ನವದೆಹಲಿ: ಭಾರತ ಮತು ಪಾಕಿಸ್ತಾನದ ನಡುವೆ ಕದನ ವಿರಾಮ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಇಂದು ಉಭಯ ರಾಷ್ಟ್ರಗಳ ಸೇನಾ ಕಾರ್ಯಾಚರಣೆಗಳ ಮಹಾ ನಿರ್ದೇಶಕರ ಸಭೆ ನಡೆಯಲಿದೆ.
ಇಂದು ಮಧ್ಯಾಹ್ನ 12 ಗಂಟೆಗೆ ಸಭೆ ನಡೆಯಲಿದ್ದು, ಮಹತ್ವದ ಚರ್ಚೆಗಳಾಗುವ ಸಾಧ್ಯತೆಗಳಿವೆ. ಭಾರತ ಡಿಜಿಎಂಒ ಹಾಗೂ ಲೆಫ್ಟಿನೆಂಟ್ ಜನರಲ್, ಪಾಕ್ನ ಡಿಜಿಎಂಒ ಮೇಜರ್ ಜನರಲ್ ಸಭೆಯಲ್ಲಿ ಭಾಗಿಯಾಗಲಿದ್ದಾರೆ.
ಮೇ.10ರಂದು ಅಮೇರಿಕಾ ಮಧ್ಯಸ್ಥಿಕೆ ಮೂಲಕ ಭಾರತ-ಪಾಕಿಸ್ತಾನ ಕದನ ವಿರಾಮ ಘೋಷಣೆಗೆ ಒಪ್ಪಿಗೆ ಸೂಚಿಸಿದ್ದವು. ಆ ಬಳಿಕವೂ ಪಾಕ್ ಸೇನೆ ಮತ್ತೆ ಜಮ್ಮು-ಕಾಶ್ಮೀರದಲ್ಲಿ ಡ್ರೋನ್ ದಾಳಿ ನಡೆಸಿತ್ತು.
ಇದಕ್ಕೆ ಪ್ರತ್ಯುತ್ತರ ನೀಡಿದ್ದ ಭಾರತೀಯ ಸೇನೆ ಆಪರೇಷನ್ ಸಿಂಧೂರ ಕಾರ್ಯಾಚರಣೆ ಮುಂದುವರಿಸಿ ತಕ್ಕ ಉತ್ತರ ನೀಡಿತ್ತು. ಈ ಮಧ್ಯೆ ನಿನ್ನೆಯಿಂದ ಪಾಕ್ ದಾಳಿ ನಿಲ್ಲಿಸಿದ್ದು, ಇಂದು ಉಭಯ ದೇಶಗಳ ನಡುವಿನ ಮಾತುಕತೆ ನಡೆಯಲಿದೆ. ಇಂದಿನ ಮಾತುಕತೆ ಬಳಿಕವೇ ಭಾರತ ಮುಂದಿನ ನಡೆ ನಿರ್ಧರಿಸಲಿದೆ.
ಬೆಂಗಳೂರು : ನೆರೆಯ ತಮಿಳುನಾಡು ಮತ್ತು ಕೇರಳದಂತೆ ಕರ್ನಾಟಕದಲ್ಲೂ ಕಾರ್ಯಾಂಗ ಮತ್ತು ಶಾಸಕಾಂಗದ ನಡುವೆ ಸಂಘರ್ಷ ಏರ್ಪಡುವ ಲಕ್ಷಣಗಳು ಗೋಚರಿಸಿದ್ದು,…
ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹಕ್ಕೆ ಚಾಲನೆ ನೀಡಿದ ಜಿಲ್ಲಾ ಪೊಲೀಸ್ ಅಧಿಕ್ಷಕಿ ಡಾ.ವಿ.ಜೆ.ಶೋಭಾರಾಣಿ ಮಂಡ್ಯ : ಯುವಜನತೆ ರಸ್ತೆ ಸುರಕ್ಷತಾ…
ಮದ್ದೂರು : ತಾಲ್ಲೂಕಿನ ಕೊಕ್ಕರೆ ಬೆಳ್ಳೂರು ಗ್ರಾಮವನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸುವ ಚಿಂತನೆ ನಡೆದಿದ್ದು, ಮುಂದಿನ ದಿನಗಳಲ್ಲಿ ಅಭಿವೃದ್ಧಿಪಡಿಸಲಾಗುತ್ತದೆ ಎಂದು…
ಬೆಂಗಳೂರು : ರಾಜ್ಯದಲ್ಲಿ ಶೇ 75% ರಷ್ಟು ಸಣ್ಣ ಮತ್ತು ಅತೀ ಸಣ್ಣ ರೈತರಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು…
ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಹಾಗೂ ದ್ವಿಚಕ್ರ ವಾಹನದಲ್ಲಿ ತೆರಳುವುದಕ್ಕೆ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ. ಅರಣ್ಯ ಇಲಾಖೆ…
ಮೈಸೂರು : ಮುಡುಕುತೊರೆ ಭ್ರಮರಾಂಬ ಸಮೇತ ಶ್ರೀ ಮಲ್ಲಿಕಾರ್ಜುನಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಧಾರ್ಮಿಕ ಮತ್ತು ದತ್ತಿ ಇಲಾಖೆ ಹಾಗೂ…