ದೇಶ- ವಿದೇಶ

ಎಚ್‌ಡಿಕೆ ಪತ್ರಕ್ಕೆ ಕೇಂದ್ರ ಸ್ಪಂದನೆ : ಮಾವಿಗೆ ಪರಿಹಾರ ಘೋಷಣೆ

ಹೊಸದಿಲ್ಲಿ: ರಾಜ್ಯದ ಮಾವು ಬೆಳೆಗಾರರಿಗೆ ಸ್ಪಂದಿಸುವಂತೆ ಕೋರಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಬರೆದಿದ್ದ ಪತ್ರಕ್ಕೆ ಕೇಂದ್ರ ಕೃಷಿ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್‌ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಮಾರುಕಟ್ಟೆ ಮದ್ಯಪ್ರವೇಶ ಯೋಜನೆಯಡಿ ಮಾವಿಗೆ ಬೆಂಬಲ ಬೆಲೆ ಘೋಷಣೆ ಮಾಡಿದ್ದಾರೆ.

ಕೇಂದ್ರ ಸರ್ಕಾರದ ಮಾರುಕಟ್ಟೆ ಮಧ್ಯಸ್ಥಿಕೆ ಬೆಲೆ ಯೋಜನೆ ಅಡಿಯಲ್ಲಿ 2025-2 6ನೇ ಸಾಲಿಗೆ ಅನ್ವಯ ಆಗುವಂತೆ 2,50,000 ಮೆಟ್ರಿಕ್ ಟನ್ ಮಾವನ್ನು ಪ್ರತೀ ಕ್ವಿಂಟಾಲ್ ಗೆ ₹1616 ರಂತೆ ಮಾರುಕಟ್ಟೆ ಮಧ್ಯಸ್ಥಿಕೆ ಬೆಲೆ ಘೋಷಣೆ ಮಾಡಿದ್ದಾರೆ.

ಮನವಿ ಮಾಡಿದ ಕೂಡಲೇ ಕರ್ನಾಟಕದ ಮಾವು ಬೆಳೆಗಾರರ ನೆರವಿಗೆ ಧಾವಿಸಿದ ಕೇಂದ್ರದ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಧನ್ಯವಾದ ಹೇಳಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಪ್ರಧಾನಿಗಳಾದ ನರೇಂದ್ರ ಮೋದಿ ಅವರ ಸರಕಾರದ ರೈತಪರ ಬದ್ಧತೆ, ಅಚಲತೆಗೆ ನನ್ನ ಹೃದಯಪೂರ್ವಕ ಧನ್ಯವಾದಗಳು. ಬೆಲೆ ಕುಸಿತದಿಂದ ಕಂಗಾಲಾಗಿದ್ದ ರಾಜ್ಯದ ಮಾವು ಬೆಳೆಗಾರರ ಹಿತದೃಷ್ಟಿಯಿಂದ ಮನವಿ ಮಾಡಿದ ತಕ್ಷಣವೇ ಮಾರುಕಟ್ಟೆ ಮಧ್ಯಸ್ಥಿಕೆ ಬೆಲೆ ಯೋಜನೆ (Market Intervention Scheme-MIS) ಅಡಿಯಲ್ಲಿ ಬೆಂಬಲ ಬೆಲೆ ಘೋಷಿಸಿದ್ದಕ್ಕಾಗಿ ಕೇಂದ್ರದ ಕೃಷಿ ಸಚಿವರಾದ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಕರ್ನಾಟಕದ ಮಾವು ಬೆಳೆಗಾರರ ಪರವಾಗಿ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ.

ಪತ್ರ ಬರೆದಿದ್ದ ಸಚಿವರು: ಇದಕ್ಕೂ ಮುನ್ನ ಸಚಿವ ಕುಮಾರಸ್ವಾಮಿ ಅವರು, ರಾಜ್ಯದ ಮಾವು ಬೆಳೆಗಾರರ ನೆರವಿಗೆ ಧಾವಿಸುವಂತೆ ಕೃಷಿ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಅವರಿಗೆ ಪತ್ರ ಬರೆದಿದ್ದರು.

ಕರ್ನಾಟಕದ ಗ್ರಾಮೀಣ ಭಾಗದಲ್ಲಿ ಮಾವು ಬೆಳೆಗಾರರು ಬೆಲೆ ಕುಸಿತದಿಂದ ತೀವ್ರ ಕಷ್ಟಕ್ಕೆ ಸಿಲುಕಿದ್ದಾರೆ. ಸರಿಯಾದ ಬೆಲೆ ಸಿಗದ ಕಾರಣಕ್ಕೆ ಮಾವನ್ನು ರಸ್ತೆಗೆ ಸುರಿಯುತ್ತಿದ್ದಾರೆ. ಇಂಥ ಕಷ್ಟಕಾಲದಲ್ಲಿ ತಾವು ರೈತರ ನೆರವಿಗೆ ಧಾವಿಸಬೇಕು ಎಂದು ಕುಮಾರಸ್ವಾಮಿ ಅವರು ಕೋರಿದ್ದರು.

ಮಾವು ಕರ್ನಾಟಕದ ಪ್ರಮುಖ ತೋಟಗಾರಿಕಾ ಬೆಳೆಗಳಲ್ಲಿ ಒಂದಾಗಿದೆ. ಮಾವನ್ನು ರಾಜ್ಯದಲ್ಲಿ ಸುಮಾರು 1.39 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ, ಹೆಚ್ಚಾಗಿ ಬೆಂಗಳೂರು ಗ್ರಾಮೀಣ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ ಮತ್ತು ರಾಮನಗರ ಜಿಲ್ಲೆಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಬೆಳೆಯಲಾಗುತ್ತದೆ. ರಬಿ ಋತುವಿನಲ್ಲಿ ಅಂದಾಜು 8ರಿಂದ 10 ಲಕ್ಷ ಟನ್ ಮಾವು ಈ ಜಿಲ್ಲೆಗಳಲ್ಲಿ ಬೆಳೆಯಲ್ಪಡುತ್ತದೆ. ದುರದೃಷ್ಟದ ಸಂಗತಿ ಎಂದರೆ, ಹವಾಮಾನ ವೈಪರೀತ್ಯದಿಂದ ರೋಗರುಜಿನ ತಗುಲಿ ಪ್ರಸಕ್ತ ವರ್ಷದಲ್ಲಿ ಮಾವಿನ ಇಳುವರಿ ಶೇ.30ರಷ್ಟು ಕಡಿಮೆಯಾಗಿದೆ ಎಂದ ಅಂಶವನ್ನು ಸಚಿವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

6 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

9 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

13 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

15 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

16 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

17 hours ago