ಜಮ್ಮು-ಕಾಶ್ಮೀರ: ಜಮ್ಮು-ಕಾಶ್ಮೀರದಲ್ಲಿ ಉಗ್ರರ ಒಳನುಸುಳುವಿಕೆ ತಡೆಗಟ್ಟಲು ಕೇಂದ್ರ ಸರ್ಕಾರ ಸೂಪರ್ ಪ್ಲಾನ್ ಮಾಡಿದೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಇತ್ತೀಚೆಗೆ ಭಯೋತ್ಪಾದಕ ದಾಳಿಗಳು ಹೆಚ್ಚಾಗುತ್ತಲೇ ಇವೆ. ಲೋಕಸಭಾ ಚುನಾವಣೆ ಮುಗಿದ ಬಳಿಕ ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿಗಳು ಪದೇ ಪದೇ ನಡೆಯುತ್ತಿವೆ ಎಂಬ ಆತಂಕಕ್ಕಾರಿ ಮಾಹಿತಿ ಹೊರಬಂದಿತ್ತು. ಹಾಗಾಗಿಯೇ ಈ ತಿಂಗಳ ಆರಂಭದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಭಯೋತ್ಪಾದಕ ದಾಳಿ ಕುರಿತು ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದ್ದರು.
ಹೇಗಾದರೂ ಮಾಡಿ ಇದಕ್ಕೆ ಒಂದು ಅಂತ್ಯ ಹಾಡಲೇಬೇಕು ಎಂದು ಅರಿತ ಕೇಂದ್ರ ಸರ್ಕಾರ ಈಗ ಹೊಸ ಪ್ಲಾನ್ ರೂಪಿಸಿದೆ. ಕಾಶ್ಮೀರ ಕಣಿವೆಯನ್ನು ಭದ್ರ ಪಡಿಸಿರುವ ಕೇಂದ್ರ ಸರ್ಕಾರ ಇದೀಗ ಜಮ್ಮುವನ್ನು ಗುರಿಯಾಗಿಸುತ್ತಿರುವ ಉಗ್ರರನ್ನು ಮಟ್ಟಹಾಕಲು ಮುಂದಾಗಿದೆ.
ಅದಕ್ಕಾಗಿಯೇ ಜಮ್ಮು ಪ್ರದೇಶದಲ್ಲಿ ಭದ್ರತೆ ಹೆಚ್ಚಿಸುವ ಅಗತ್ಯತೆಗಳನ್ನು ಗುರುತಿಸಿದೆ. ಜಮ್ಮು ಮತ್ತು ಕಾಶ್ಮೀರ ಪ್ರವೇಶಿಸಲು ಭಯೋತ್ಪಾದಕರು ಕಂಡುಕೊಂಡಿರುವ ಒಳನುಸುಳುವಿಕೆ ಮಾರ್ಗಗಳನ್ನು ಗುರುತಿಸಿ ಅನಾಹುತಕ್ಕೆ ತಡೆಹಾಕುವುದು ಈ ಯೋಜನೆಯ ಪ್ರಾಥಮಿಕ ಉದ್ದೇಶವಾಗಿದೆ. ಈ ಮೂಲಕ ಕೇಂದ್ರ ಸರ್ಕಾರ ಭಾರತೀಯ ಸೈನಿಕರ ಜೊತೆಗಿದ್ದು, ಭಯೋತ್ಪಾದಕರನ್ನು ಮಟ್ಟ ಹಾಕಲು ಬಿಗ್ ಪ್ಲಾನ್ ಮಾಡಿದೆ.
ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ನಗರದ ಹೊರವಲಯದ ದೇವನೂರಿನಲ್ಲಿ ಎರಡು ಕಡೆಗಳಲ್ಲಿ ಪ್ರತ್ಯೇಕ ಕಾರ್ಯಾಚರಣೆ ನಡೆಸಿ ಒತ್ತುವರಿಯಾಗಿದ್ದ…
ಮಂಜು ಕೋಟೆ ಎಚ್. ಡಿ. ಕೋಟೆ : ರಾಜ್ಯದ ಪ್ರಮುಖ ಜಲಾಶಯವಾದ ತಾಲ್ಲೂಕಿನ ಕಬಿನಿ ಜಲಾಶಯದ ನೀರಿನ ಮಟ್ಟ ಮಳೆಯ…
ಮೈಸೂರು : ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ಗಳಿಗೆ 2026ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಗಳು ಬುಧವಾರದಿಂದ…
ಹಾಸನ: ಸಿಡಿಲು ಬಡಿದು ಮಹಿಳೆ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಆಲೂರು ತಾಲ್ಲೂಕಿನಲ್ಲಿ ನಡೆದಿದೆ. ನೀಲಮ್ಮ ಎಂಬುವವರೇ ಸಿಡಿಲು ಬಡಿದು ಸಾವನ್ನಪ್ಪಿರುವ…
ನವದೆಹಲಿ: ಬೈಸರನ್ ವ್ಯಾಲಿಗೆ ಪ್ರವಾಸಕ್ಕೆಂದು ಹೋಗಿದ್ದಾಗ 26 ಜನರು ಸಾವನ್ನಪ್ಪಿದ್ದ ಭಯೋತ್ಪಾದಕ ದಾಳಿಗೆ ನಾಳೆ ಒಂದು ವರ್ಷ. ಭಾರತೀಯ ಸೇನೆ…