ಹೊಸದಿಲ್ಲಿ : ಕಾಶ್ಮೀರದ ಬಗ್ಗೆ ಭಾರತ ಸ್ಪಷ್ಟ ನಿಲುವು ಹೊಂದಿದೆ. ಪಾಕ್ ಆಕ್ರಮಿತ ಕಾಶ್ಮೀರ ಹಿಂಪಡೆಯುವುದು ಹಾಗೂ ಉಗ್ರರ ಹಸ್ತಾಂತರದ ಕುರಿತಾಗಿ ಮಾತ್ರವೇ ಮಾತುಕತೆ ನಡೆಸಲಾಗುವುದು ಎಂದು ಅಮೆರಿಕಾಕ್ಕೆ ಭಾರತ ಸ್ಪಷ್ಟ ಸಂದೇಶ ನೀಡಿದೆ.
ಶನಿವಾರ ಕದನ ವಿರಾಮ ಘೋಷಣೆಯಾದ ಬಳಿಕ ಭಾರತ-ಪಾಕಿಸ್ತಾನದ ಯುದ್ಧದ ಆತಂಕ ದೂರವಾಗಿದೆ. ಆದಾಗ್ಯೂ ಗಡಿಯಲ್ಲಿ ಪಾಕ್ ಕದನ ವಿರಾಮ ಉಲ್ಲಂಘಿಸಿ ಗುಂಡಿನ ದಾಳಿ ನಡೆಸಿದೆ.
ಈ ನಡುವೆ ಅಮೆರಿಕಾ ಉಪಾಧ್ಯಕ್ಷ ಜೆ.ಡಿ ವ್ಯಾವ್ಸ್ ಜೊತೆ ಪ್ರಧಾನಿ ಮೋದಿ ಫೋನ್ ಮೂಲಕ ಮಾತುಕತೆ ನಡೆಸಿದ್ದು, ಭಾರತದ ಸ್ಪಷ್ಟತೆಯನ್ನು ಪ್ರತಿಪಾದಿಸಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.
ಈಗ ಮಾತನಾಡಲು ಬೇರೆ ಏನು ಉಳಿದಿಲ್ಲ. ಪಾಕ್ ಭಯೋತ್ಪಾದಕರನ್ನು ಹಸ್ತಾಂತರಿಸುವುದು ಹಾಗೂ ಪಾಕ್ ಆಕ್ರಮಿತ ಕಾಶ್ಮೀರವನ್ನು ಹಿಂಪಡೆಯುವುದರ ಬಗ್ಗೆ ಮಾತನಾಡಿದ್ರೆ ಮಾತ್ರ ನಾವು ಸಹ ಮಾತನಾಡುವುದು. ನಮಗೆ ಬೇರೆ ವಿಷಯದ ಉದ್ದೇಶವಲ್ಲ. ಜೊತೆಗೆ ನಮಗೆ ಯಾರ ಮಧ್ಯಸ್ಥಿಕೆಯನ್ನು ಬಯಸಲ್ಲ ಎಂದು ಸ್ಪಷ್ಟವಾಗಿ ಭಾರತ ಪ್ರತಿಪಾದಿಸಿದೆ.
ಈ ಮೂಲಕ ಭಯೋತ್ಪಾದನೆ ವಿರುದ್ಧ ಭಾರತ ರಾಜಿಯಾಗುವುದಿಲ್ಲ. ಪಾಕ್ ದಾಳಿ ಮಾಡಿದರೆ ತಕ್ಕಂತೆ ಪ್ರತೀದಾಳಿ ಮಾಡುತ್ತೇವೆ ಎಂಬ ಸ್ಷಷ್ಟ ಸಂದೇಶ ರವಾನಿಸಿದೆ.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…