ದೇಶ- ವಿದೇಶ

ಅಯ್ಯಪ್ಪಸ್ವಾಮಿ ಭಕ್ತರಿಗೆ ಗುಡ್‌ ನ್ಯೂಸ್‌ ಕೊಟ್ಟ ಕೇಂದ್ರ ಸರ್ಕಾರ

ಹೊಸದಿಲ್ಲಿ: ಇತಿಹಾಸ ಪ್ರಸಿದ್ದ ಕೇರಳದ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ತೆರಳುವ ಭಕ್ತರಿಗೆ ಕೇಂದ್ರ ಸರ್ಕಾರ ಗುಡ್‌ ನ್ಯೂಸ್‌ ನೀಡಿದ್ದು, ವಿಮಾನದಲ್ಲಿ ಇರುಮುಡಿ ತೆಗೆದುಕೊಂಡು ಹೋಗಲು ಕೇಂದ್ರ ನಾಗರಿಕ ವಿಮಾನಯಾನ ಇಲಾಖೆ ಅನುಮತಿ ನೀಡಿದೆ. ಈ ಆದೇಶವು 2025ರ ಜನವರಿ 20ರವರೆಗೆ ಮಾತ್ರ ಚಾಲ್ತಿಯಲ್ಲಿರುತ್ತದೆ ಎಂದು ತಿಳಿಸಲಾಗಿದೆ.

ಇಷ್ಟು ದಿನ ಅಯ್ಯಪ್ಪ ಸ್ವಾಮಿ ಭಕ್ತರು ಬರೀ ಕಾರು, ಬಸ್, ರೈಲುಗಳಲ್ಲೇ ಪ್ರಯಾಣ ಮಾಡುತ್ತಿದ್ದರು. ಇರುಮುಡಿ ಕಟ್ಟು ತೆಗೆದುಕೊಂಡು ವಿಮಾನದಲ್ಲಿ ಹೋಗಲು ಅವರಿಗೆ ಅವಕಾಶ ಇರಲಿಲ್ಲ. ಆದರೆ, ಈಗ ಕೇಂದ್ರ ಸರ್ಕಾರವೂ ಇರುಮುಡಿಯನ್ನು ವಿಮಾನ ಕ್ಯಾಬಿನ್‍ನಲ್ಲಿ ತೆಗೆದುಕೊಂಡು ಹೋಗಲು ಅವಕಾಶ ನೀಡಿದೆ. ಹೀಗಾಗಿ ಇನ್ನು ಇರುಮುಡಿ ಸಮೇತ ಅಯ್ಯಪ್ಪ ಭಕ್ತರು ವಿಮಾನದಲ್ಲಿ ಪ್ರಯಾಣಿಸಬಹುದಾಗಿದೆ. ಚೆಕ್ ಇನ್ ಬ್ಯಾಗೇಜ್ ಬದಲು ಅಯ್ಯಪ್ಪ ಭಕ್ತರು ಇರುಮುಡಿ ತೆಗೆದುಕೊಂಡು ಹೋಗಬಹುದು. ಈ ವೇಳೆ ವಿಮಾನ ನಿಲ್ದಾಣದಲ್ಲಿ ಪರಿಶೀಲನೆ ಮಾಡಲಾಗುತ್ತದೆ.

ಕಳೆದ ವರ್ಷ ಏಕಾಏಕಿ ಲಕ್ಷಾಂತರ ಭಕ್ತರು ಅಯ್ಯಪ್ಪ ದರ್ಶನಕ್ಕೆ ಆಗಮಿಸಿದ್ದರಿಂದ ಮತ್ತು ಅದನ್ನು ನಿರ್ವಹಿಸಲು ಸರ್ಕಾರ ಸೂಕ್ತ ವ್ಯವಸ್ಥೆ ಮಾಡಿಕೊಂಡಿರದ ಕಾರಣ ಭಾರೀ ಅವ್ಯವಸ್ಥೆ ಉಂಟಾಗಿತ್ತು. ಹೀಗಾಗಿ ಪ್ರಸಿದ್ದ ಶಬರಿಮಲೆ ದೇಗುಲದ ವಾರ್ಷಿಕ ಮಂಡಲಂ- ಮಕರವಿಳಕ್ಕು ಯಾತ್ರೆಗೆ ಈ ವರ್ಷ ಆನ್‍ಲೈನ್‍ನಲ್ಲಿ ಬುಕ್ ಮಾಡಿದವರಿಗೆ ಮಾತ್ರ ಶಬರಿಮಲೆಗೆ ಪ್ರವೇಶ ನೀಡಲು ಕೇರಳ ಸರ್ಕಾರ ನಿರ್ಧರಿಸಿತ್ತು. ಆದರೆ ಇದಕ್ಕೆ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಈ ಆನ್‍ಲೈನ್ ಬುಕ್ಕಿಂಗ್ ಹಿಂಪಡೆದಿತ್ತು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ದಸರಾ ಮಹೋತ್ಸವದಲ್ಲಿ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿ ; ಜಿಲ್ಲಾಧಿಕಾರ ಜಿ.ಲಕ್ಷ್ಮೀಕಾಂತ ರೆಡ್ಡಿ ಮಾಹಿತಿ

ಮೈಸೂರು : ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿಯ ವೇಳೆ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿಯಾಗುವರು ಎಂದು…

4 hours ago

ಹೊಸ ಪರಿಕಲ್ಪನೆಯೊಂದಿಗೆ ದೀಪಾಲಂಕಾರ ರೂಪಿಸಿ ; ರಮೇಶ್‌ ಬಂಡಿಸಿದ್ದೇಗೌಡ

ಮೈಸೂರು : ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿದ್ಯುತ್ ದೀಪಾಲಂಕಾರಕ್ಕೆ ಈ ಬಾರಿ ಹೊಸ ಮೆರುಗು ನೀಡುವುದರ ಜತೆಗೆ ಆಕರ್ಷಕ…

4 hours ago

ದಸರಾ ಮಹೋತ್ಸವದಲ್ಲಿ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿ: ಜಿಲ್ಲಾಧಿಕಾರಿ ಜಿ ಲಕ್ಷ್ಮೀಕಾಂತ ರೆಡ್ಡಿ

ಮೈಸೂರು: ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿಯ ವೇಳೆ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿಯಾಗುವರು ಎಂದು ಜಿಲ್ಲಾಧಿಕಾರಿ…

8 hours ago

ಅಬಕಾರಿ ಅಕ್ರಮ ಕೇಸ್‌: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿಗೆ ED ಶಾಕ್‌

ಬೆಂಗಳೂರು: ಅಬಕಾರಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಶಾಕ್ ನೀಡಿದೆ.…

9 hours ago

ಓದುಗರ ಪತ್ರ: ಬಂದೂಕು ಹಿಡಿದಿರುವ ನಾಯಕನ ಚಿತ್ರದ ಜಾಹೀರಾತಿಗೆ ‘ಇಲ್ಲೂ’ ಪ್ರೋತ್ಸಾಹ ಏಕೆ?

ಇತ್ತೀಚೆಗೆ ಬಿಡುಗಡೆಯಾದ ಟಾಕ್ಸಿಕ್ ಚಲನಚಿತ್ರವು ಕನ್ನಡ ಸೇರಿ ವಿವಿಧ ಭಾಷೆಗಳಲ್ಲಿ ಬಿಡುಗಡೆಯಾಗಿ ಪ್ರದರ್ಶನ ಕಾಣುತ್ತಿದೆ. ಈ ಚಿತ್ರದ ಪ್ರಚಾರಕ್ಕಾಗಿ ಪೋಸ್ಟರ್ ಅನ್ನು…

13 hours ago

ಓದುಗರ ಪತ್ರ: ಒಟಿಟಿ ವೇದಿಕೆಗಳು ಕನ್ನಡ ಭಾಷೆಗೂ ಆದ್ಯತೆ ನೀಡಲಿ

ಇಂದು ಒಟಿಟಿ ವೇದಿಕೆಗಳಾದ ಅಮೆಜನ್ ಪ್ರೈಮ, ನೆಟ್‌ಫ್ಲಿಕ್ಸ್, ಡಿಸ್ನಿ+ಹಾಟ್‌ಸ್ಟಾರ್, ಜೀ೫, ಸೋನಿಲಿವ್ ಮುಂತಾದವುಗಳು ನಮ್ಮ ಮನರಂಜನೆಯ ಅವಿಭಾಜ್ಯ ಅಂಗವಾಗಿವೆ. ಮನೆಯಲ್ಲಿಯೇ…

13 hours ago