ನವದೆಹಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸಮರ್ಥನೆ ನೀಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಮೂರನೇ ಅವಧಿಯ ಕೇಂದ್ರ ಸರ್ಕಾರದ ಮೊದಲ ಬಜೆಟ್ ಇಂದು ಮಂಡನೆಯಾಗಿದ್ದು, ಹಲವು ವರ್ಗಗಳಿಗೆ ಬಂಪರ್ ಆಫರ್ ನೀಡಲಾಗಿದೆ.
ಕೇಂದ್ರ ಬಜೆಟ್ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯೆ ನೀಡಿದ್ದು, ಬಜೆಟ್ನಿಂದ ಶಿಕ್ಷಣ, ಕೌಶಲ್ಯಕ್ಕೆ ಹೊಸ ಮಾರ್ಗ ಸಿಗಲಿದ್ದು, ಯುವಕರಿಗೆ ಉತ್ತಮ ಅವಕಾಶ ನೀಡಲಿದೆ. ಈ ಬಜೆಟ್ ಮಧ್ಯಮ ವರ್ಗದವರಿಗೆ ಹೊಸ ಶಕ್ತಿ ನೀಡುವ ಬಜೆಟ್ ಆಗಿದ್ದು, ಇದು ಮುಂದಿನ ದಿನಗಳಲ್ಲಿ ಹೊಸ ಅವಕಾಶಗಳನ್ನು ಸೃಷ್ಟಿಸಲಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಹಾಡಿ ಹೊಗಳಿದರು.
ಇನ್ನೂ ಈ ಬಾರಿಯ ಬಜೆಟ್ನಿಂದ ಆರ್ಥಿಕತೆಗೆ ಹೊಸ ಗತಿ ಸಿಗಲಿದ್ದು, ಯುವಕರ ಶಿಕ್ಷಣಕ್ಕೆ ಉತ್ತಮ ಅವಕಾಶ ಸಿಗಲಿದೆ. ಬಜೆಟ್ನಲ್ಲಿ ಎಲ್ಲಾ ಕ್ಷೇತ್ರಗಳಿಗೂ ಒತ್ತು ನೀಡಲಾಗಿದ್ದು, ಮುದ್ರಾ ಯೋಜನೆ ಸಾಲದ ಮಿತಿ ಹೆಚ್ಚಳದ ಜೊತೆ ಜೊತೆಗೆ ಸಣ್ಣ, ಮಧ್ಯಮ ಕೈಗಾರಿಕೆಗಳಿಗೆ ಉತ್ತೇಜನ ನೀಡಲಾಗಿದೆ ಎಂದು ಹೇಳಿದರು.
ಈ ಬಜೆಟ್ನಿಂದ ಮಹಿಳೆಯರಿಗೆ ಸ್ವಯಂ ಉದ್ಯೋಗದ ಬಲ ಸಿಕ್ಕಿದಂತಾಗಿದ್ದು, ಮಹಿಳೆಯರನ್ನು ಆರ್ಥಿಕ ಭಾಗೀದಾರರನ್ನಾಗಿಸುವ ಯೋಜನೆಯಿದೆ. ಪ್ರತೀ ಮನೆ, ಪ್ರತೀ ಹಳ್ಳಿ, ನಗರದಲ್ಲಿಯೂ ಉದ್ಯಮಿಗಳು ಸೃಷ್ಟಿಯಾಗಬೇಕು ಎಂದು ಕರೆ ನೀಡಿದರು.
ಇನ್ನೂ ಬಜೆಟ್ ಬಗ್ಗೆ ಮುಂದುವರಿದು ಮಾತನಾಡಿದ ಅವರು, ತರಕಾರಿ ಉತ್ಪಾದನಾ ಸೆಕ್ಟರ್ಗಳ ನಿರ್ಮಾಣಕ್ಕೆ ಹೆಚ್ಚು ಒತ್ತು ನೀಡಲಾಗಿದ್ದು, ಬಜೆಟ್ನಲ್ಲಿ ಹೆದ್ದಾರಿ, ವಿದ್ಯುತ್, ಜಲಮಾರ್ಗ ಅಭಿವೃದ್ದಿಯ ಬಗ್ಗೆ ನಿರ್ಧಾರ ಮಾಡಿದ್ದೇವೆ ಎಂದು ಸಂತಸ ವ್ಯಕ್ತಪಡಿಸಿದರು.
ಇನ್ನೂ ಭಾರತವನ್ನು ಇಡೀ ಜಗತ್ತೇ ತಿರುಗಿ ನೋಡುತ್ತಿದೆ. ಇಂದಿನ ಬಜೆಟ್ ಹೊಸ ಅವಕಾಶಗಳನ್ನು ಹೊತ್ತು ತಂದಿದೆ ಎಂದು ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ ಬಗ್ಗೆ ಹಾಡಿ ಹೊಗಳಿದರು.
ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್…
ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…
ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್ ಮೇಲೆ ಪೊಲೀಸರು…
ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್…
ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…
ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್ ತಿಂಗಳಿನಲ್ಲಿ ಮೂರನೇ…