ನವದೆಹಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸಮರ್ಥನೆ ನೀಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಮೂರನೇ ಅವಧಿಯ ಕೇಂದ್ರ ಸರ್ಕಾರದ ಮೊದಲ ಬಜೆಟ್ ಇಂದು ಮಂಡನೆಯಾಗಿದ್ದು, ಹಲವು ವರ್ಗಗಳಿಗೆ ಬಂಪರ್ ಆಫರ್ ನೀಡಲಾಗಿದೆ.
ಕೇಂದ್ರ ಬಜೆಟ್ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯೆ ನೀಡಿದ್ದು, ಬಜೆಟ್ನಿಂದ ಶಿಕ್ಷಣ, ಕೌಶಲ್ಯಕ್ಕೆ ಹೊಸ ಮಾರ್ಗ ಸಿಗಲಿದ್ದು, ಯುವಕರಿಗೆ ಉತ್ತಮ ಅವಕಾಶ ನೀಡಲಿದೆ. ಈ ಬಜೆಟ್ ಮಧ್ಯಮ ವರ್ಗದವರಿಗೆ ಹೊಸ ಶಕ್ತಿ ನೀಡುವ ಬಜೆಟ್ ಆಗಿದ್ದು, ಇದು ಮುಂದಿನ ದಿನಗಳಲ್ಲಿ ಹೊಸ ಅವಕಾಶಗಳನ್ನು ಸೃಷ್ಟಿಸಲಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಹಾಡಿ ಹೊಗಳಿದರು.
ಇನ್ನೂ ಈ ಬಾರಿಯ ಬಜೆಟ್ನಿಂದ ಆರ್ಥಿಕತೆಗೆ ಹೊಸ ಗತಿ ಸಿಗಲಿದ್ದು, ಯುವಕರ ಶಿಕ್ಷಣಕ್ಕೆ ಉತ್ತಮ ಅವಕಾಶ ಸಿಗಲಿದೆ. ಬಜೆಟ್ನಲ್ಲಿ ಎಲ್ಲಾ ಕ್ಷೇತ್ರಗಳಿಗೂ ಒತ್ತು ನೀಡಲಾಗಿದ್ದು, ಮುದ್ರಾ ಯೋಜನೆ ಸಾಲದ ಮಿತಿ ಹೆಚ್ಚಳದ ಜೊತೆ ಜೊತೆಗೆ ಸಣ್ಣ, ಮಧ್ಯಮ ಕೈಗಾರಿಕೆಗಳಿಗೆ ಉತ್ತೇಜನ ನೀಡಲಾಗಿದೆ ಎಂದು ಹೇಳಿದರು.
ಈ ಬಜೆಟ್ನಿಂದ ಮಹಿಳೆಯರಿಗೆ ಸ್ವಯಂ ಉದ್ಯೋಗದ ಬಲ ಸಿಕ್ಕಿದಂತಾಗಿದ್ದು, ಮಹಿಳೆಯರನ್ನು ಆರ್ಥಿಕ ಭಾಗೀದಾರರನ್ನಾಗಿಸುವ ಯೋಜನೆಯಿದೆ. ಪ್ರತೀ ಮನೆ, ಪ್ರತೀ ಹಳ್ಳಿ, ನಗರದಲ್ಲಿಯೂ ಉದ್ಯಮಿಗಳು ಸೃಷ್ಟಿಯಾಗಬೇಕು ಎಂದು ಕರೆ ನೀಡಿದರು.
ಇನ್ನೂ ಬಜೆಟ್ ಬಗ್ಗೆ ಮುಂದುವರಿದು ಮಾತನಾಡಿದ ಅವರು, ತರಕಾರಿ ಉತ್ಪಾದನಾ ಸೆಕ್ಟರ್ಗಳ ನಿರ್ಮಾಣಕ್ಕೆ ಹೆಚ್ಚು ಒತ್ತು ನೀಡಲಾಗಿದ್ದು, ಬಜೆಟ್ನಲ್ಲಿ ಹೆದ್ದಾರಿ, ವಿದ್ಯುತ್, ಜಲಮಾರ್ಗ ಅಭಿವೃದ್ದಿಯ ಬಗ್ಗೆ ನಿರ್ಧಾರ ಮಾಡಿದ್ದೇವೆ ಎಂದು ಸಂತಸ ವ್ಯಕ್ತಪಡಿಸಿದರು.
ಇನ್ನೂ ಭಾರತವನ್ನು ಇಡೀ ಜಗತ್ತೇ ತಿರುಗಿ ನೋಡುತ್ತಿದೆ. ಇಂದಿನ ಬಜೆಟ್ ಹೊಸ ಅವಕಾಶಗಳನ್ನು ಹೊತ್ತು ತಂದಿದೆ ಎಂದು ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ ಬಗ್ಗೆ ಹಾಡಿ ಹೊಗಳಿದರು.
ಮಂಡ್ಯ : ಫೆ.21, 22ರಂದು ನಡೆಯಲಿರುವ ಬೂದನೂರು ಉತ್ಸವ-2026ರ ಪ್ರಯುಕ್ತ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ ಮೂರು ದಿನಗಳ ಹೆಲಿ ಟೂರಿಸಂ…
ಮಂಡ್ಯ : ಕಳೆದ 2024ರಲ್ಲಿ ಬೂದನೂರು ಉತ್ಸವವನ್ನು ವಿಜೃಂಭಣೆಯಿಂದ ನಡೆಸಲಾಗಿತ್ತು. ಸದರಿ ವರ್ಷವೂ ಸಹ ಅದ್ಧೂರಿಯಾಗಿ ಉತ್ಸವವನ್ನು ಆಚರಿಸಲಾಗುವುದು ಎಂದು…
ಮೈಸೂರು : ಚಲನಚಿತ್ರಗಳು, ಧಾರಾವಾಹಿಗಳು, ಟಿವಿ ಕಾರ್ಯಕ್ರಮಗಳು, ಜಾಹೀರಾತುಗಳು ಹಾಗೂ ಇತರ ವಾಣಿಜ್ಯ ಶ್ರವಣ-ದೃಶ್ಯ ಮಾಧ್ಯಮಗಳಲ್ಲಿ ಮಕ್ಕಳು (ಬಾಲ ಕಲಾವಿದರು)…
ಬೆಂಗಳೂರು : 2026-31ನೇ ಸಾಲಿನ ಗ್ರಾಮ ಪಂಚಾಯ್ತಿಗಳ ಚುನಾವಣೆಗೆ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಗ್ರಾಮೀಣಾಭಿವೃದ್ಧಿ ಹಾಗೂ…
ಬೆಂಗಳೂರು : ಹಳ್ಳಿಯಿಂದ ದಿಲ್ಲಿಯೇ ಹೊರತು, ದಿಲ್ಲಿಯಿಂದ ಹಳ್ಳಿ ಅಲ್ಲ ಎಂದು ಪ್ರತಿಪಾದಿಸಿದ ಮಹಾತ್ಮಾ ಗಾಂಧೀಜಿಯವರು ಗ್ರಾಮ ಸ್ವರಾಜ್ಯದ ಕಲ್ಪನೆಗೆ…
ಕೊಳ್ಳೇಗಾಲ : ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದಲ್ಲಿ ಮದುವೆಯ ಆರತಕ್ಷತೆಗೆ ತೆರಳುತ್ತಿದ್ದ ವರನ ಮೇಲೆ ದುಷ್ಕರ್ಮಿಗಳು ಚಾಕುವಿನಿಂದ ಏಕಾಏಕಿ ದಾಳಿ…