ಜಮ್ಮು-ಕಾಶ್ಮೀರ: ಜಮ್ಮು-ಕಾಶ್ಮೀರದಲ್ಲಿ ಉಗ್ರರ ಒಳನುಸುಳುವಿಕೆ ತಡೆಗಟ್ಟಲು ಕೇಂದ್ರ ಸರ್ಕಾರ ಸೂಪರ್ ಪ್ಲಾನ್ ಮಾಡಿದೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಇತ್ತೀಚೆಗೆ ಭಯೋತ್ಪಾದಕ ದಾಳಿಗಳು ಹೆಚ್ಚಾಗುತ್ತಲೇ ಇವೆ. ಲೋಕಸಭಾ ಚುನಾವಣೆ ಮುಗಿದ ಬಳಿಕ ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿಗಳು ಪದೇ ಪದೇ ನಡೆಯುತ್ತಿವೆ ಎಂಬ ಆತಂಕಕ್ಕಾರಿ ಮಾಹಿತಿ ಹೊರಬಂದಿತ್ತು. ಹಾಗಾಗಿಯೇ ಈ ತಿಂಗಳ ಆರಂಭದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಭಯೋತ್ಪಾದಕ ದಾಳಿ ಕುರಿತು ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದ್ದರು.
ಹೇಗಾದರೂ ಮಾಡಿ ಇದಕ್ಕೆ ಒಂದು ಅಂತ್ಯ ಹಾಡಲೇಬೇಕು ಎಂದು ಅರಿತ ಕೇಂದ್ರ ಸರ್ಕಾರ ಈಗ ಹೊಸ ಪ್ಲಾನ್ ರೂಪಿಸಿದೆ. ಕಾಶ್ಮೀರ ಕಣಿವೆಯನ್ನು ಭದ್ರ ಪಡಿಸಿರುವ ಕೇಂದ್ರ ಸರ್ಕಾರ ಇದೀಗ ಜಮ್ಮುವನ್ನು ಗುರಿಯಾಗಿಸುತ್ತಿರುವ ಉಗ್ರರನ್ನು ಮಟ್ಟಹಾಕಲು ಮುಂದಾಗಿದೆ.
ಅದಕ್ಕಾಗಿಯೇ ಜಮ್ಮು ಪ್ರದೇಶದಲ್ಲಿ ಭದ್ರತೆ ಹೆಚ್ಚಿಸುವ ಅಗತ್ಯತೆಗಳನ್ನು ಗುರುತಿಸಿದೆ. ಜಮ್ಮು ಮತ್ತು ಕಾಶ್ಮೀರ ಪ್ರವೇಶಿಸಲು ಭಯೋತ್ಪಾದಕರು ಕಂಡುಕೊಂಡಿರುವ ಒಳನುಸುಳುವಿಕೆ ಮಾರ್ಗಗಳನ್ನು ಗುರುತಿಸಿ ಅನಾಹುತಕ್ಕೆ ತಡೆಹಾಕುವುದು ಈ ಯೋಜನೆಯ ಪ್ರಾಥಮಿಕ ಉದ್ದೇಶವಾಗಿದೆ. ಈ ಮೂಲಕ ಕೇಂದ್ರ ಸರ್ಕಾರ ಭಾರತೀಯ ಸೈನಿಕರ ಜೊತೆಗಿದ್ದು, ಭಯೋತ್ಪಾದಕರನ್ನು ಮಟ್ಟ ಹಾಕಲು ಬಿಗ್ ಪ್ಲಾನ್ ಮಾಡಿದೆ.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…