ನವದೆಹಲಿ: ಭಾರತ ಮತು ಪಾಕಿಸ್ತಾನದ ನಡುವೆ ಕದನ ವಿರಾಮ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಇಂದು ಉಭಯ ರಾಷ್ಟ್ರಗಳ ಸೇನಾ ಕಾರ್ಯಾಚರಣೆಗಳ ಮಹಾ ನಿರ್ದೇಶಕರ ಸಭೆ ನಡೆಯಲಿದೆ.
ಇಂದು ಮಧ್ಯಾಹ್ನ 12 ಗಂಟೆಗೆ ಸಭೆ ನಡೆಯಲಿದ್ದು, ಮಹತ್ವದ ಚರ್ಚೆಗಳಾಗುವ ಸಾಧ್ಯತೆಗಳಿವೆ. ಭಾರತ ಡಿಜಿಎಂಒ ಹಾಗೂ ಲೆಫ್ಟಿನೆಂಟ್ ಜನರಲ್, ಪಾಕ್ನ ಡಿಜಿಎಂಒ ಮೇಜರ್ ಜನರಲ್ ಸಭೆಯಲ್ಲಿ ಭಾಗಿಯಾಗಲಿದ್ದಾರೆ.
ಮೇ.10ರಂದು ಅಮೇರಿಕಾ ಮಧ್ಯಸ್ಥಿಕೆ ಮೂಲಕ ಭಾರತ-ಪಾಕಿಸ್ತಾನ ಕದನ ವಿರಾಮ ಘೋಷಣೆಗೆ ಒಪ್ಪಿಗೆ ಸೂಚಿಸಿದ್ದವು. ಆ ಬಳಿಕವೂ ಪಾಕ್ ಸೇನೆ ಮತ್ತೆ ಜಮ್ಮು-ಕಾಶ್ಮೀರದಲ್ಲಿ ಡ್ರೋನ್ ದಾಳಿ ನಡೆಸಿತ್ತು.
ಇದಕ್ಕೆ ಪ್ರತ್ಯುತ್ತರ ನೀಡಿದ್ದ ಭಾರತೀಯ ಸೇನೆ ಆಪರೇಷನ್ ಸಿಂಧೂರ ಕಾರ್ಯಾಚರಣೆ ಮುಂದುವರಿಸಿ ತಕ್ಕ ಉತ್ತರ ನೀಡಿತ್ತು. ಈ ಮಧ್ಯೆ ನಿನ್ನೆಯಿಂದ ಪಾಕ್ ದಾಳಿ ನಿಲ್ಲಿಸಿದ್ದು, ಇಂದು ಉಭಯ ದೇಶಗಳ ನಡುವಿನ ಮಾತುಕತೆ ನಡೆಯಲಿದೆ. ಇಂದಿನ ಮಾತುಕತೆ ಬಳಿಕವೇ ಭಾರತ ಮುಂದಿನ ನಡೆ ನಿರ್ಧರಿಸಲಿದೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…