ್ಬ ಬರ್ಬರವಾಗಿ ಕೊಲೆಯಾಗಿರುವ ಘಟನೆ ನಡೆದಿದೆ. ತಾಲ್ಲೂಕಿನ ಮೂಖಹಳ್ಳಿ…

3 hours ago