ದೇಶ- ವಿದೇಶ

ಅ.20, 21 ರಂದು ಸಿಇಸಿ ಸಭೆ: ರಾಜ್ಯದಿಂದ ಕೆ.ಜೆ.ಜಾರ್ಜ್ ಭಾಗಿ

ಬೆಂಗಳೂರು: ಎರಡು ರಾಜ್ಯಗಳು ಮತ್ತು ವಿವಿಧ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಸಂಬಂಧಿಸಿದಂತೆ ಅಭ್ಯರ್ಥಿಗಳ ಆಯ್ಕೆ ಮತ್ತು ಚುನಾವಣಾ ಸಿದ್ಧತೆಗಳ ಕುರಿತು ಚರ್ಚಿಸಲು ಅ. 20 ಮತ್ತು 21ರಂದು ದೆಹಲಿಯಲ್ಲಿ ಕಾಂಗ್ರೆಸ್ ಚುನಾವಣಾ ಸಮಿತಿ ಸಭೆ ನಡೆಯಲಿದ್ದು, ರಾಜ್ಯದಿಂದ ಸಮಿತಿ ಸದಸ್ಯರೂ ಆಗಿರುವ ಇಂಧನ ಸಚಿವ ಕೆ.ಜೆ.ಜಾರ್ಜ್ ಪಾಲ್ಗೊಳ್ಳಲಿದ್ದಾರೆ.

ಮಹಾರಾಷ್ಟ್ರದಲ್ಲಿ ನ. 20ರಂದು ಒಂದೇ ಹಂತದಲ್ಲಿ ಮತ್ತು ಜಾರ್ಖಂಡ್ ನಲ್ಲಿ ನ. 13 ಮತ್ತು 20ರಂದು 2 ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಇದಲ್ಲದೆ, ನ. 13ರಂದು ಕರ್ನಾಟಕದ ಮೂರು ಕ್ಷೇತ್ರಗಳು ಸೇರಿದಂತೆ ವಿವಿಧ ರಾಜ್ಯಗಳ ವಿಧಾನಸಭಾ ಕ್ಷೇತ್ರಗಳಲ್ಲಿ ಉಪ ಚುನಾವಣೆ ನಡೆಯಲಿದೆ. ಈ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಆಯ್ಕೆ ಮತ್ತು ಚುನಾವಣಾ ಸಿದ್ಧತೆ ಕುರಿತಂತೆ ಸಭೆಯಲ್ಲಿ ಮೊದಲ ಹಂತದ ಸಮಾಲೋಚನೆ ನಡೆಯಲಿದೆ. ಕಾಂಗ್ರೆಸ್ ಚುನಾವಣಾ ಸಮಿತಿಯಲ್ಲಿ ಕರ್ನಾಟಕದಿಂದ ಸಚಿವ ಕೆ.ಜೆ.ಜಾರ್ಜ್ ಮಾತ್ರ ಸದಸ್ಯರಾಗಿದ್ದಾರೆ.

ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಇಂಡಿಯಾ ಕೂಟದಲ್ಲಿ ಕಣಕ್ಕಿಳಿಯುತ್ತಿದ್ದು, ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಹಾಗೂ ಬಿಜೆಪಿ ಮೈತ್ರಿ ಸರ್ಕಾರವನ್ನು ಕೆಳಗಿಳಿಸಿ ಅಧಿಕಾರಕ್ಕೆ ಬರಲು ಪ್ರಯತ್ನಿಸುತ್ತಿದೆ. ಅದೇ ರೀತಿ ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿರುವುದರಿಂದ ರಾಜ್ಯದ ಮೂರು ಕ್ಷೇತ್ರಗಳಲ್ಲಿ ಗೆಲ್ಲುವುದು ಕಾಂಗ್ರೆಸ್ ಪಾಲಿಗೆ ಪ್ರತಿಷ್ಠೆಯ ವಿಷಯವಾಗಿದೆ. ಹೀಗಾಗಿ ಎರಡು ದಿನಗಳ ಕಾಲ ನಡೆಯುವ ಸಭೆ ಅತ್ಯಂತ ಮಹತ್ವ ಪಡೆದಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಾದಕ ವಸ್ತು ಪತ್ತೆ ; ನಾಲ್ವರು ಸಿಸಿಬಿ ವಶಕ್ಕೆ

ಮೈಸೂರು : ಮಾದಕ ವ್ಯಸನ ಮುಕ್ತ ಮೈಸೂರು ವಿಮುಕ್ತಿ ಅಭಿಯಾನದ ಮುಂದುವರಿದ ಕಾರ್ಯಾಚರಣೆಯಲ್ಲಿ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿ ಸುಮಾರು…

5 hours ago

ಏಳು ವಿದೇಶಿಯರ ಬಂಧಿಸಿದ ಎನ್‌ಐಎ

ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…

7 hours ago

ಮೈಸೂರು | ಆಕಸ್ಮಿಕ ಬೆಂಕಿಗೆ ವ್ಯಕ್ತಿ ಸಜೀವ ದಹನ

ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್‌ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…

7 hours ago

ಎಸ್‌ಎಸ್‌ಎಲ್‌ಸಿ ಪರೀಕ್ಷೆ : ವಿದ್ಯಾರ್ಥಿಗಳಿಗೆ ಶುಭಕೋರಿದ ಸಿಎಂ

ಬೆಂಗಳೂರು : 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…

7 hours ago

ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಸಂಭ್ರಮ : ಮಾದಪ್ಪನಿಗೆ ಎಣ್ಣೆಮಜ್ಜನ

ಹನೂರು : ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಹಿನ್ನೆಲೆ ಮಂಗಳವಾರ…

8 hours ago

ಕುಡಿಯುವ ನೀರು ಸಮಸ್ಯೆಗೆ ಸರ್ಕಾರದ ಕ್ರಮವೇನು? : ಅಧಿವೇಶನದಲ್ಲಿ ಎಂಎಲ್‌ಎ ಮಂಜುನಾಥ್‌ ಪ್ರಶ್ನೆ

ಹನೂರು : ತಾಲೂಕು ವ್ಯಾಪ್ತಿಯ ಒಂಬತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಶಾಶ್ವತ ಪರಿಹಾರಕ್ಕೆ ಸರ್ಕಾರ…

8 hours ago