ನವದೆಹಲಿ: ರಾಜ್ಯಗಳಿಗೆ ಕೇಂದ್ರ ಸರ್ಕಾರ ಬಿಗ್ ಗಿಫ್ಟ್ ನೀಡಿದ್ದು, 50,571 ಕೋಟಿ ರೂ ಅನುದಾನವನ್ನು ಬಿಡುಗಡೆ ಮಾಡಿದೆ.
ಈ ಬಗ್ಗೆ ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ ಅವರು ಲೋಕಸಭೆಯಲ್ಲಿ ಮಾಹಿತಿ ನೀಡಿದ್ದಾರೆ.
ಅರುಣಾಚಲ ಪ್ರದೇಶ, ಹರಿಯಾಣ, ಕೇರಳ, ಪಂಜಾಬ್, ಮತ್ತು ತೆಲಂಗಾಣ ಹೊರತುಪಡಿಸಿ ಉಳಿದ ಎಲ್ಲಾ ಅಂದರೆ 23 ರಾಜ್ಯಗಳು ಕೇಂದ್ರ ಸರ್ಕಾರ ಒದಗಿಸಿದ ಬಡ್ಡಿ ರಹಿತ ಸೌಲಭ್ಯವನ್ನು ಪಡೆದುಕೊಂಡಿವೆ ಎಂದು ತಿಳಿಸಿದ್ದಾರೆ.
ವಿಶೇಷ ಅನುದಾನದಲ್ಲಿ ಉತ್ತರ ಪ್ರದೇಶ ರಾಜ್ಯಕ್ಕೆ ಅತೀ ಹೆಚ್ಚು ಅಂದರೆ 7,007.93 ಕೋಟಿ, ಮಧ್ಯಪ್ರದೇಶ 5,074.94 ಕೋಟಿ ಅನುದಾನ ಪಡೆದುಕೊಂಡಿವೆ. ಕರ್ನಾಟಕಕ್ಕೆ ಅತಿ ಕಡಿಮೆ ಅಂದರೆ 2272.87 ಕೋಟಿ ಬಿಡುಗಡೆ ಮಾಡಲಾಗಿದೆ.
ಇನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಈ ಬಾರಿಯ ಬಜೆಟ್ನಲ್ಲಿ ರಾಜ್ಯಗಳಿಗೆ ಕೇಂದ್ರದ ಬಂಡವಾಳ ಹೂಡಿಕೆಗಾಗಿ ವಿಶೇಷ ನೆರವು ಯೋಜನೆಗೆ 1.5 ಲಕ್ಷ ಕೋಟಿ ಹಂಚಿಕೆ ಮಾಡಿದ್ದರು. ಈ ಬಂಡವಾಳ ಹೆಚ್ಚಿಸಲು 50 ವರ್ಷ ಬಡ್ಡಿ ರಹಿತ ಸಾಲವನ್ನು ಕೇಂದ್ರ ಸರ್ಕಾರ ನೀಡುತ್ತಿರುವುದು ವಿಶೇಷವೆನಿಸಿದೆ.
ಬಿ.ಟಿ.ಮೋಹನ್ ಕುಮಾರ್ ಮಂಡ್ಯ: ಮಂಡ್ಯ ವಿವಿ ಆರಂಭವಾದಾಗಿನಿಂದ ಒಂದಲ್ಲಾ ಒಂದು ಸಮಸ್ಯೆ ಎದುರಾಗುತ್ತಿದ್ದು, ವಿವಿಗೆ ೧೨ಬಿ ಮಾನ್ಯತೆ ಸಿಕ್ಕಿಲ್ಲದಿರುವುದು ಹಲವು…
ನವೀನ್ ಡಿಸೋಜ ಮಂಗಳೂರು ವಿವಿ ಅಧೀನದಲ್ಲಿದ್ದ ಕೊಡಗು ಈಗ ಪ್ರತ್ಯೇಕ ವಿವಿಯಾಗಿ ರೂಪುಗೊಂಡಿದೆ. ಆದರೆ, ಆಡಳಿತಾತ್ಮಕ ಹುದ್ದೆ ಭರ್ತಿಯಾಗದಿರುವುದು ಮತ್ತು…
ಚಾಮರಾಜನಗರ ವಿವಿ ಪ್ರಾರಂಭವಾಗಿ ೩ ವರ್ಷಗಳನ್ನು ಪೂರೈಸಿದೆ. ಈ ಬಾರಿ ಪ್ರಪ್ರಥಮ ಘಟಿಕೋತ್ಸವದ ಸಂಭ್ರಮದಲ್ಲಿದೆ. ಆದರೆ ಇನ್ನೂ ಅತಿಥಿ ಅಧ್ಯಾಪಕರು,…
ಗಿರೀಶ್ ಹುಣಸೂರು ರಾಜ್ಯದ ಮೊತ್ತ ಮೊದಲ ವಿವಿ ಎಂಬ ಹೆಗ್ಗಳಿಕೆಯ ಮೈಸೂರು ವಿವಿಗೆ ೧೧೦ ವರ್ಷಗಳಷ್ಟು ಹಿರಿತನವಿದೆ. ಆದರೆ, ಕೆಲವು…
ಮೈಸೂರು ವಿವಿ ಕ್ರಾಫರ್ಡ್ ಭವನದ ಎದುರಿನ ರಸ್ತೆ ಬದಿಯಲ್ಲಿರುವ ಮರ ಒಣಗಿದೆ. ಈ ಮಾರ್ಗದಲ್ಲಿ ಪ್ರತಿನಿತ್ಯ ನೂರಾರು ವಾಹನಗಳು ಹಾಗೂ…
ದಕ್ಷಿಣ ಭಾರತದ ಕೋಗಿಲೆ ಎಂದೇ ಜನಪ್ರಿಯರಾಗಿದ್ದ, ಎಸ್. ಜಾನಕಿಯವರು ತಮ್ಮ ಅಂತಿಮ ಇಚ್ಛೆಯಂತೆ ಕನ್ನಡದ ನೆಲದಲ್ಲಿ ಅದರಲ್ಲೂ ಸಾಂಸ್ಕೃತಿಕ ನಗರಿ…