ನವದೆಹಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ನಲ್ಲಿ ಎಲ್ಲಾ ಸಮುದಾಯಕ್ಕೂ ನ್ಯಾಯ ಸಿಕ್ಕಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಂತಸ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಬಜೆಟ್ ಬಗ್ಗೆ ದೆಹಲಿಯಲ್ಲಿ ಪ್ರತಿಕ್ರಿಯೆ ನೀಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು, ಯುವಕರು, ರೈತರು, ಮಹಿಳಾ ಸಬಲೀಕರಣಕ್ಕೆ ಕೇಂದ್ರ ಸರ್ಕಾರ ಬದ್ಧವಾಗಿದೆ.
ಮೂರನೇ ಬಾರಿಯೂ ಮೋದಿಯವರು ಪ್ರಧಾನಿಯಾಗಿರುವುದಕ್ಕೆ ದೇಶ ಮಾತ್ರವಲ್ಲದೇ ವಿದೇಶಗಳಲ್ಲೂ ಪ್ರಶಂಸೆ ವ್ಯಕ್ತವಾಗಿದೆ. ನಾವು 10 ವರ್ಷಗಳ ಕಾಲ ಯಶಸ್ವಿ ಆಡಳಿತ ನೀಡಿದ್ದೇವೆ.
ದೇಶದಲ್ಲಿ ನಿರುದ್ಯೋಗ ನಿವಾರಣೆಗೆ ಕ್ರಮ ಕೈಗೊಳ್ಳಲಾಗಿದೆ. ಬಜೆಟ್ನಲ್ಲಿ ಎಲ್ಲಾ ಸಮುದಾಯಕ್ಕೂ ನ್ಯಾಯ ಒದಗಿರುವ ಕೆಲಸ ಮಾಡಿದ್ದೇವೆ. ಈ ಬಜೆಟ್ನಲ್ಲಿ ಸಾಮಾಜಿಕ ನ್ಯಾಯಕ್ಕೆ ಒತ್ತು ಕೊಡಲಾಗಿದೆ ಎಂದರು.
ಬಡತನದ ವಿರುದ್ಧ ಸರ್ಕಾರ ಪ್ರಬಲವಾಗಿ ಹೋರಾಟ ಮಾಡುತ್ತಿದೆ. ಇನ್ನು ದೇಶದ ಆರ್ಥಿಕತೆ ವೇಗದ ಗತಿಯಲ್ಲಿ ಸಾಗುತ್ತಿದ್ದು, ಹಣದುಬ್ಬರ ನಿಯಂತ್ರಿಸಲು ಸರ್ಕಾರ ನಿರಂತರ ಪ್ರಯತ್ನ ಮಾಡುತ್ತಿದೆ.
ದೇಶದ 20 ಕಡೆ ರೈಲ್ವೆ ಯೋಜನೆ ಕಾಮಗಾರಿಗಳು ಪ್ರಗತಿಯಲ್ಲಿವೆ. ಕೃಷಿ, ಕೈಗಾರಿಕೆ ಹಾಗೂ ಗ್ರಾಮೀಣಾಭಿವೃದ್ಧಿಗೆ ಹೆಚ್ಚು ಆದ್ಯತೆ ನೀಡಲಾಗಿದೆ. ಬಡವರಿಗೆ ಮನೆಗಳನ್ನು ಕೂಡ ಹಂಚಲಾಗುತ್ತಿದೆ ಎಂದು ಕೇಂದ್ರ ಬಜೆಟ್ ಪರ ಬ್ಯಾಟ್ ಮಾಡಿದರು.
ಇನ್ನು ಮುಂದುವರಿದು ಮಾತನಾಡಿದ ಪ್ರಹ್ಲಾದ್ ಜೋಶಿ ಅವರು, ಬಜೆಟ್ ಬಗ್ಗೆ ವಿಪಕ್ಷಗಳು ಇಲ್ಲಸಲ್ಲದ ಆರೋಪ ಮಾಡ್ತಿದ್ದಾರೆ. ಈ ಬಜೆಟ್ ಜನಸಾಮಾನ್ಯರಿಗೆ ಪೂರಕವಾದ ಬಜೆಟ್ ಆಗಿದೆ. ಅವರ ಆರೋಪಗಳಲ್ಲಿ ಯಾವುದೇ ಉರುಳಿಲ್ಲ ಎಂದು ವಿಪಕ್ಷಗಳ ವಿರುದ್ಧ ಕಿಡಿಕಾರಿದರು.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…