ದೇಶ- ವಿದೇಶ

ರಾಜಕಾರಣಕ್ಕಾಗಿ ಮಕ್ಕಳ ಬಳಕೆ: ಅರವಿಂದ್‌ ಕ್ರೇಜಿವಾಲ್‌ ವಿರುದ್ಧ ಬಿಜೆಪಿ ವಾಗ್ದಾಳಿ

ನವದೆಹಲಿ: ದೆಹಲಿಯ ಮುಗ್ಧ ಮಕ್ಕಳನ್ನು ಎಎಪಿ ತಮ್ಮ ರಾಜಕೀಯಕ್ಕಾಗಿ ಬಳಸಿಕೊಂಡು ಭಾರತೀಯ ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಉಲ್ಲಂಘಿಸಿದೆ ಎಂದು ದೆಹಲಿಯ ಮಾಜಿ ಸಿಎಂ ಅರವಿಂದ್‌ ಕ್ರೇಜಿವಾಲ್‌ ವಿರುದ್ಧ ಕೇಂದ್ರ ಬಿಜೆಪಿ ವಾಗ್ದಾಳಿ ನಡೆಸಿದೆ.

ದೆಹಲಿ ಚುನಾವಣೆಯೂ 2025ರ ಫೆಬ್ರವರಿ ತಿಂಗಳಿನಲ್ಲಿ ನಡೆಯಲಿದ್ದು, ಈ ವಿಧಾನಸಭೆ ಚುನಾವಣೆಯ ಸಂಬಂಧ ಎಎಪಿ ಬಗ್ಗೆ ಮಕ್ಕಳು ಹೇಳಿರುವ ವೀಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಮಾಜಿ ಸಿಎಂ ಅರವಿಂದ್‌ ಕ್ರೇಜಿವಾಲ್‌ ಹಂಚಿಕೊಂಡಿರುವ ಬಗ್ಗೆ ಬಿಜೆಪಿ ಕಿಡಿಕಾರಿದೆ.

ಈ ಕುರಿತು ಜೆಪಿ ನಾಯಕ ಗೌರವ್‌ ಭಾಟಿಯಾ ಪ್ರತಿಕ್ರಿಯೆ ನೀಡಿದ್ದು, ಕೇಜ್ರಿವಾಲ್‌ ಅವರ ಈ ಪೋಸ್ಟ್‌ಗೆ ಬಿಜೆಪಿ ಭಾರೀ ವಿರೋಧ ವ್ಯಕ್ತಪಡಿಸಿದೆ. ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ ನಿಯಮಗಳ ಪ್ರಕಾರ ಮಕ್ಕಳ ಹೇಳಿಕೆಗಳು, ಅವರ ಚಟುವಟಿಕೆಗಳನ್ನು ಚುನಾವಣೆಗೆ ಬಳಸಿಕೊಳ್ಳಬಾರದು. ಈ ತರಹ ಮಕ್ಕಳನ್ನು ಬಳಸಿಕೊಂಡರೆ ಬಾಲಾಪರಾಧಿ ಕಾಯಿದೆ 2015ರ ಉಲ್ಲಂಘನೆಯಾಗುತ್ತದೆ. ಇಷ್ಟೆಲ್ಲಾ ಆದರೂ ಇದುವರೆಗೂ ಅರವಿಂದ್‌ ಕೇಜ್ರಿವಾಲ್‌ ಹಾಗೂ ಅತಿಶಿ ಮಕ್ಕಳ ಹೇಳಿಕೆಯ ಪೋಸ್ಟ್‌ಗಳನ್ನು ತೆಗೆದಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

11 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

11 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

11 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

11 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

11 hours ago