ದೇಶ- ವಿದೇಶ

ಕೇಂದ್ರ ಬಜೆಟ್‌ ಸಮರ್ಥಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಮಂಡಿಸಿದ ಬಜೆಟ್‌ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸಮರ್ಥನೆ ನೀಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಮೂರನೇ ಅವಧಿಯ ಕೇಂದ್ರ ಸರ್ಕಾರದ ಮೊದಲ ಬಜೆಟ್‌ ಇಂದು ಮಂಡನೆಯಾಗಿದ್ದು, ಹಲವು ವರ್ಗಗಳಿಗೆ ಬಂಪರ್‌ ಆಫರ್‌ ನೀಡಲಾಗಿದೆ.

ಕೇಂದ್ರ ಬಜೆಟ್‌ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯೆ ನೀಡಿದ್ದು, ಬಜೆಟ್‌ನಿಂದ ಶಿಕ್ಷಣ, ಕೌಶಲ್ಯಕ್ಕೆ ಹೊಸ ಮಾರ್ಗ ಸಿಗಲಿದ್ದು, ಯುವಕರಿಗೆ ಉತ್ತಮ ಅವಕಾಶ ನೀಡಲಿದೆ. ಈ ಬಜೆಟ್‌ ಮಧ್ಯಮ ವರ್ಗದವರಿಗೆ ಹೊಸ ಶಕ್ತಿ ನೀಡುವ ಬಜೆಟ್‌ ಆಗಿದ್ದು, ಇದು ಮುಂದಿನ ದಿನಗಳಲ್ಲಿ ಹೊಸ ಅವಕಾಶಗಳನ್ನು ಸೃಷ್ಟಿಸಲಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರನ್ನು ಹಾಡಿ ಹೊಗಳಿದರು.

ಇನ್ನೂ ಈ ಬಾರಿಯ ಬಜೆಟ್‌ನಿಂದ ಆರ್ಥಿಕತೆಗೆ ಹೊಸ ಗತಿ ಸಿಗಲಿದ್ದು, ಯುವಕರ ಶಿಕ್ಷಣಕ್ಕೆ ಉತ್ತಮ ಅವಕಾಶ ಸಿಗಲಿದೆ. ಬಜೆಟ್‌ನಲ್ಲಿ ಎಲ್ಲಾ ಕ್ಷೇತ್ರಗಳಿಗೂ ಒತ್ತು ನೀಡಲಾಗಿದ್ದು, ಮುದ್ರಾ ಯೋಜನೆ ಸಾಲದ ಮಿತಿ ಹೆಚ್ಚಳದ ಜೊತೆ ಜೊತೆಗೆ ಸಣ್ಣ, ಮಧ್ಯಮ ಕೈಗಾರಿಕೆಗಳಿಗೆ ಉತ್ತೇಜನ ನೀಡಲಾಗಿದೆ ಎಂದು ಹೇಳಿದರು.

ಈ ಬಜೆಟ್‌ನಿಂದ ಮಹಿಳೆಯರಿಗೆ ಸ್ವಯಂ ಉದ್ಯೋಗದ ಬಲ ಸಿಕ್ಕಿದಂತಾಗಿದ್ದು, ಮಹಿಳೆಯರನ್ನು ಆರ್ಥಿಕ ಭಾಗೀದಾರರನ್ನಾಗಿಸುವ ಯೋಜನೆಯಿದೆ. ಪ್ರತೀ ಮನೆ, ಪ್ರತೀ ಹಳ್ಳಿ, ನಗರದಲ್ಲಿಯೂ ಉದ್ಯಮಿಗಳು ಸೃಷ್ಟಿಯಾಗಬೇಕು ಎಂದು ಕರೆ ನೀಡಿದರು.

ಇನ್ನೂ ಬಜೆಟ್‌ ಬಗ್ಗೆ ಮುಂದುವರಿದು ಮಾತನಾಡಿದ ಅವರು, ತರಕಾರಿ ಉತ್ಪಾದನಾ ಸೆಕ್ಟರ್‌ಗಳ ನಿರ್ಮಾಣಕ್ಕೆ ಹೆಚ್ಚು ಒತ್ತು ನೀಡಲಾಗಿದ್ದು, ಬಜೆಟ್‌ನಲ್ಲಿ ಹೆದ್ದಾರಿ, ವಿದ್ಯುತ್‌, ಜಲಮಾರ್ಗ ಅಭಿವೃದ್ದಿಯ ಬಗ್ಗೆ ನಿರ್ಧಾರ ಮಾಡಿದ್ದೇವೆ ಎಂದು ಸಂತಸ ವ್ಯಕ್ತಪಡಿಸಿದರು.

ಇನ್ನೂ ಭಾರತವನ್ನು ಇಡೀ ಜಗತ್ತೇ ತಿರುಗಿ ನೋಡುತ್ತಿದೆ. ಇಂದಿನ ಬಜೆಟ್‌ ಹೊಸ ಅವಕಾಶಗಳನ್ನು ಹೊತ್ತು ತಂದಿದೆ ಎಂದು ನಿರ್ಮಲಾ ಸೀತಾರಾಮನ್‌ ಮಂಡಿಸಿದ ಬಜೆಟ್‌ ಬಗ್ಗೆ ಹಾಡಿ ಹೊಗಳಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಡಿಕೆಶಿ

ಬೆಂಗಳೂರು: 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸಿಎಂ ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು. ಸದಾಶಿವನಗರದಲ್ಲಿರುವ ತಮ್ಮ…

2 hours ago

80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ: ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…

3 hours ago

ಓದುಗರ ಪತ್ರ: ಮಹಿಳಾ ಸಿಬ್ಬಂದಿ ಲಂಚದ ಮಸಿ ಅಂಟಿಸಿಕೊಳ್ಳದಂತೆ ಎಚ್ಚರ ವಹಿಸಬೇಕು

ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…

4 hours ago

ಓದುಗರ ಪತ್ರ: ಅಡಕೆ ಬೆಳೆಗಾರರ ಹಿತವೂ ಮುಖ್ಯವಲ್ಲವೇ?

ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…

4 hours ago

ಓದುಗರ ಪತ್ರ: ಈ ಬಾರಿಯ ದಸರಾ ಉದ್ಘಾಟನೆಗೆ ಹೆಚ್.ಡಿ.ದೇವೇಗೌಡರನ್ನು ಆಯ್ಕೆಮಾಡಲಿ

ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…

4 hours ago

ಮೈಸೂರು ಸ್ವಚ್ಛವಾಗಿಡಲು ಜನರಿಗೆ ಕೆಲ ಅಭ್ಯಾಸ ಅಗತ್ಯ

ಟಿ.ಕೆ.ಹರೀಶ್ ಮನೆ ಮುಂದಿನ ರಸ್ತೆಯ ಕಸ ವಿಲೇವಾರಿಗೆ ನಾಗರಿಕರು ಜಾಗೃತರಾಗಬೇಕು ಮೈಸೂರು ಎಂದರೆ ಕೇವಲ ಒಂದು ನಗರವಲ್ಲ. ಅದು ಕರ್ನಾಟಕದ…

4 hours ago