ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಹೊಸ ಪಿಂಚಣಿ ಯೋಜನೆ ಏಕೀಕೃತ ಪಿಂಚಣಿ ಯೋಜನೆಗೆ ಅನುಮೋದನೆ ನೀಡಿದೆ.
ಈ ಮೂಲಕ ಇನ್ನು ಮುಂದೆ ಸರ್ಕಾರಿ ನೌಕರರು ಯುಪಿಎಸ್ ಪಿಂಚಣಿ ಯೋಜನೆಯ ಲಾಭವನ್ನು ಪಡೆಯುತ್ತಾರೆ.
ಮೋದಿ ಸರ್ಕಾರ ನೌಕರರಿಗೆ ಹೊಸ ಪಿಂಚಣಿ ನೀತಿಯನ್ನು ಪ್ರಕಟಿಸಿದ್ದು, ಹೊಸ ಪಿಂಚಣಿ ನೀತಿಯ ಹೆಸರು ಏಕೀಕೃತ ಪಿಂಚಣಿ ಯೋಜನೆಯಾಗಿದೆ.
ಇದರ ಅಡಿಯಲ್ಲಿ ಒಬ್ಬ ಉದ್ಯೋಗಿಯು ಕನಿಷ್ಠ 25 ವರ್ಷಗಳ ಕಾಲ ಕೆಲಸ ಮಾಡಿದ್ದರೆ, ನಿವೃತ್ತಿಯ ಹಿಂದಿನ 12 ತಿಂಗಳುಗಳ ಸರಾಸರಿ ವೇತನದ ಕನಿಷ್ಠ 50 ಪ್ರತಿಶತವನ್ನು ಪಿಂಚಣಿಯಾಗಿ ಪಡೆಯುತ್ತಾನೆ.
ಈ ಬಗ್ಗೆ ಮಾತನಾಡಿದ ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್ ಅವರು, ಇಂದು ಕೇಂದ್ರ ಸಚಿವ ಸಂಪುಟವು ಸರ್ಕಾರಿ ನೌಕರರಿಗೆ ಏಕೀಕೃತ ಪಿಂಚಣಿ ಯೋಜನೆಗೆ ಅನುಮೋದನೆ ನೀಡಿದೆ. ಶೇಕಡಾ 50 ರಷ್ಟು ಖಚಿತವಾದ ಪಿಂಚಣಿ ಯೋಜನೆಯೆ ಮೊದಲ ಆಧಾರವಾಗಿದೆ. ಎರಡನೇ ಆಧಾರವು ಖಚಿತವಾದ ಕುಟುಂಬ ಪಿಂಚಣಿಯಾಗಿದೆ. ಸರಿಸುಮಾರು 23 ಲಕ್ಷ ಕೇಂದ್ರ ಸರ್ಕಾರಿ ನೌಕರರಿಗೆ ಪಿಂಚಣಿ ಲಭ್ಯವಿರುತ್ತದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…
ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…
ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…