ಹೊಸದಿಲ್ಲಿ : ಹಾರ್ಮುಜ್ ಜಲಸಂಧಿ ಸಂಘರ್ಷದಿಂದ ಉಂಟಾದ ಅಡುಗೆ ಅನಿಲ (ಎಲ್ಪಿಜಿ) ಸರಬರಾಜು ಕೊರತೆಯ ನಡುವೆ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಎಲ್ಲಾ ಎಲ್ಪಿಜಿ ಗ್ರಾಹಕರಿಗೆ ಬಯೋಮೆಟ್ರಿಕ್ ಆಧಾರ್ ದೃಢೀಕರಣವನ್ನು (ಇ-ಕೆವೈಸಿ) ಕಡ್ಡಾಯಗೊಳಿಸಿದೆ.
ಎಲ್ಲಾ ಎಲ್ಪಿಜಿ ಗ್ರಾಹಕರು ಬಯೋಮೆಟ್ರಿಕ್ ಆಧಾರ್ ಆಥೆಂಟಿಕೇಶನ್ (ಇ-ಕೆವೈಸಿ) ಪೂರ್ಣಗೊಳಿಸಬೇಕು. ಇದನ್ನು ಮನೆಯಲ್ಲೇ ತೈಲ ಮಾರುಕಟ್ಟೆ ಕಂಪನಿಗಳ ಮೊಬೈಲ್ ಅಪ್ಲಿಕೇಶನ್ ಮತ್ತು ಆಧಾರ್ ಫೇಸ್ಆರ್ಡಿ ಅಪ್ ಬಳಸಿ ಮಾಡಬಹುದು ಎಂದು ಸಚಿವಾಲಯವು ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ತಿಳಿಸಿದೆ.
ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿ (ಪಿಎಂಯುವೈ) ಸಬ್ಸಿಡಿ ಪಡೆಯುವ 10.51 ಕೋಟಿ ಗ್ರಾಹಕರಿಗೆ ವಾರ್ಷಿಕ ಬಯೋಮೆಟ್ರಿಕ್ ಇ-ಕೆವೈಸಿ ಈಗಾಗಲೇ ಕಡ್ಡಾಯವಾಗಲಿದೆ. ಇದು ಸಬ್ಸಿಡಿ ದುರುಪಯೋಗ ತಡೆಯುವುದು, ಸರಿಯಾದ ವಿತರಣೆ ಖಚಿತಪಡಿಸುವುದು ಮತ್ತು ಎಲ್ಪಿಜಿ ಸಿಲಿಂಡರ್ ಕಳ್ಳಸಾಗಾಣಿಕೆ ತಡೆಗೆ ಸಹಕಾರಿಯಾಗಲಿದೆ ಎಂದು ತಿಳಿಸಿದೆ.
ಹಾಗೇಯೆ, ಎಲ್ಪಿಜಿ ವಿತರಕರನ್ನು ಸಂಪರ್ಕಿಸುವಂತೆ ಸಲಹೆ ನೀಡಿರುವ ಸಚಿವಾಲಯ, ಹೆಚ್ಚಿನ ಮಾಹಿತಿಗಾಗಿ 1800-2333-555 ಸಹಾಯವಾಣಿಯನ್ನು ಸಂಪರ್ಕಿಸುವಂತೆ ತಿಳಿಸಿದೆ.
ದೂರ: ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ದೂರ ಗ್ರಾಮಕ್ಕೆ ಖ್ಯಾತ ನಟ, ನಿರ್ದೇಶಕ ಪ್ರಭುದೇವ ಶನಿವಾರ ಆಗಮಿಸಿದ್ದರು. ಅವರು ಮೊದಲು…
ರಿಯಾಧ್: ಸೌದಿ ಅರಾಮ್ಕೊ ತೈಲ ಕಂಪನಿಗೆ ಸೇರಿದ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದಾರೆ. ಸೌದಿ ಅರೇಬಿಯಾದ ರಾಸ್…
ಟಿ.ನರಸೀಪುರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲ್ಲೂಕಿನ ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ…
ಮೈಸೂರು: ನಗರದ ಪ್ರಮುಖ ಎರಡು ಹೋಟೆಲ್ಗಳನ್ನು ಬಾಂಬ್ ಮೂಲಕ ಸ್ಛೋಟಿಸುವುದಾಗಿ ಇ-ಮೇಲ್ ಮೂಲಕ ವ್ಯಕ್ತಿಯೊಬ್ಬ ಬೆದರಿಕೆ ಒಡ್ಡಿದ್ದು, ಕೆಲಕಾಲ ಆತಂಕ…
ಹನೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯುವತಿಯೊಬ್ಬರಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಅಜ್ಜೀಪುರ ಗ್ರಾಮದಲ್ಲಿ ನಡೆದಿದೆ.…
ಸರಗೂರು: ಮೈಸೂರು ಜಿಲ್ಲೆಯಲ್ಲಿ ಮತ್ತೆ ಹುಲಿ ಉಪಟಳ ಹೆಚ್ಚಾಗಿದ್ದು, ಹುಲಿ ದಾಳಿಗೆ ಕರುವೊಂದು ಬಲಿಯಾಗಿರುವ ಘಟನೆ ಸರಗೂರು ತಾಲ್ಲೂಕಿನ ಹೆಗ್ಗನೂರು…