ನವದೆಹಲಿ: ದೆಹಲಿಯ ಮುಗ್ಧ ಮಕ್ಕಳನ್ನು ಎಎಪಿ ತಮ್ಮ ರಾಜಕೀಯಕ್ಕಾಗಿ ಬಳಸಿಕೊಂಡು ಭಾರತೀಯ ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಉಲ್ಲಂಘಿಸಿದೆ ಎಂದು ದೆಹಲಿಯ ಮಾಜಿ ಸಿಎಂ ಅರವಿಂದ್ ಕ್ರೇಜಿವಾಲ್ ವಿರುದ್ಧ ಕೇಂದ್ರ ಬಿಜೆಪಿ ವಾಗ್ದಾಳಿ ನಡೆಸಿದೆ.
ದೆಹಲಿ ಚುನಾವಣೆಯೂ 2025ರ ಫೆಬ್ರವರಿ ತಿಂಗಳಿನಲ್ಲಿ ನಡೆಯಲಿದ್ದು, ಈ ವಿಧಾನಸಭೆ ಚುನಾವಣೆಯ ಸಂಬಂಧ ಎಎಪಿ ಬಗ್ಗೆ ಮಕ್ಕಳು ಹೇಳಿರುವ ವೀಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಮಾಜಿ ಸಿಎಂ ಅರವಿಂದ್ ಕ್ರೇಜಿವಾಲ್ ಹಂಚಿಕೊಂಡಿರುವ ಬಗ್ಗೆ ಬಿಜೆಪಿ ಕಿಡಿಕಾರಿದೆ.
ಈ ಕುರಿತು ಜೆಪಿ ನಾಯಕ ಗೌರವ್ ಭಾಟಿಯಾ ಪ್ರತಿಕ್ರಿಯೆ ನೀಡಿದ್ದು, ಕೇಜ್ರಿವಾಲ್ ಅವರ ಈ ಪೋಸ್ಟ್ಗೆ ಬಿಜೆಪಿ ಭಾರೀ ವಿರೋಧ ವ್ಯಕ್ತಪಡಿಸಿದೆ. ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ ನಿಯಮಗಳ ಪ್ರಕಾರ ಮಕ್ಕಳ ಹೇಳಿಕೆಗಳು, ಅವರ ಚಟುವಟಿಕೆಗಳನ್ನು ಚುನಾವಣೆಗೆ ಬಳಸಿಕೊಳ್ಳಬಾರದು. ಈ ತರಹ ಮಕ್ಕಳನ್ನು ಬಳಸಿಕೊಂಡರೆ ಬಾಲಾಪರಾಧಿ ಕಾಯಿದೆ 2015ರ ಉಲ್ಲಂಘನೆಯಾಗುತ್ತದೆ. ಇಷ್ಟೆಲ್ಲಾ ಆದರೂ ಇದುವರೆಗೂ ಅರವಿಂದ್ ಕೇಜ್ರಿವಾಲ್ ಹಾಗೂ ಅತಿಶಿ ಮಕ್ಕಳ ಹೇಳಿಕೆಯ ಪೋಸ್ಟ್ಗಳನ್ನು ತೆಗೆದಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…