ಹೊಸದಿಲ್ಲಿ : ಕಾಶ್ಮೀರದ ಬಗ್ಗೆ ಭಾರತ ಸ್ಪಷ್ಟ ನಿಲುವು ಹೊಂದಿದೆ. ಪಾಕ್ ಆಕ್ರಮಿತ ಕಾಶ್ಮೀರ ಹಿಂಪಡೆಯುವುದು ಹಾಗೂ ಉಗ್ರರ ಹಸ್ತಾಂತರದ ಕುರಿತಾಗಿ ಮಾತ್ರವೇ ಮಾತುಕತೆ ನಡೆಸಲಾಗುವುದು ಎಂದು ಅಮೆರಿಕಾಕ್ಕೆ ಭಾರತ ಸ್ಪಷ್ಟ ಸಂದೇಶ ನೀಡಿದೆ.
ಶನಿವಾರ ಕದನ ವಿರಾಮ ಘೋಷಣೆಯಾದ ಬಳಿಕ ಭಾರತ-ಪಾಕಿಸ್ತಾನದ ಯುದ್ಧದ ಆತಂಕ ದೂರವಾಗಿದೆ. ಆದಾಗ್ಯೂ ಗಡಿಯಲ್ಲಿ ಪಾಕ್ ಕದನ ವಿರಾಮ ಉಲ್ಲಂಘಿಸಿ ಗುಂಡಿನ ದಾಳಿ ನಡೆಸಿದೆ.
ಈ ನಡುವೆ ಅಮೆರಿಕಾ ಉಪಾಧ್ಯಕ್ಷ ಜೆ.ಡಿ ವ್ಯಾವ್ಸ್ ಜೊತೆ ಪ್ರಧಾನಿ ಮೋದಿ ಫೋನ್ ಮೂಲಕ ಮಾತುಕತೆ ನಡೆಸಿದ್ದು, ಭಾರತದ ಸ್ಪಷ್ಟತೆಯನ್ನು ಪ್ರತಿಪಾದಿಸಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.
ಈಗ ಮಾತನಾಡಲು ಬೇರೆ ಏನು ಉಳಿದಿಲ್ಲ. ಪಾಕ್ ಭಯೋತ್ಪಾದಕರನ್ನು ಹಸ್ತಾಂತರಿಸುವುದು ಹಾಗೂ ಪಾಕ್ ಆಕ್ರಮಿತ ಕಾಶ್ಮೀರವನ್ನು ಹಿಂಪಡೆಯುವುದರ ಬಗ್ಗೆ ಮಾತನಾಡಿದ್ರೆ ಮಾತ್ರ ನಾವು ಸಹ ಮಾತನಾಡುವುದು. ನಮಗೆ ಬೇರೆ ವಿಷಯದ ಉದ್ದೇಶವಲ್ಲ. ಜೊತೆಗೆ ನಮಗೆ ಯಾರ ಮಧ್ಯಸ್ಥಿಕೆಯನ್ನು ಬಯಸಲ್ಲ ಎಂದು ಸ್ಪಷ್ಟವಾಗಿ ಭಾರತ ಪ್ರತಿಪಾದಿಸಿದೆ.
ಈ ಮೂಲಕ ಭಯೋತ್ಪಾದನೆ ವಿರುದ್ಧ ಭಾರತ ರಾಜಿಯಾಗುವುದಿಲ್ಲ. ಪಾಕ್ ದಾಳಿ ಮಾಡಿದರೆ ತಕ್ಕಂತೆ ಪ್ರತೀದಾಳಿ ಮಾಡುತ್ತೇವೆ ಎಂಬ ಸ್ಷಷ್ಟ ಸಂದೇಶ ರವಾನಿಸಿದೆ.
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…
ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಸಾರ್ವಜನಿಕ ಸಂಸ್ಥೆಗಳಿಗೆ ಅತ್ಯಂತ ಮುಖ್ಯವಾದ ಪಾಠ ಯಾವುದೇ ನಾಗರಿಕನು ತನ್ನ…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ದೈಹಿಕ ನ್ಯೂನತೆ ನಡುವೆ ಆರ್ಥಿಕ ಪ್ರಗತಿಯ ಮೆಟ್ಟಿಲೇರಿದ ಮಹಿಳೆ ಹರ್ಯಾಣದ ಅಂಬಾಲಾದ ಹಿಮಾಂಶಿಕಾ ಶರ್ಮಾರಿಗೆ…
ಕೆ.ಬಿ.ರಮೇಶನಾಯಕ ರಾಜ್ಯ ಸರ್ಕಾರದ ಗಡುವಿನೊಳಗೆ ಪ್ರಕ್ರಿಯೆ ಮುಗಿಸಲು ಇಲಾಖೆ ಕಸರತ್ತು. ಮೈಸೂರು: ನಕಲಿ ಫಲಾನುಭವಿಗಳನ್ನು ಕೈಬಿಟ್ಟು ಪಾರದರ್ಶಕತೆ ಕಾಯ್ದುಕೊಳ್ಳಲು ಹಾಗೂ…