ಕದನ ವಿರಾಮ ಘೋಷಣೆ | ಅಮೆರಿಕಾ ಮಾತುಕತೆಗೆ ಭಾರತದ ಸ್ಪಷ್ಟ ಸಂದೇಶವೇನು?

ಹೊಸದಿಲ್ಲಿ : ಕಾಶ್ಮೀರದ ಬಗ್ಗೆ ಭಾರತ ಸ್ಪಷ್ಟ ನಿಲುವು ಹೊಂದಿದೆ. ಪಾಕ್‌ ಆಕ್ರಮಿತ ಕಾಶ್ಮೀರ ಹಿಂಪಡೆಯುವುದು ಹಾಗೂ ಉಗ್ರರ ಹಸ್ತಾಂತರದ ಕುರಿತಾಗಿ ಮಾತ್ರವೇ ಮಾತುಕತೆ ನಡೆಸಲಾಗುವುದು ಎಂದು ಅಮೆರಿಕಾಕ್ಕೆ ಭಾರತ ಸ್ಪಷ್ಟ ಸಂದೇಶ ನೀಡಿದೆ.

ಶನಿವಾರ ಕದನ ವಿರಾಮ ಘೋಷಣೆಯಾದ ಬಳಿಕ ಭಾರತ-ಪಾಕಿಸ್ತಾನದ ಯುದ್ಧದ ಆತಂಕ ದೂರವಾಗಿದೆ. ಆದಾಗ್ಯೂ ಗಡಿಯಲ್ಲಿ ಪಾಕ್‌ ಕದನ ವಿರಾಮ ಉಲ್ಲಂಘಿಸಿ ಗುಂಡಿನ ದಾಳಿ ನಡೆಸಿದೆ.

ಈ ನಡುವೆ ಅಮೆರಿಕಾ ಉಪಾಧ್ಯಕ್ಷ ಜೆ.ಡಿ ವ್ಯಾವ್ಸ್‌ ಜೊತೆ ಪ್ರಧಾನಿ ಮೋದಿ ಫೋನ್‌ ಮೂಲಕ ಮಾತುಕತೆ ನಡೆಸಿದ್ದು, ಭಾರತದ ಸ್ಪಷ್ಟತೆಯನ್ನು ಪ್ರತಿಪಾದಿಸಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.

ಈಗ ಮಾತನಾಡಲು ಬೇರೆ ಏನು ಉಳಿದಿಲ್ಲ. ಪಾಕ್‌ ಭಯೋತ್ಪಾದಕರನ್ನು ಹಸ್ತಾಂತರಿಸುವುದು ಹಾಗೂ ಪಾಕ್‌ ಆಕ್ರಮಿತ ಕಾಶ್ಮೀರವನ್ನು ಹಿಂಪಡೆಯುವುದರ ಬಗ್ಗೆ ಮಾತನಾಡಿದ್ರೆ ಮಾತ್ರ ನಾವು ಸಹ ಮಾತನಾಡುವುದು. ನಮಗೆ ಬೇರೆ ವಿಷಯದ ಉದ್ದೇಶವಲ್ಲ. ಜೊತೆಗೆ ನಮಗೆ ಯಾರ ಮಧ್ಯಸ್ಥಿಕೆಯನ್ನು ಬಯಸಲ್ಲ ಎಂದು ಸ್ಪಷ್ಟವಾಗಿ ಭಾರತ ಪ್ರತಿಪಾದಿಸಿದೆ.

ಈ ಮೂಲಕ ಭಯೋತ್ಪಾದನೆ ವಿರುದ್ಧ ಭಾರತ ರಾಜಿಯಾಗುವುದಿಲ್ಲ. ಪಾಕ್‌ ದಾಳಿ ಮಾಡಿದರೆ ತಕ್ಕಂತೆ ಪ್ರತೀದಾಳಿ ಮಾಡುತ್ತೇವೆ ಎಂಬ ಸ್ಷಷ್ಟ ಸಂದೇಶ ರವಾನಿಸಿದೆ.

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

3 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

3 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

3 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

3 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

3 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

3 hours ago