ದೇಶ- ವಿದೇಶ

ಇಂಡಿಗೋ ಏರ್‌ಲೈನ್ಸ್‌ಗೆ ಕೇಂದ್ರ ಸರ್ಕಾರದಿಂದ ಮೂಗುದಾರ: ಚಳಿಗಾಲ ವೇಳಾಪಟ್ಟಿ ಕಡಿತ

ನವದೆಹಲಿ: ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆ ಇಂಡಿಗೋದ ಕಾರ್ಯಾಚರಣೆಯಲ್ಲಿ ಅಸ್ತವ್ಯಸ್ತ ಉಂಟಾಗಿದ್ದು, ಪ್ರಯಾಣಿಕರು ಹಿಡಿಶಾಪ ಹಾಕುತ್ತಿದ್ದಾರೆ. ಕಳೆದ ಒಂದು ವಾರದಿಂದ ಪ್ರಯಾಣಿಕರು ವಿಮಾನ ಹಾರಾಟದಲ್ಲಿ ವ್ಯತ್ಯಯ ಅನುಭವಿಸಿದ್ದಾರೆ.

ಇದನ್ನು ಓದಿ: ಬಿಜೆಪಿ ಹೋರಾಟ ನಡೆಸಬೇಕಾಗಿದ್ದು ಕೇಂದ್ರ ಸರ್ಕಾರದ ವಿರುದ್ಧ: ಡಿಸಿಎಂ ಡಿ.ಕೆ.ಶಿವಕುಮಾರ್‌

ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಇಂಡಿಗೋ ಸಂಸ್ಥೆಗೆ ಮೂಗುದಾರ ಹಾಕಿದ್ದು, ಕೇಂದ್ರವು ಇಂಡಿಗೋದ ಚಳಿಗಾಲದ ವಿಮಾನ ವೇಳಾಪಟ್ಟಿಯನ್ನು ಕಡಿತಗೊಳಿಸಿ, ಆ ಸ್ಲಾಟ್‌ಗಳನ್ನು ಇತರ ವಿಮಾನಯಾನ ಸಂಸ್ಥೆಗಳಿಗೆ ಮರು ಹಂಚಿಕೆ ಮಾಡಲಿದೆ ಎಂದು ನಾಗರಿಕ ವಿಮಾನಯಾನ ಸಚಿವ ಕೆ.ರಾಮ್‌ ಮೋಹನ್‌ ನಾಯ್ಡು ಹೇಳಿದ್ದಾರೆ.

ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ರಾಮ್‌ ಮೋಹನ್‌ ನಾಯ್ಡು ಅವರು, ಪರಿಸ್ಥಿತಿಯನ್ನು ನಿರ್ಣಯಿಸಲು ಸೋಮವಾರ ರಾತ್ರಿ ಉನ್ನತ ಮಟ್ಟದ ಪರಿಶೀಲನಾ ಸಭೆ ನಡೆಸಲಾಗಿದೆ. ಹಿರಿಯ ಅಧಿಕಾರಿಗಳು ವಿಮಾನ ನಿಲ್ದಾಣಗಳಿಗೆ ಭೇಟಿ ನೀಡಿ ವಿಮಾನಯಾನ ಕಾರ್ಯಾಚರಣೆಗಳು ಹಾಗೂ ಪ್ರಯಾಣಿಕರ ಸೇವೆಗಳನ್ನು ಪರಿಶೀಲನೆ ನಡೆಸಲು ನಿರ್ದೇಶಿಸಲಾಗಿದೆ ಎಂದು ಹೇಳಿದ್ದಾರೆ. ಪ್ರಯಾಣಿಕರು ಗುರುತಿಸಿರುವ ಅಂತರಗಳು ಸೇರಿದಂತೆ ಯಾವುದೇ ಅಂತರವನ್ನು ಗುರುತಿಸಿದರೆ ಅವುಗಳನ್ನು ತಕ್ಷಣವೇ ಸರಿಪಡಿಸಬೇಕು ಎಂದು ಹೇಳಿದ್ದಾರೆ.

ಆಂದೋಲನ ಡೆಸ್ಕ್

Recent Posts

ಅಂಗಡಿ ವ್ಯಾಪಾರಕ್ಕೆ ಅನುಮತಿ ಪಡೆದು ಬಾರ್ ಆರಂಭ!

ಎಸ್.ಎಸ್.ಭಟ್ ಮಹಿಳೆಯರು, ಮಕ್ಕಳಲ್ಲಿ ಆತಂಕ; ಬಾರ್ ಮುಚ್ಚಿಸಲು ಕಸುವಿನಹಳ್ಳಿ ಗ್ರಾಮಸ್ಥರ ಆಗ್ರಹ ನಂಜನಗೂಡು: ಮದ್ಯಪಾನ, ಧೂಮಪಾನ ರಹಿತ ವ್ಯಾಪಾರಕ್ಕೆ ಅನುಮತಿ…

6 mins ago

ಹೆಣ್ಣು ಮಗು ಮಾರಾಟ ; ಐವರ ಬಂಧನ

ಚಾಮರಾಜನಗರ : ಆರು ತಿಂಗಳ ಹೆಣ್ಣು ಮಗುವನ್ನು ಮಾರಾಟ ಮಾಡಿರುವ ಪ್ರಕರಣ ನಗರದಲ್ಲಿ ನಡೆದಿದ್ದು, ಈ ಸಂಬಂಧ ಪೋಷಕರು ಸೇರಿದಂತೆ…

11 hours ago

ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ : ಗಡಿ ಜಿಲ್ಲೆಯಲ್ಲಿ ಅಮಾನವೀಯ ಘಟನೆ

ಹನೂರು : ಜಮೀನಿನಲ್ಲಿ ಹುರುಳಿ ಫಸಲನ್ನು ಹಸು ಮೇಯ್ದಿದ್ದದನ್ನು ಪ್ರಶ್ನೆಸಿದ್ದಕ್ಕೆ ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ…

11 hours ago

ಹಾಸನದಲ್ಲಿ ಜಾ.ದಳ ಶಕ್ತಿ ಪ್ರದರ್ಶನ : ಚುನಾವಣೆಗೆ ತಯಾರಾಗುವಂತೆ ಕಾರ್ಯಕರ್ತರಿಕೆ ಎಚ್‌ಡಿಕೆ ಕರೆ

ಹಾಸನ : ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಸಿದ್ಧತೆ ನಡೆಸುವ ಸಂದೇಶವನ್ನು ರಾಜ್ಯದ ಜನರಿಗೆ ತಲುಪಿಸುವ ಗುರಿಯೊಂದಿಗೆ ನಗರದಲ್ಲಿ ಆಯೋಜಿಸಿದ್ದ…

12 hours ago

ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ; 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

ಮಳವಳ್ಳಿ : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಹತ್ತುಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಹೊಸಹಳ್ಳಿ…

12 hours ago