ದೇಶ- ವಿದೇಶ

ಅಯ್ಯಪ್ಪಸ್ವಾಮಿ ಭಕ್ತರಿಗೆ ಗುಡ್‌ ನ್ಯೂಸ್‌ ಕೊಟ್ಟ ಕೇಂದ್ರ ಸರ್ಕಾರ

ಹೊಸದಿಲ್ಲಿ: ಇತಿಹಾಸ ಪ್ರಸಿದ್ದ ಕೇರಳದ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ತೆರಳುವ ಭಕ್ತರಿಗೆ ಕೇಂದ್ರ ಸರ್ಕಾರ ಗುಡ್‌ ನ್ಯೂಸ್‌ ನೀಡಿದ್ದು, ವಿಮಾನದಲ್ಲಿ ಇರುಮುಡಿ ತೆಗೆದುಕೊಂಡು ಹೋಗಲು ಕೇಂದ್ರ ನಾಗರಿಕ ವಿಮಾನಯಾನ ಇಲಾಖೆ ಅನುಮತಿ ನೀಡಿದೆ. ಈ ಆದೇಶವು 2025ರ ಜನವರಿ 20ರವರೆಗೆ ಮಾತ್ರ ಚಾಲ್ತಿಯಲ್ಲಿರುತ್ತದೆ ಎಂದು ತಿಳಿಸಲಾಗಿದೆ.

ಇಷ್ಟು ದಿನ ಅಯ್ಯಪ್ಪ ಸ್ವಾಮಿ ಭಕ್ತರು ಬರೀ ಕಾರು, ಬಸ್, ರೈಲುಗಳಲ್ಲೇ ಪ್ರಯಾಣ ಮಾಡುತ್ತಿದ್ದರು. ಇರುಮುಡಿ ಕಟ್ಟು ತೆಗೆದುಕೊಂಡು ವಿಮಾನದಲ್ಲಿ ಹೋಗಲು ಅವರಿಗೆ ಅವಕಾಶ ಇರಲಿಲ್ಲ. ಆದರೆ, ಈಗ ಕೇಂದ್ರ ಸರ್ಕಾರವೂ ಇರುಮುಡಿಯನ್ನು ವಿಮಾನ ಕ್ಯಾಬಿನ್‍ನಲ್ಲಿ ತೆಗೆದುಕೊಂಡು ಹೋಗಲು ಅವಕಾಶ ನೀಡಿದೆ. ಹೀಗಾಗಿ ಇನ್ನು ಇರುಮುಡಿ ಸಮೇತ ಅಯ್ಯಪ್ಪ ಭಕ್ತರು ವಿಮಾನದಲ್ಲಿ ಪ್ರಯಾಣಿಸಬಹುದಾಗಿದೆ. ಚೆಕ್ ಇನ್ ಬ್ಯಾಗೇಜ್ ಬದಲು ಅಯ್ಯಪ್ಪ ಭಕ್ತರು ಇರುಮುಡಿ ತೆಗೆದುಕೊಂಡು ಹೋಗಬಹುದು. ಈ ವೇಳೆ ವಿಮಾನ ನಿಲ್ದಾಣದಲ್ಲಿ ಪರಿಶೀಲನೆ ಮಾಡಲಾಗುತ್ತದೆ.

ಕಳೆದ ವರ್ಷ ಏಕಾಏಕಿ ಲಕ್ಷಾಂತರ ಭಕ್ತರು ಅಯ್ಯಪ್ಪ ದರ್ಶನಕ್ಕೆ ಆಗಮಿಸಿದ್ದರಿಂದ ಮತ್ತು ಅದನ್ನು ನಿರ್ವಹಿಸಲು ಸರ್ಕಾರ ಸೂಕ್ತ ವ್ಯವಸ್ಥೆ ಮಾಡಿಕೊಂಡಿರದ ಕಾರಣ ಭಾರೀ ಅವ್ಯವಸ್ಥೆ ಉಂಟಾಗಿತ್ತು. ಹೀಗಾಗಿ ಪ್ರಸಿದ್ದ ಶಬರಿಮಲೆ ದೇಗುಲದ ವಾರ್ಷಿಕ ಮಂಡಲಂ- ಮಕರವಿಳಕ್ಕು ಯಾತ್ರೆಗೆ ಈ ವರ್ಷ ಆನ್‍ಲೈನ್‍ನಲ್ಲಿ ಬುಕ್ ಮಾಡಿದವರಿಗೆ ಮಾತ್ರ ಶಬರಿಮಲೆಗೆ ಪ್ರವೇಶ ನೀಡಲು ಕೇರಳ ಸರ್ಕಾರ ನಿರ್ಧರಿಸಿತ್ತು. ಆದರೆ ಇದಕ್ಕೆ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಈ ಆನ್‍ಲೈನ್ ಬುಕ್ಕಿಂಗ್ ಹಿಂಪಡೆದಿತ್ತು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

36 mins ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

9 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

9 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

9 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

12 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

12 hours ago