ನವದೆಹಲಿ: ಕೇಂದ್ರ ಕಾರ್ಮಿಕ ಸಚಿವಾಲಯವು ಇತ್ತೀಚಿಗೆ ಏಕೀಕೃತ ಪಿಂಚಣಿ ಪಾವತಿ ವ್ಯವಸ್ಥೆಯನ್ನು(CPPO) ಜಾರಿ ಮಾಡಿದೆ. ಈ ವ್ಯವಸ್ಥೆಯ ಮೂಲಕ ಪಿಂಚಣಿದಾರರು ದೇಶದ ಯಾವುದೇ ರಾಜ್ಯದ, ಯಾವುದೇ ಬ್ಯಾಂಕಿನ ಶಾಖೆಯಲ್ಲಿ ತಮ್ಮ ಪಿಂಚಣಿಯನ್ನು ಪಡೆಯಬಹುದಾಗಿದೆ.
ಈ ವ್ಯವಸ್ಥೆಯಿಂದ ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್ಒ) ವ್ಯಾಪ್ತಿಗೆ ಬರುವ 68 ಲಕ್ಷ ಪಿಂಚಣಿದಾರರಿಗೆ ಉಪಯೋಗವಾಗಲಿದೆ.
ಪಿಂಚಣಿದಾರರು ಪಿಂಚಣಿ ಪರಿಶೀಲನೆಗಾಗಿ ಬ್ಯಾಂಕ್ ಶಾಖೆಗೆ ಭೇಟಿ ನೀಡುವ ಆಗತ್ಯವಿಲ್ಲ. ಪಿಂಚಣಿ ಮೊತ್ತ ನೇರವಾಗಿ ತಮ್ಮ ಖಾತೆಗೆ ಜಮೆಯಾಗಲಿದೆ. ಪಿಂಚಣಿದಾರರು ಒಂದು ಕಡೆಯಿಂದ ಮತ್ತೊಂದು ಕಡೆಗೆ ಸ್ಥಳಾಂತರವಾದರೂ ಬ್ರಾಂಚ್ ಬದಲಿಸುವ ಆಗತ್ಯವಿಲ್ಲ. ಅದಕ್ಕೆ ಬದಲಾಗಿ ದೇಶದ ಯಾವುದೇ ಬ್ಯಾಂಕ್ ಶಾಖೆಯಿಂದ ಹಣ ಪಡೆಯಬಹುದು.
ಈ ವ್ಯವಸ್ಥೆ ಜಾರಿಗೂ ಮುನ್ನ 1995ರ ಉದ್ಯೋಗಿಗಳ ಪಿಂಚಣಿ ಯೋಜನೆಯಡಿ ವಿಕೇಂದ್ರಿಕೃತ ವ್ಯವಸ್ಥೆ ಕಾರ್ಯನಿರ್ವಹಿಸುತ್ತಿತ್ತು. ಅದರಲ್ಲಿ ಪ್ರತಿ ವಲಯ ಅಥವಾ ಪ್ರಾಂತ್ಯದ ಇಪಿಎಫ್ಒ ಕಚೇರಿಗಳು 3-4 ಬ್ಯಾಂಕ್ಗಳೊಂದಿಗೆ ಪ್ರತ್ಯೇಕ ಒಪ್ಪಂದ ಹೊಂದಿದ್ದವು. ಅವುಗಳ ಮೂಲಕವೇ ಹಣ ಪಡೆಯಬೇಕಿತ್ತು.
ಬೆಂಗಳೂರು: ನಾನು ಆತ್ಮಹತ್ಯೆ ಮಾಡಿಕೊಂಡರೆ ಐಟಿ ಅಧಿಕಾರಿಗಳೇ ನೇರ ಹೊಣೆ ಎಂದು ಉದ್ಯಮಿ ಕೆಜಿಎಫ್ ಬಾಬು ಅಳಲು ತೋಡಿಕೊಂಡಿದ್ದಾರೆ. ಈ…
ಸಾಗರ: ಮಾರಿಕಾಂಬಾ ದೇವಿಯ ಜಾತ್ರೆಯ ಹಿನ್ನೆಲೆಯಲ್ಲಿ ದೇವಿಯ ದರ್ಶನ ಪಡೆಯಲು ತೆರಳುತ್ತಿದ್ದ ಹಿರಿಯ ರಾಜಕಾರಣಿ ಹಾಗೂ ಮಾಜಿ ಸ್ಪೀಕರ್ ಕಾಗೋಡು…
ಬೆಂಗಳೂರು: ಲೋಕ್ ಅದಾಲತ್ನಲ್ಲಿ ಗಾಂಜಾ ಆರೋಪದ ಕೇಸುಗಳನ್ನು ಸೆಟಲ್ ಮಾಡಲಾಗುತ್ತದೆಯೇ ಎಂದು ಹೈಕೋರ್ಟ್ ತೀವ್ರ ಆಶ್ಚರ್ಯ ವ್ಯಕ್ತಪಡಿಸಿದೆ. ಗಾಂಜಾ ಮಾರಾಟದ…
ಮಡಿಕೇರಿ: ಅನಧಿಕೃತವಾಗಿ ವಾಹನದ ಸ್ವರೂಪ ಬದಲಾಯಿಸಿಕೊಂಡು ಕರ್ಕಶ ಶಬ್ಧದ ಸೈಲೆನ್ಸರ್ ಅಳವಡಿಸಿಕೊಂಡು ಸಾರ್ವಜನಿಕರಿಗೆ ಭಾರೀ ಕಿರಿಕಿರಿ ಮಾಡುತ್ತಿದ್ದ ಜಿಪ್ಸಿ ವಾಹನವೊಂದನ್ನು…
ಹಾಸನ: ಪುಂಡರಿಬ್ಬರು ವ್ಹೀಲಿಂಗ್ ಮಾಡಿ ವಾಹನ ಸವಾರರಿಗೆ ಕಿರಿಕಿರಿ ಉಂಟು ಮಾಡಿರುವ ಘಟನೆ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಮುದುಡಿ ರಸ್ತೆಯಲ್ಲಿ…
ಚಿಕ್ಕಮಗಳೂರು: ಚಾರ್ಮಾಡಿ ಅರಣ್ಯದಲ್ಲಿ ಭಾರೀ ಬೆಂಕಿ ಅನಾಹುತವಾಗಿದ್ದು, ಸೂಕ್ಷ್ಮ ಹುಲ್ಲುಗಾವಲು ಬೆಂಕಿಯಲ್ಲಿ ಭಸ್ಮವಾಗಿದೆ. ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರ ಸಮೀಪವಿರುವ ಚಾರ್ಮಾಡಿ…