ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್ ಚೌಹಾಣ್ ಅವರೊಂದಿಗೆ ಚರ್ಚೆ ನಡೆಸಿದ ಫಲವಾಗಿ ಕೇಂದ್ರ ಸರಕಾರ ರಾಜ್ಯದ ಮಾವು ಬೆಳೆಗಾರರ ನೆರವಿಗೆ ಧಾವಿಸಿದೆ.
ವಾತಾವರಣ ವೈಪರಿತ್ಯ ಮತ್ತು ಬೆಲೆ ಕುಸಿತದಿಂದ ತೀವ್ರ ಸಂಕಷ್ಟಕ್ಕೆ ಗುರಿಯಾಗಿದ್ದ ಮಾವು ಬೆಳೆಗಾರರಿಗೆ ನೆರವಿನ ಹಸ್ತ ಚಾಚಿರುವ ಕೇಂದ್ರವು, ಮಾರುಕಟ್ಟೆ ಹಸ್ತಕ್ಷೇಪ ಯೋಜನೆ ಅಡಿಯಲ್ಲಿ 1.30 ಲಕ್ಷ ಮೆಟ್ರಿಕ್ ಟನ್ ಮಾವಿಗೆ ಪ್ರತಿ ಕ್ವಿಂಟಲ್ಗೆ 1,750 ನೆರವು ಘೋಷಿಸಿದೆ.
ಈ ಸಂಬಂಧ ಸಚಿವ ಕುಮಾರಸ್ವಾಮಿ ಅವರು ನವದೆಹಲಿಯಲ್ಲಿ ಬುಧವಾರ ಕೃಷಿ ಸಚಿವರಾದ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು. ತ್ವರಿತವಾಗಿ ಮಾವು ಬೆಳೆಗಾರರ ರಕ್ಷಣೆಗೆ ಧಾವಿಸಬೇಕು ಎಂದು ಮನವಿ ಮಾಡಿದ್ದರು. ಕುಮಾರಸ್ವಾಮಿ ಅವರು ಮನವಿಗೆ ಸ್ಪಂದಿಸಿದ್ದ ಚೌಹಾಣ್ ಅವರು, ಮಾವು ಬೆಳೆಗಾರರಿಗೆ ಆರ್ಥಿಕ ನೆರವು ಘೋಷಿಸಿದ್ದಾರೆ.
ಅಲ್ಲದೆ, ಇದೇ ಜೂನ್ 17ರಂದು ಸಚಿವ ಚೌಹಾಣ್ ಅವರಿಗೆ ಪತ್ರ ಬರೆದಿದ್ದ ಬೃಹತ್ ಕೈಗಾರಿಕೆ ಸಚಿವರು, ಮಾವು ಬೆಳೆಗಾರರ ನೆರವಿಗೆ ಬರುವಂತೆ ಕೋರಿದರು. ಬೆಲೆ ಕೊರತೆ ಪಾವತಿ ಯೋಜನೆ (PDPS)ಯಡಿ ನೆರವಾಗುವಂತೆ ಕೇಳಿದ್ದರು. ತದನಂತರ ಕೋಲಾರ ಜಿಲ್ಲೆಯಲ್ಲಿ ಮಾವು ಬೆಳೆಗಾರರು ಪ್ರತಿಭಟನೆ ಶುರು ಮಾಡುತ್ತಿದ್ದಂತೆಯೇ ತುರ್ತಾಗಿ ಬುಧವಾರ ಸಂಜೆ ಕೃಷಿ ಸಚಿವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಅದರ ಫಲವಾಗಿ ಆರ್ಥಿಕ ನೆರವಿನ ಘೋಷಣೆ ಹೊರಬಿದ್ದಿದೆ. ಕೇಂದ್ರ ಸರ್ಕಾರದ ಈ ಉಪಕ್ರಮದ ಮೂಲಕ ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ತುಮಕೂರು, ಮಂಡ್ಯ ಸೇರಿದಂತೆ ವಿವಿಧ ಜಿಲ್ಲೆಗಳ ಮಾವು ಬೆಳೆಗಾರರಿಗೆ ನೆರವಾಗಲಿದೆ.
ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…
ಬೆಂಗಳೂರು: ರಾಜ್ಯದಲ್ಲಿ ಪ್ರಕೃತಿ ವಿಕೋಪ ನಿರ್ವಹಣೆಯನ್ನು ಪರಿಣಾಮಕಾರಿಯಾಗಿ ನಡೆಸುವ ಉದ್ದೇಶದಿಂದ ಸಚಿವರಿಗೆ ವಿವಿಧ ಜಿಲ್ಲೆಗಳ ಮೇಲುಸ್ತುವಾರಿಯನ್ನು ಹಂಚಿಕೆ ಮಾಡಿ ಅಧಿಸೂಚನೆ…
ವೆನಿಜುವೆಲಾ: ವೆನಿಜುವೆಲಾ ದೇಶದ ಇತಿಹಾಸದಲ್ಲೇ ಕಂಡು ಕೇಳರಿಯದ ಭೀಕರ ಭೂಕಂಪ ಸಂಭವಿಸಿ ಸಾವಿರಾರು ಜನ ಸಾವನ್ನಪ್ಪಿದ್ದು, ಭಾರೀ ಪ್ರಮಾಣದ ಜನರು…
ಕ್ಯಾರಕಾಸ್ : ವೆನೆಜುವೆಲಾ ಕರಾವಳಿಯ ಸಮೀಪ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳು ದೇಶವನ್ನು ಬೆಚ್ಚಿಬೀಳಿಸಿವೆ. ರಿಕ್ಟರ್ ಮಾಪಕದಲ್ಲಿ…
ಪ್ರೊ.ಬಿ.ಜಯಪ್ರಕಾಶ್ಗೌಡ ಬದುಕಿದ್ದರೆ ೧೦೯ ವರ್ಷಗಳನ್ನು ಪೂರೈಸುತ್ತಿದ್ದ ಸ್ವಾತಂತ್ರ್ಯ ಹೋರಾಟಗಾರ ಪಿ. ಎನ್. ಜವರಪ್ಪಗೌಡರು ನಮಗೆಲ್ಲರಿಗೂ ಮಾರ್ಗದರ್ಶಕರಾಗಿದ್ದವರು. ಜವರಪ್ಪಗೌಡರು ಗಾಂಧೀಜಿಯಿಂದ ಪ್ರಭಾವಿತರಾಗಿದ್ದರು.…