ನವದೆಹಲಿ: ಕೇಂದ್ರ ಕಾರ್ಮಿಕ ಸಚಿವಾಲಯವು ಇತ್ತೀಚಿಗೆ ಏಕೀಕೃತ ಪಿಂಚಣಿ ಪಾವತಿ ವ್ಯವಸ್ಥೆಯನ್ನು(CPPO) ಜಾರಿ ಮಾಡಿದೆ. ಈ ವ್ಯವಸ್ಥೆಯ ಮೂಲಕ ಪಿಂಚಣಿದಾರರು ದೇಶದ ಯಾವುದೇ ರಾಜ್ಯದ, ಯಾವುದೇ ಬ್ಯಾಂಕಿನ ಶಾಖೆಯಲ್ಲಿ ತಮ್ಮ ಪಿಂಚಣಿಯನ್ನು ಪಡೆಯಬಹುದಾಗಿದೆ.
ಈ ವ್ಯವಸ್ಥೆಯಿಂದ ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್ಒ) ವ್ಯಾಪ್ತಿಗೆ ಬರುವ 68 ಲಕ್ಷ ಪಿಂಚಣಿದಾರರಿಗೆ ಉಪಯೋಗವಾಗಲಿದೆ.
ಪಿಂಚಣಿದಾರರು ಪಿಂಚಣಿ ಪರಿಶೀಲನೆಗಾಗಿ ಬ್ಯಾಂಕ್ ಶಾಖೆಗೆ ಭೇಟಿ ನೀಡುವ ಆಗತ್ಯವಿಲ್ಲ. ಪಿಂಚಣಿ ಮೊತ್ತ ನೇರವಾಗಿ ತಮ್ಮ ಖಾತೆಗೆ ಜಮೆಯಾಗಲಿದೆ. ಪಿಂಚಣಿದಾರರು ಒಂದು ಕಡೆಯಿಂದ ಮತ್ತೊಂದು ಕಡೆಗೆ ಸ್ಥಳಾಂತರವಾದರೂ ಬ್ರಾಂಚ್ ಬದಲಿಸುವ ಆಗತ್ಯವಿಲ್ಲ. ಅದಕ್ಕೆ ಬದಲಾಗಿ ದೇಶದ ಯಾವುದೇ ಬ್ಯಾಂಕ್ ಶಾಖೆಯಿಂದ ಹಣ ಪಡೆಯಬಹುದು.
ಈ ವ್ಯವಸ್ಥೆ ಜಾರಿಗೂ ಮುನ್ನ 1995ರ ಉದ್ಯೋಗಿಗಳ ಪಿಂಚಣಿ ಯೋಜನೆಯಡಿ ವಿಕೇಂದ್ರಿಕೃತ ವ್ಯವಸ್ಥೆ ಕಾರ್ಯನಿರ್ವಹಿಸುತ್ತಿತ್ತು. ಅದರಲ್ಲಿ ಪ್ರತಿ ವಲಯ ಅಥವಾ ಪ್ರಾಂತ್ಯದ ಇಪಿಎಫ್ಒ ಕಚೇರಿಗಳು 3-4 ಬ್ಯಾಂಕ್ಗಳೊಂದಿಗೆ ಪ್ರತ್ಯೇಕ ಒಪ್ಪಂದ ಹೊಂದಿದ್ದವು. ಅವುಗಳ ಮೂಲಕವೇ ಹಣ ಪಡೆಯಬೇಕಿತ್ತು.
ಕೊಡಗು: ಸಿಎಂ ಡಿ.ಕೆ.ಶಿವಕುಮಾರ್ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕೊಡವತಿಯರು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್ಗೆ ಶಿಫ್ಟ್ ಮಾಡಲಾಗಿದೆ. ಇಬ್ಬರ ಬ್ಯಾರಕ್ನಲ್ಲಿದ್ದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮದ ಶಾಖೆ ಅರಣ್ಯದಲ್ಲಿ ನಡೆದ ಗುಂಡಿನ…
ಕುಶಾಲನಗರ: ತಾಲ್ಲೂಕಿನ ಕೂಡಿಗೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಮುಂದುವರಿದಿದ್ದು, ವ್ಯಕ್ತಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಹೆಗ್ಗಡಹಳ್ಳಿ ಗ್ರಾಮದ…
ಜಕಾರ್ತ: ಇಂಡೋನೇಷ್ಯಾದ ಫ್ಲೋರ್ಸ್ ದ್ವೀಪದಲ್ಲಿ ಶನಿವಾರ ಮುಂಜಾನೆ 7.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಮೃತರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ.…