ದೇಶ- ವಿದೇಶ

ಕೇಂದ್ರ ಸರ್ಕಾರಿ ನೌಕರರಿಗೆ ಹೊಸ ಯೋಜನೆ ಘೋಷಣೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಹೊಸ ಪಿಂಚಣಿ ಯೋಜನೆ ಏಕೀಕೃತ ಪಿಂಚಣಿ ಯೋಜನೆಗೆ ಅನುಮೋದನೆ ನೀಡಿದೆ.

ಈ ಮೂಲಕ ಇನ್ನು ಮುಂದೆ ಸರ್ಕಾರಿ ನೌಕರರು ಯುಪಿಎಸ್‌ ಪಿಂಚಣಿ ಯೋಜನೆಯ ಲಾಭವನ್ನು ಪಡೆಯುತ್ತಾರೆ.

ಮೋದಿ ಸರ್ಕಾರ ನೌಕರರಿಗೆ ಹೊಸ ಪಿಂಚಣಿ ನೀತಿಯನ್ನು ಪ್ರಕಟಿಸಿದ್ದು, ಹೊಸ ಪಿಂಚಣಿ ನೀತಿಯ ಹೆಸರು ಏಕೀಕೃತ ಪಿಂಚಣಿ ಯೋಜನೆಯಾಗಿದೆ.

ಇದರ ಅಡಿಯಲ್ಲಿ ಒಬ್ಬ ಉದ್ಯೋಗಿಯು ಕನಿಷ್ಠ 25 ವರ್ಷಗಳ ಕಾಲ ಕೆಲಸ ಮಾಡಿದ್ದರೆ, ನಿವೃತ್ತಿಯ ಹಿಂದಿನ 12 ತಿಂಗಳುಗಳ ಸರಾಸರಿ ವೇತನದ ಕನಿಷ್ಠ 50 ಪ್ರತಿಶತವನ್ನು ಪಿಂಚಣಿಯಾಗಿ ಪಡೆಯುತ್ತಾನೆ.

ಈ ಬಗ್ಗೆ ಮಾತನಾಡಿದ ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್‌ ಅವರು, ಇಂದು ಕೇಂದ್ರ ಸಚಿವ ಸಂಪುಟವು ಸರ್ಕಾರಿ ನೌಕರರಿಗೆ ಏಕೀಕೃತ ಪಿಂಚಣಿ ಯೋಜನೆಗೆ ಅನುಮೋದನೆ ನೀಡಿದೆ. ಶೇಕಡಾ 50 ರಷ್ಟು ಖಚಿತವಾದ ಪಿಂಚಣಿ ಯೋಜನೆಯೆ ಮೊದಲ ಆಧಾರವಾಗಿದೆ. ಎರಡನೇ ಆಧಾರವು ಖಚಿತವಾದ ಕುಟುಂಬ ಪಿಂಚಣಿಯಾಗಿದೆ. ಸರಿಸುಮಾರು 23 ಲಕ್ಷ ಕೇಂದ್ರ ಸರ್ಕಾರಿ ನೌಕರರಿಗೆ ಪಿಂಚಣಿ ಲಭ್ಯವಿರುತ್ತದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಇಬ್ಬರು ಬಲಿ

ಹಾಸನ: ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಇಬ್ಬರು ಬಲಿಯಾಗಿರುವ ಘಟನೆ ನಡೆದಿದೆ. ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ದೊಡ್ಡಳ್ಳಿ ಗ್ರಾಮದ ಸುಧಾಮಣಿ ಹಾಗೂ…

9 mins ago

ಅಸ್ಸಾಂನಲ್ಲಿ ಘೋರ ದುರಂತ: ರೈಲು ಡಿಕ್ಕಿಯಾಗಿ 7 ಆನೆಗಳು ಸಾವು

ಗುವಾಹಟಿ: ರೈಲು ಡಿಕ್ಕಿ ಹೊಡೆದ ಪರಿಣಾಮ ಏಳು ಆನೆಗಳು ಸ್ಥಳದಲ್ಲೇ ಮೃತಪಟ್ಟಿದ್ದು, ಒಂದು ಆನೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಅಸ್ಸಾಂನ…

59 mins ago

ಬುರುಡೆ ಗ್ಯಾಂಗ್‌ನಲ್ಲಿ ಬಿರುಕು: ಏನಾಗಿದೆ ಗೊತ್ತಾ?

ಮಂಗಳೂರು: ಧರ್ಮಸ್ಥಳ ಷಡ್ಯಂತ್ರ ಪ್ರಕರಣದ ಪ್ರಮುಖ ಆರೋಪಿ ಮಾಸ್ಕ್‌ ಮ್ಯಾನ್‌ ಚಿನ್ನಯ್ಯ ಇದೀಗ ಬುರುಡೆ ಗ್ಯಾಂಗ್‌ ವಿರುದ್ಧವೇ ತಿರುಗಿ ಬಿದ್ದಿದ್ದಾನೆ.…

1 hour ago

ದ್ವೇಷ ಭಾಷಣ ಪ್ರತಿಬಂಧನ ಮಸೂದೆಗೆ ಅಂಕಿತ ಹಾಕದಂತೆ ರಾಜ್ಯಪಾಲರಿಗೆ ಪತ್ರ ಬರೆದ ಶೋಭಾ ಕರಂದ್ಲಾಜೆ

ಬೆಂಗಳೂರು: ಬೆಳಗಾವಿ ವಿಧಾನಮಂಡಲ ಅಧಿವೇಶನದಲ್ಲಿ ಅಂಗೀಕರಿಸಲಾದ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ಮಸೂದೆಗೆ ಅಂಕಿತ ಹಾಕಬಾರದು…

1 hour ago

ಓದುಗರ ಪತ್ರ: ಕಾನೂನು ಎಷ್ಟರ ಮಟ್ಟಿಗೆ ಕೆಲಸ ಮಾಡುತ್ತೆ?

ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ವಿಧೇಯಕವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಡಿ.೧೮ರಂದು ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ…

2 hours ago

ಓದುಗರ ಪತ್ರ:  ಸಾಮಾಜಿಕ ಬಹಿಷ್ಕಾರ ನಿಷೇಧ ಕಾನೂನು ಸ್ವಾಗತಾರ್ಹ

ರಾಜ್ಯದಲ್ಲಿ ‘ಸಾಮಾಜಿಕ ಬಹಿಷ್ಕಾರ ನಿಷೇಧ ’ ಕಾನೂನನ್ನು ಜಾರಿಗೊಳಿಸಲು ಮುಂದಾಗಿರುವ ರಾಜ್ಯಸರ್ಕಾರದ ಕ್ರಮ ಶ್ಲಾಘನೀಯ. ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ, ಸಾರ್ವಭೌಮತೆ,…

2 hours ago