ನವದೆಹಲಿ: ಇಂದು ಸಂಜೆ ಐದು ರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಾಂಕ ಪ್ರಕಟವಾಗುವ ಸಾಧ್ಯತೆಯಿದೆ.
ಇಂದು ಸಂಜೆ ನಾಲ್ಕು ಗಂಟೆಗೆ ಕೇಂದ್ರ ಚುನಾವಣಾ ಆಯೋಗ ಸುದ್ದಿಗೋಷ್ಠಿ ನಡೆಸಲಿದೆ. ದೆಹಲಿಯ ವಿಜ್ಞಾನ ಭವನದಲ್ಲಿ ಸುದ್ದಿಗೋಷ್ಠಿ ನಡೆಯಲಿದೆ.
ಪಶ್ಚಿಮ ಬಂಗಾಳ, ಕೇರಳ, ಪುದುಚೇರಿ, ಅಸ್ಸಾಂ, ತಮಿಳುನಾಡು ವಿಧಾನಸಭೆ ಚುನಾವಣೆಗೆ ದಿನಾಂಕ ಪ್ರಕಟಿಸುವ ಸಾಧ್ಯತೆಯಿದೆ.
ಏಪ್ರಿಲ್ನಲ್ಲಿ ಚುನಾವಣೆಗಳು ನಡೆಯುವ ನಿರೀಕ್ಷೆಯಿದ್ದು, ಮೇ ಆರಂಭದಲ್ಲಿ ಫಲಿತಾಂಶಗಳು ಘೋಷಣೆಯಾಗುವ ಸಾಧ್ಯತೆಯಿದೆ.
ಚುನಾವಣಾ ದಿನಾಂಕಗಳನ್ನು ಘೋಷಿಸಿದ ನಂತರ, ರಾಜ್ಯಗಳಾದ್ಯಂತ ಮಾದರಿ ನೀತಿ ಸಂಹಿತೆ ತಕ್ಷಣದಿಂದ ಜಾರಿಗೆ ಬರುತ್ತದೆ.





