ದೇಶ- ವಿದೇಶ

ಪಿಂಚಣಿದಾರರಿಗೆ ಗುಡ್‌ನ್ಯೂಸ್‌ ಕೊಟ್ಟ ಕೇಂದ್ರ ಕಾರ್ಮಿಕ ಸಚಿವಾಲಯ

ನವದೆಹಲಿ: ಕೇಂದ್ರ ಕಾರ್ಮಿಕ ಸಚಿವಾಲಯವು ಇತ್ತೀಚಿಗೆ ಏಕೀಕೃತ ಪಿಂಚಣಿ ಪಾವತಿ ವ್ಯವಸ್ಥೆಯನ್ನು(CPPO) ಜಾರಿ ಮಾಡಿದೆ. ಈ ವ್ಯವಸ್ಥೆಯ ಮೂಲಕ ಪಿಂಚಣಿದಾರರು ದೇಶದ ಯಾವುದೇ ರಾಜ್ಯದ, ಯಾವುದೇ ಬ್ಯಾಂಕಿನ ಶಾಖೆಯಲ್ಲಿ ತಮ್ಮ ಪಿಂಚಣಿಯನ್ನು ಪಡೆಯಬಹುದಾಗಿದೆ.

ಈ ವ್ಯವಸ್ಥೆಯಿಂದ ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್‌ಒ) ವ್ಯಾಪ್ತಿಗೆ ಬರುವ 68 ಲಕ್ಷ ಪಿಂಚಣಿದಾರರಿಗೆ ಉಪಯೋಗವಾಗಲಿದೆ.

ಪಿಂಚಣಿದಾರರು ಪಿಂಚಣಿ ಪರಿಶೀಲನೆಗಾಗಿ ಬ್ಯಾಂಕ್‌ ಶಾಖೆಗೆ ಭೇಟಿ ನೀಡುವ ಆಗತ್ಯವಿಲ್ಲ. ಪಿಂಚಣಿ ಮೊತ್ತ ನೇರವಾಗಿ ತಮ್ಮ ಖಾತೆಗೆ ಜಮೆಯಾಗಲಿದೆ. ಪಿಂಚಣಿದಾರರು ಒಂದು ಕಡೆಯಿಂದ ಮತ್ತೊಂದು ಕಡೆಗೆ ಸ್ಥಳಾಂತರವಾದರೂ ಬ್ರಾಂಚ್‌ ಬದಲಿಸುವ ಆಗತ್ಯವಿಲ್ಲ. ಅದಕ್ಕೆ ಬದಲಾಗಿ ದೇಶದ ಯಾವುದೇ ಬ್ಯಾಂಕ್‌ ಶಾಖೆಯಿಂದ ಹಣ ಪಡೆಯಬಹುದು.

ಈ ವ್ಯವಸ್ಥೆ ಜಾರಿಗೂ ಮುನ್ನ 1995ರ ಉದ್ಯೋಗಿಗಳ ಪಿಂಚಣಿ ಯೋಜನೆಯಡಿ ವಿಕೇಂದ್ರಿಕೃತ ವ್ಯವಸ್ಥೆ ಕಾರ್ಯನಿರ್ವಹಿಸುತ್ತಿತ್ತು. ಅದರಲ್ಲಿ ಪ್ರತಿ ವಲಯ ಅಥವಾ ಪ್ರಾಂತ್ಯದ ಇಪಿಎಫ್‌ಒ ಕಚೇರಿಗಳು 3-4 ಬ್ಯಾಂಕ್‌ಗಳೊಂದಿಗೆ ಪ್ರತ್ಯೇಕ ಒಪ್ಪಂದ ಹೊಂದಿದ್ದವು. ಅವುಗಳ ಮೂಲಕವೇ ಹಣ ಪಡೆಯಬೇಕಿತ್ತು.

ಆಂದೋಲನ ಡೆಸ್ಕ್

Recent Posts

ಸಿಎಂಗೆ ವಿದ್ಯಾರ್ಥಿಗಳ ಪತ್ರ

ಮಹಾದೇಶ್ ಎಂ ಗೌಡ ಹನೂರು: ತಮ್ಮ ಊರಿನಿಂದ ದೂರದಲ್ಲಿರುವ ಶಾಲಾ ಕಾಲೇಜುಗಳಿಗೆ ಹೋಗುವುದಕ್ಕೆ ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸಲು ಕೋರಿ…

2 hours ago

ದಿವ್ಯ ಎಂಬ ಅಂದಿನ ಕಾಲದ ಪಣ ಪರೀಕ್ಷೆ

ಬಿ.ಎಸ್.ವಿನಯ್ ಮೊನ್ನೆ ಯಳಂದೂರಿನ ಬೀದಿಯಲ್ಲಿ ಸಾಗುತ್ತಿದ್ದಾಗ ಬಳೆಮಂಟಪದ ಮುಂದೆ ಪರಿಚಿತ ಹಿರಿಯರೊಬ್ಬರು ಎದುರಾದರು. ‘ಯಜಮಾನರೇ, ಕಾರ್ಯಕ್ರಮಕ್ಕೆ ಯಾಕೆ ಬರಲಿಲ್ಲ?’ ಕೇಳಿದರೆ…

2 hours ago

ಎಮ್ಮೆ ನಿನಗೆ ಸಾಟಿ ಇಲ್ಲ…

ವಿನುತ ಕೋರಮಂಗಲ ನಮ್ಮ ಹಟ್ಟಿಯಿಂದ ನಾಲ್ಕೈದು ಕಿ.ಮೀ. ದೂರವಿರುವ ನಮ್ಮೂರಿನ ಕೆರೆಯ ಅಂಗಳಕ್ಕೆ ನಾವೇನು ನಡೆದುಕೊಂಡು ಹೋಗುತ್ತಿರಲಿಲ್ಲ. ಗಂಗೆ ಎಂದು…

2 hours ago

ಭಾನುವಾರದ ಪುರವಣಿಗಳಲ್ಲಿ ಸಾಹಿತ್ಯ ಯಾಕೆ ಮಾಯ?

ಅಕ್ಷತಾ ಖಾಲಿ ಹಾಳೆಯ ಒಂದೇ ಮಗ್ಗುಲಿನಲ್ಲಿ ಚಿತ್ತಿಲ್ಲದಂತೆ ಬರೆದು, ಪದ ಮಿತಿಯನ್ನು ಬೆರಳು ಲೆಕ್ಕದಲ್ಲಿ ಎಣಿಸಿ, ಪತ್ರಿಕೆಯ ವಿಳಾಸಕ್ಕೆ ಕಳುಹಿಸಿದ…

2 hours ago

ಹನೂರು: ಏಕಕಾಲದಲ್ಲೇ ಕಾಣಿಸಿಕೊಂಡ ಎರಡು ಚಿರತೆಗಳು

ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…

13 hours ago