ನವದೆಹಲಿ: ರಾಜ್ಯಗಳಿಗೆ ಕೇಂದ್ರ ಸರ್ಕಾರ ಬಿಗ್ ಗಿಫ್ಟ್ ನೀಡಿದ್ದು, 50,571 ಕೋಟಿ ರೂ ಅನುದಾನವನ್ನು ಬಿಡುಗಡೆ ಮಾಡಿದೆ.
ಈ ಬಗ್ಗೆ ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ ಅವರು ಲೋಕಸಭೆಯಲ್ಲಿ ಮಾಹಿತಿ ನೀಡಿದ್ದಾರೆ.
ಅರುಣಾಚಲ ಪ್ರದೇಶ, ಹರಿಯಾಣ, ಕೇರಳ, ಪಂಜಾಬ್, ಮತ್ತು ತೆಲಂಗಾಣ ಹೊರತುಪಡಿಸಿ ಉಳಿದ ಎಲ್ಲಾ ಅಂದರೆ 23 ರಾಜ್ಯಗಳು ಕೇಂದ್ರ ಸರ್ಕಾರ ಒದಗಿಸಿದ ಬಡ್ಡಿ ರಹಿತ ಸೌಲಭ್ಯವನ್ನು ಪಡೆದುಕೊಂಡಿವೆ ಎಂದು ತಿಳಿಸಿದ್ದಾರೆ.
ವಿಶೇಷ ಅನುದಾನದಲ್ಲಿ ಉತ್ತರ ಪ್ರದೇಶ ರಾಜ್ಯಕ್ಕೆ ಅತೀ ಹೆಚ್ಚು ಅಂದರೆ 7,007.93 ಕೋಟಿ, ಮಧ್ಯಪ್ರದೇಶ 5,074.94 ಕೋಟಿ ಅನುದಾನ ಪಡೆದುಕೊಂಡಿವೆ. ಕರ್ನಾಟಕಕ್ಕೆ ಅತಿ ಕಡಿಮೆ ಅಂದರೆ 2272.87 ಕೋಟಿ ಬಿಡುಗಡೆ ಮಾಡಲಾಗಿದೆ.
ಇನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಈ ಬಾರಿಯ ಬಜೆಟ್ನಲ್ಲಿ ರಾಜ್ಯಗಳಿಗೆ ಕೇಂದ್ರದ ಬಂಡವಾಳ ಹೂಡಿಕೆಗಾಗಿ ವಿಶೇಷ ನೆರವು ಯೋಜನೆಗೆ 1.5 ಲಕ್ಷ ಕೋಟಿ ಹಂಚಿಕೆ ಮಾಡಿದ್ದರು. ಈ ಬಂಡವಾಳ ಹೆಚ್ಚಿಸಲು 50 ವರ್ಷ ಬಡ್ಡಿ ರಹಿತ ಸಾಲವನ್ನು ಕೇಂದ್ರ ಸರ್ಕಾರ ನೀಡುತ್ತಿರುವುದು ವಿಶೇಷವೆನಿಸಿದೆ.
ಬೆಂಗಳೂರು : ನಾಳೆಯಿಂದ ಐಪಿಎಲ್ ಪಂದ್ಯಾವಳಿಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಂಬಂಧಪಟ್ಟ…
ಮದ್ದೂರು : ಖಾಸಗಿ ಶಾಲೆ ಬಸ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ, 14 ವಿದ್ಯಾರ್ಥಿಗಳ ಜತೆಗೆ 6…
ಹನೂರು : ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ…
ಎಚ್.ಡಿ.ಕೋಟೆ : ರಾಜ್ಯದಲ್ಲಿ ಜಾತ್ಯತೀತ ಜನತಾದಳ-ಬಿಜೆಪಿಯ ಮೈತ್ರಿಯ ಸರ್ಕಾರ ಅಧಿಕಾರಕ್ಕೆ ಬಂದು ಜನಪರ ಆಡಳಿತ ನೀಡುವ ದಿನಗಳು ಹತ್ತಿರವಾಗುತ್ತಿವೆ ಎಂದು…
ಬೆಂಗಳೂರು : ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ತಾವು ಕಣದಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದ್ದಾರೆ.…
ಬೆಂಗಳೂರು : ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಎಸ್ಎಸ್ಎಲ್ಸಿ ಪರೀಕ್ಷಾ ಪದ್ಧತಿಯಲ್ಲಿ ಆಮೂಲಾಗ್ರ…