ನವದೆಹಲಿ: ರಾಜ್ಯಗಳಿಗೆ ಕೇಂದ್ರ ಸರ್ಕಾರ ಬಿಗ್ ಗಿಫ್ಟ್ ನೀಡಿದ್ದು, 50,571 ಕೋಟಿ ರೂ ಅನುದಾನವನ್ನು ಬಿಡುಗಡೆ ಮಾಡಿದೆ.
ಈ ಬಗ್ಗೆ ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ ಅವರು ಲೋಕಸಭೆಯಲ್ಲಿ ಮಾಹಿತಿ ನೀಡಿದ್ದಾರೆ.
ಅರುಣಾಚಲ ಪ್ರದೇಶ, ಹರಿಯಾಣ, ಕೇರಳ, ಪಂಜಾಬ್, ಮತ್ತು ತೆಲಂಗಾಣ ಹೊರತುಪಡಿಸಿ ಉಳಿದ ಎಲ್ಲಾ ಅಂದರೆ 23 ರಾಜ್ಯಗಳು ಕೇಂದ್ರ ಸರ್ಕಾರ ಒದಗಿಸಿದ ಬಡ್ಡಿ ರಹಿತ ಸೌಲಭ್ಯವನ್ನು ಪಡೆದುಕೊಂಡಿವೆ ಎಂದು ತಿಳಿಸಿದ್ದಾರೆ.
ವಿಶೇಷ ಅನುದಾನದಲ್ಲಿ ಉತ್ತರ ಪ್ರದೇಶ ರಾಜ್ಯಕ್ಕೆ ಅತೀ ಹೆಚ್ಚು ಅಂದರೆ 7,007.93 ಕೋಟಿ, ಮಧ್ಯಪ್ರದೇಶ 5,074.94 ಕೋಟಿ ಅನುದಾನ ಪಡೆದುಕೊಂಡಿವೆ. ಕರ್ನಾಟಕಕ್ಕೆ ಅತಿ ಕಡಿಮೆ ಅಂದರೆ 2272.87 ಕೋಟಿ ಬಿಡುಗಡೆ ಮಾಡಲಾಗಿದೆ.
ಇನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಈ ಬಾರಿಯ ಬಜೆಟ್ನಲ್ಲಿ ರಾಜ್ಯಗಳಿಗೆ ಕೇಂದ್ರದ ಬಂಡವಾಳ ಹೂಡಿಕೆಗಾಗಿ ವಿಶೇಷ ನೆರವು ಯೋಜನೆಗೆ 1.5 ಲಕ್ಷ ಕೋಟಿ ಹಂಚಿಕೆ ಮಾಡಿದ್ದರು. ಈ ಬಂಡವಾಳ ಹೆಚ್ಚಿಸಲು 50 ವರ್ಷ ಬಡ್ಡಿ ರಹಿತ ಸಾಲವನ್ನು ಕೇಂದ್ರ ಸರ್ಕಾರ ನೀಡುತ್ತಿರುವುದು ವಿಶೇಷವೆನಿಸಿದೆ.
ನಂಜನಗೂಡು ತಾಲ್ಲೂಕು ಬಾಗೂರು ಅಣೆಕಟ್ಟೆ ದೊಡ್ಡ ಅಣೆಕಟ್ಟೆಯಾಗಿದೆ. ಹಿಂದೆ ಅನೇಕ ಹಳ್ಳಿಗಳಿಗೆ ಕೋಡಿ ತುಂಬಿ ಯಥೇಚ್ಛವಾಗಿ ಇದರಿಂದ ನೀರು ಹರಿದು…
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರುಪಯೋಗ ಪ್ರಕರಣದಲ್ಲಿ ಸಚಿವ ಬಿ.ನಾಗೇಂದ್ರ ಅವರು ರಾಜೀನಾಮೆ ನೀಡಿದ್ದಾರೆ. ಇದೇ ಹಗರಣಕ್ಕೆ ಸಂಬಂಧಿಸಿದಂತೆ, ಸಿದ್ದರಾಮಯ್ಯ…
ಸಾಂಸ್ಕೃತಿಕ ನಗರಿ, ಅರೆಮನೆ ನಗರಿ, ಸ್ವಚ್ಛನಗರಿ, ಹಿರಿಯ ನಾಗರಿಕರ ಸ್ವರ್ಗ ಎಂದೆಲ್ಲಾ ಹೆಸರುವಾಸಿಯಾಗಿರುವ ಮೈಸೂರಿನಲ್ಲೂ ಈಗಿನ ಕಾನೂನು ವ್ಯವಸ್ಥೆಯ ಬಗ್ಗೆ…
ಶಿವಾಜಿ ಗಣೇಶನ್ ಅವರ ವಾರದ ಅಂಕಣ ದೇವರು, ಧರ್ಮ ಮತ್ತು ಪುರಾಣಗಳ ಗೊತ್ತಿಲ್ಲದ ಮತ್ತು ಅನುಮಾನಗೊಂಡ ಹಾಗೂ ಅರ್ಥವಾಗದ ವಿಷಯಗಳ…
ರಾಮನಾಥ ಎಸ್. ಹೆಚ್.ಕೆ.ದ್ವಾರಕಾನಾಥ್, ಕರ್ನಾಟಕ ರಂಗಭೂಮಿಗೆ ರಂಗಭೀಷ್ಮ ಬಿ.ವಿ.ಕಾರಂತರಿತ್ತ ಕೊಡುಗೆ. ಚಾಮರಾಜೇಂದ್ರ ದೃಶ್ಯ ಕಲಾ ಅಕಾಡೆಮಿಯಲ್ಲಿ ಓದುತ್ತಾ, ಬದುಕಿಗಾಗಿ ಬವಣೆಪಡುತ್ತಾ,…
ಶೇಷಾದ್ರಿ ಗಂಜೂರು ದೆಹಲಿಯ ಜಂತರ್ ಮಂತರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿಯ ಪ್ರತಿಭಟನೆಯಲ್ಲಿ ಬಳಕೆ ಯಾದ ‘ಅಸಭ್ಯ ಭಾಷೆ’ ಅದರಲ್ಲೂ ಹುಡುಗಿಯರು…