ಹೊಸದಿಲ್ಲಿ : ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದ ಶಿಲ್ಪಿ ರಾಮ್ ಸುತಾರ್ ಗುರುವಾರ ( 100) ವಿಧಿವಶರಾಗಿದ್ದಾರೆ. ಮಹಾರಾಷ್ಟ್ರದ ಧುಲೆ ಜಿಲ್ಲೆಯ ಗೊಂಡುರ್ ಗ್ರಾಮದಲ್ಲಿ 1925ರ ಫೆ.19 ರಂದು ಜನಿಸಿದ್ದ ಅವರು ವಯೋ ಸಹಜ ಕಾಯಿಲೆಯಿಂದ ಡಿ.18ರಂದು ಬೆಳಿಗ್ಗೆ ನೋಯ್ಡಾ ನಿವಾಸದಲ್ಲಿ ಕೊನೆಯುಸಿರೆದಿರುವಾಗಿ ಮೂಲಗಳು ತಿಳಿಸಿವೆ.
ಗುಜರಾತ್ನಲ್ಲಿ ವಿಶ್ವದ ಅತಿ ಎತ್ತರ ಪ್ರತಿಮೆ, ಏಕತಾ ಪ್ರತಿಮೆ ಮತ್ತು ಬೆಂಗಳೂರಿನ ಕೆಂಪೆಗೌಡರ 108 ಅಡಿ ಎತ್ತರದ ಬೃಹತ್ ಪ್ರತಿಮೆ ಕೆತ್ತಿದ್ದು, ಇವರ ಶೈಲಿಗಳು ಫ್ರೆಂಚ್ ಮತ್ತು ಇಟಾಲಿಯಾನ್ ಶಿಲ್ಪಿಗಳಿಗೆ ಹೋಲಿಸಲಾಗುತ್ತದೆ. ಹೀಗೆ ಸುತಾರ್ ರವರು ತಮ್ಮ ಸುಧೀರ್ಘ ವೃತ್ತಿ ಜೀವನದಲ್ಲಿ, 150ಕ್ಕೂ ಹೆಚ್ಚು ಭಾರತೀಯ ನಗರಗಳಲ್ಲಿ 350 ಕ್ಕೂ ಹೆಚ್ಚು ಪ್ರತಿಮೆಗಳನ್ನು ವಿನ್ಯಾಸಗೊಳಿಸಿರುವ ಹೆಗ್ಗಳಿಕೆ ಇವರದ್ದಾಗಿದೆ.
ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತ ಶ್ರೀರಾಮ್ ವಿ. ಸುತಾರ್ ಅವರು ದೇಶದ ದಂತಶಿಲ್ಪಿಯಾಗಿದ್ದರು. ಅವರ ಈ ನಿಧನವು ತೀವ್ರ ದುಃಖವನ್ನು ತಂದಿದೆ. ಅವರ ಶಿಲ್ಪಕಲೆ , ವಿನ್ಯಾಸಗಳು ನಿಜಕ್ಕೂ ನಮಗೆಲ್ಲಾ ಸ್ಪೂರ್ತಿಯನ್ನು ತಂದುಕೊಟ್ಟಿದೆ ಎಂದು ಶಿಲ್ಪಿಯೋಗಿ ಅರುಣ್ ಯೋಗಿರಾಜ್ ಟ್ವೀಟ್ ಮೂಲಕ ಸಂತಾಪವನ್ನು ವ್ಯಕ್ತಪಡಿಸಿದ್ದಾರೆ.
ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…
ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…
ವೈದ್ಯರು ಮೊಬೈಲ್ ಟಾರ್ಚ್ ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…
ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…