ನವದೆಹಲಿ: ಭಾರತ ಮತು ಪಾಕಿಸ್ತಾನದ ನಡುವೆ ಕದನ ವಿರಾಮ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಇಂದು ಉಭಯ ರಾಷ್ಟ್ರಗಳ ಸೇನಾ ಕಾರ್ಯಾಚರಣೆಗಳ ಮಹಾ ನಿರ್ದೇಶಕರ ಸಭೆ ನಡೆಯಲಿದೆ.
ಇಂದು ಮಧ್ಯಾಹ್ನ 12 ಗಂಟೆಗೆ ಸಭೆ ನಡೆಯಲಿದ್ದು, ಮಹತ್ವದ ಚರ್ಚೆಗಳಾಗುವ ಸಾಧ್ಯತೆಗಳಿವೆ. ಭಾರತ ಡಿಜಿಎಂಒ ಹಾಗೂ ಲೆಫ್ಟಿನೆಂಟ್ ಜನರಲ್, ಪಾಕ್ನ ಡಿಜಿಎಂಒ ಮೇಜರ್ ಜನರಲ್ ಸಭೆಯಲ್ಲಿ ಭಾಗಿಯಾಗಲಿದ್ದಾರೆ.
ಮೇ.10ರಂದು ಅಮೇರಿಕಾ ಮಧ್ಯಸ್ಥಿಕೆ ಮೂಲಕ ಭಾರತ-ಪಾಕಿಸ್ತಾನ ಕದನ ವಿರಾಮ ಘೋಷಣೆಗೆ ಒಪ್ಪಿಗೆ ಸೂಚಿಸಿದ್ದವು. ಆ ಬಳಿಕವೂ ಪಾಕ್ ಸೇನೆ ಮತ್ತೆ ಜಮ್ಮು-ಕಾಶ್ಮೀರದಲ್ಲಿ ಡ್ರೋನ್ ದಾಳಿ ನಡೆಸಿತ್ತು.
ಇದಕ್ಕೆ ಪ್ರತ್ಯುತ್ತರ ನೀಡಿದ್ದ ಭಾರತೀಯ ಸೇನೆ ಆಪರೇಷನ್ ಸಿಂಧೂರ ಕಾರ್ಯಾಚರಣೆ ಮುಂದುವರಿಸಿ ತಕ್ಕ ಉತ್ತರ ನೀಡಿತ್ತು. ಈ ಮಧ್ಯೆ ನಿನ್ನೆಯಿಂದ ಪಾಕ್ ದಾಳಿ ನಿಲ್ಲಿಸಿದ್ದು, ಇಂದು ಉಭಯ ದೇಶಗಳ ನಡುವಿನ ಮಾತುಕತೆ ನಡೆಯಲಿದೆ. ಇಂದಿನ ಮಾತುಕತೆ ಬಳಿಕವೇ ಭಾರತ ಮುಂದಿನ ನಡೆ ನಿರ್ಧರಿಸಲಿದೆ.
ನವದೆಹಲಿ: ಭಾರತ-ರಷ್ಯಾ ಉಭಯ ದೇಶಗಳ ನಡುವೆ ನಡೆದ ದ್ವಿಪಕ್ಷೀಯ ಮಾತುಕತೆ ವೇಳೆ ಹಲವಾರು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ನವದೆಹಲಿಯ…
ಬೆಂಗಳೂರು: ನಾನು ನನ್ನ ವಾಚ್ ವಿಚಾರವಾಗಿ ಲೋಕಾಯುಕ್ತ ಸೇರಿದಂತೆ ಎಲ್ಲೆಲ್ಲಿ ಮಾಹಿತಿ ನೀಡಬೇಕೋ, ಎಲ್ಲಾ ನೀಡಿದ್ದೇನೆ. ನಾನು ಈ ವಿಚಾರದಲ್ಲಿ…
ಮೈಸೂರು: ಪಕ್ಷದಲ್ಲಿ ಎಲ್ಲರಿಗೂ ಸಿಎಂ ಆಗಬೇಕು ಎನ್ನುವ ಆಸೆ ಇದೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.…
ಮಂಗಳೂರು: ಧರ್ಮಸ್ಥಳದಲ್ಲಿ ಶವಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರನಾಗಿ ಬಂದ ಬಳಿಕ ಆರೋಪಿಯಾಗಿ ಜೈಲಿನಲ್ಲಿರುವ ಮಾಸ್ಕ್ ಮ್ಯಾನ್ ಚಿನ್ನಯ್ಯನಿಗೆ ಜಾಮೀನು ಸಿಕ್ಕಿ…
ಟಿ.ನರಸೀಪುರ: ಜಗದ್ಗುರು ಶ್ರೀ ಶಿವರಾತ್ರಿ ಡಾ.ರಾಜೇಂದ್ರ ಶ್ರೀಗಳ 110ನೇ ಜಯಂತೋತ್ಸವ ಹಾಗೂ ಶ್ರೀ ನಂಜುಂಡಸ್ವಾಮಗಳ 16ನೇ ಸಂಸ್ಮರಣೋತ್ಸವ ಕಾರ್ಯಕ್ರಮ ಹೊಸಮಠದ…
ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ರೆಪೊ ದರವನ್ನು ಶೇ. 5.5% ರಿಂದ 5.25ಕ್ಕೆ ಅಂದರೆ 25 ಬೇಸಿಸ್ ಪಾಯಿಂಟ್ಗಳಷ್ಟು…