ದೇಶ- ವಿದೇಶ

ಮಾತುಕತೆಗೆ ಆಹ್ವಾನಿಸಿದ ಕೇಂದ್ರ ಸರ್ಕಾರ: ಅಮರಣಾಂತ ಉಪವಾಸ ಕೈಬಿಟ್ಟ 121 ಮಂದಿ ರೈತರು

ಚಂಡೀಗಡ: ಕೇಂದ್ರ ಸರ್ಕಾರ ಫೆ.14 ರಂದು ಮಾತುಕತೆಗೆ ಆಹ್ವಾನಿಸುತ್ತಿದ್ದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ನವೆಂಬರ್‌ 26 ರಿಂದ ಅಮರಣಾಂತ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದ ರೈತ ನಾಯಕ ದಲ್ಲೆವಾಲ್‌ ಮತ್ತು 121 ಮಂದಿ ರೈತರು ಉಪವಾಸ ಅಂತ್ಯಗೊಳಿಸಿದ್ದಾರೆ.

ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರ ಬಂದಾಗಿನಿಂದ ರೈತರ ಮೇಲೆ ದಬ್ಬಾಳಿಕೆ ಮಾಡುವಂತಹ ಕೃಷಿ ನೀತಿಗಳನ್ನು ಜಾರಿ ಮಾಡುತ್ತಿದ್ದಾರೆ. ಇದರಿಂದ ರೈತರು ಸಮಸ್ಯೆಗೆ ಈಡಾಗುತ್ತಿದ್ದಾರೆ ಎಂದು ರೈತ ನಾಯಕ ದಲ್ಲೆವಾಲ್‌ ನ.26 ರಿಂದ ಅಮರಣಾಂತ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದರು.

ಅವರ ಆರೋಗ್ಯವು ಹದಗೆಟ್ಟಿದ್ದರಿಂದ ಮತ್ತು ಸರ್ಕಾರವು ರೈತರ ಬೇಡಿಕೆಗಳಿಗೆ ಸ್ಪಂದಿಸದ ಕಾರಣ ಜನವರಿ ತಿಂಗಳು 121 ಮಂದಿ ರೈತರು ಹರಿಯಾಣದ ಖನೌರಿ ಬಳಿ ದಲ್ಲೆವಾಲ್‌ ಅವರ ಉಪವಾಸ ಸತ್ಯಾಗ್ರಹಕ್ಕೆ ಕೈ ಜೋಡಿಸಿದ್ದರು.

ಕೆಂದ್ರ ಸಚಿವಾಲಯದ ಜಂಟಿ ಕಾರ್ಯದರ್ಶಿ ಪ್ರಿಯಾ ರಂಜನ್‌ ನೇತೃತ್ವದ ಉನ್ನತ ಮಟ್ಟದ ಕೇಂದ್ರ ನಿಯೋಗವು ರೈತ ಮುಖಂಡ ದಲ್ಲೆವಾಲ್‌ ಮತ್ತು ಸಂಯುಕ್ತ ಕಿಸಾನ್‌ ಮೋರ್ಚಾ ಮತ್ತು ಕಿಸಾನ್‌ ಮಜ್ದೂರ್‌ ಮೋರ್ಚಾದ ಪ್ರತಿನಿಧಿಗಳನ್ನು ಭೇಟಿ ಮಾಡಿ ಫೆ.14ರಂದು ಮಾತುಕತೆಗೆ ಆಹ್ವಾನಿಸಿದ ನಂತರ ದಲ್ಲೆವಾಲ್‌ ಉಪವಾಸ ಅಂತ್ಯಗೊಳಿಸಿ ವೈದ್ಯಕೀಯ ಚಿಕಿತ್ಸೆ ಪಡೆಯಲು ಒಪ್ಪಿಗೆ ನೀಡಿದರು.

ಉಪ ಪೊಲೀಸ್‌ ಮಹಾನಿರೀಕ್ಷಕ ಮನ್ದೀಪ್‌ ಸಿಂಗ್‌ ಸಿಧು ಮತ್ತು ಪಟಿಯಾಲದ ಹಿರಿಯ ಪೊಲೀಸ್‌ ವರಿಷ್ಠಾಧಿಕಾರಿ ನಾಸಿಕ್‌ ಸಿಂಗ್‌ ಅವರ ಸಮ್ಮುಖದಲ್ಲಿ 121 ರೈತರು ಜ್ಯೂಸ್‌ ಕುಡಿಯುವ ಮೂಲಕ ಉಪವಾಸ ಕೊನೆಗೊಳಿಸಿದರು.

ಆಂದೋಲನ ಡೆಸ್ಕ್

Recent Posts

ರಾಜ್ಯದ ಅಭಿವೃದ್ಧಿಗೆ ಪೂರಕವಾದ ಬಜೆಟ್‌ ಮಂಡಿಸಿದ್ದೇನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೇಂದ್ರ ಸರ್ಕಾರ ಜಿಎಸ್‌ಟಿ ಕೊಡದಿದ್ದರಿಂದ ರಾಜ್ಯದ ಬೆಳವಣಿಗೆ ಕಡಿಮೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು. 2026-27ನೇ ಸಾಲಿನ ಬಜೆಟ್‌…

1 hour ago

2025-26ನೇ ಸಾಲಿನ ರಾಜ್ಯ ಬಜೆಟ್ ಕುರಿತು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಪ್ರತಿಕ್ರಿಯೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ಅತ್ಯಂತ ಜನಪರ ಬಜೆಟ್‌ ಮಂಡನೆ ಮಾಡಿದ್ದಾರೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಸಂತಸ…

2 hours ago

ರಾಜ್ಯ ಬಜೆಟ್‌ನಲ್ಲಿ ಜಯದೇವ ಆಸ್ಪತ್ರೆಗೆ 180 ಕೋಟಿ ಅನುದಾನ: ಸಿಎಂ ಸಿದ್ದುಗೆ ಡಾ.ಬಿ.ದಿನೇಶ್‌ ಧನ್ಯವಾದ

ಮೈಸೂರು: ಮೈಸೂರಿನ ಶ್ರೀ ಜಯದೇವ ಹೃದ್ರೋಗ ಆಸ್ಪತ್ರೆ ಉನ್ನತೀಕರಣಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ೧೮೦ ಕೋಟಿ ರೂ. ಅನುದಾನ ಘೋಷಿಸಿ,…

2 hours ago

ಸಿದ್ದರಾಮಯ್ಯ ದಾಖಲೆ ಮಾಡಲು ಹೋಗಿ ರಾಜ್ಯದ ಆರ್ಥಿಕತೆಯನ್ನು ದಿಕ್ಕಾಪಾಲಾಗಿಸಿದ್ದಾರೆ: ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಸ್ಲೋಗನ್ ರಾಮಯ್ಯನವರ ಬಜೆಟ್ಟಿನ ಸುದೀರ್ಘ ಪ್ರಲಾಪ ಆಲಿಸಿದೆ. ಅವರಿಗೆ 17ನೇ ಬಜೆಟ್ ಮಂಡಿಸಿದ ಖುಷಿ, ಜನರಿಗೆ ಬರೆ ಎಳೆಸಿಕೊಂಡ…

2 hours ago

ರಾಜ್ಯ ಬಜೆಟ್‌ ರೈತರ ಪಾಲಿಗೆ ತೀವ್ರ ನಿರಾಸೆ ತಂದಿದೆ: ಕುರುಬೂರು ಶಾಂತಕುಮಾರ್‌ ಅಸಮಾಧಾನ

ಮೈಸೂರು: ರಾಜ್ಯ ಸರ್ಕಾರ ಮಂಡಿಸಿರುವ ಬಜೆಟ್ ರೈತರ ಪಾಲಿಗೆ ತೀವ್ರ ನಿರಾಸೆ ತಂದಿದೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ…

3 hours ago

ನೀರಿನಲ್ಲಿ ಹೋಮ ಮಾಡಿದ ಸಿದ್ದರಾಮಯ್ಯ ಬಜೆಟ್:‌ ವಿಜಯೇಂದ್ರ ಕಿಡಿ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಂದು ಮಂಡಿಸಿದ ರಾಜ್ಯ ಬಜೆಟ್‌ ಅನ್ನು ಟೀಕಿಸಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು, ಸಿದ್ದರಾಮಯ್ಯ ಅವರು…

3 hours ago