ದೇಶ- ವಿದೇಶ

ಕೇಂದ್ರ ಬಜೆಟ್‌ನಲ್ಲಿ 9 ಕ್ಷೇತ್ರಗಳಿಗೆ ಆದ್ಯತೆ

ನವದೆಹಲಿ: ಮೂರನೇ ಬಾರಿಗೆ ಬಹುಮತದೊಂದಿಗೆ ಕೇಂದ್ರದಲ್ಲಿ ಅಧಿಕಾರ ಹಿಡಿದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಮೈತ್ರಿ ಸರ್ಕಾರ ಇಂದು ಮೂರನೇ ಅವಧಿಯ ಮೊದಲ ಬಜೆಟ್‌ ಮಂಡಿಸಿದೆ.

ಕೇಂದ್ರ ವಿತ್ತ ಸಚಿವ ನಿರ್ಮಲಾ ಸೀತಾರಾಮನ್‌ ಅವರು, ಹೊಸ ಸಂಸತ್‌ ಭವನದಲ್ಲಿ ಕೇಂದ್ರ ಬಜೆಟ್‌ ಮಂಡಿಸಿದ್ದಾರೆ.

ಮೊದಲಿಗೆ ನಿರ್ಮಲಾ ಸೀತಾರಾಮನ್‌ ಅವರು, ಬಜೆಟ್‌ ಬಗ್ಗೆ ಸಂಪೂರ್ಣ ವಿವರ ಹೇಳಿದ್ದು, ಬಜೆಟ್‌ನಲ್ಲಿ 9 ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ಹೇಳಿದ್ದಾರೆ.

ಮೊದಲಿಗೆ ಉತ್ಪಾದಕರೆ ಮತ್ತು ಅಭಿವೃದ್ಧಿಗೆ ದೇಶ ಮೊದಲ ಆದ್ಯತೆ ನೀಡಲಾಗಿದ್ದು, ಅನ್ನದಾತರು, ಕಾರ್ಮಿಕರು, ಮಹಿಳೆಯರು, ಉದ್ಯೋಗ, ಬಡತನ ನಿರ್ಮೂಲನೆ, ಕೌಶಲ್ಯ, ಆರ್ಥಿಕತೆ, ಸಾಮಾಜಿಕ ನ್ಯಾಯ ಹಾಗೂ ನಗರಾಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಇನ್ನೂ ಸಂಶೋಧನೆಗಾಗಿ ಕೇಂದ್ರ ಸರ್ಕಾರ ಹೆಚ್ಚು ಹಣ ವಿನಿಯೋಗಿಸುತ್ತಿದೆ. ಕೃಷಿ ವ್ಯವಸ್ಥೆಯಲ್ಲಿ ಅನ್ನದಾತರಿಗೆ ಕೇಂದ್ರ ಸರ್ಕಾರ ನೆರವು ನೀಡಿದ್ದು, ಮುಂದಿನ 2 ವರ್ಷದಲ್ಲಿ 1 ಕೋಟಿ ರೈತರಿಗೆ ನೈಸರ್ಗಿಕ ಕೃಷಿ ಪದ್ಧತಿ ಅಳವಡಿಕೆಗೆ ಉತ್ತೇಜನ ನೀಡಲಾಗಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಪರವಾನಗಿ ಅಮಾನತ್ತು : ನಾಲ್ವರ ವಿರುದ್ಧ ಶಿಸ್ತು ಕ್ರಮ

ಚಾಮರಾಜನಗರ : ರಾಜ್ಯ ಆಹಾರ ಆಯೋಗದ ಅಧ್ಯಕ್ಷರಾದ ಡಾ. ಎಚ್.ಕೃಷ್ಣ ಅವರು ತಮ್ಮ ದಿಢೀರ್ ಭೇಟಿ ಸಂದರ್ಭದಲ್ಲಿ ನ್ಯೂನತೆ ಕಂಡುಬಂದಿರುವ…

4 hours ago

ಸಿ.ಟಿ.ರವಿ ಯಾವ ಕಡೆಯಿಂದಲೂ ಒಳಗೆ ಬರತಕ್ಕದ್ದಲ್ಲ : ಚೀಫ್ ಮಾರ್ಷಲ್​​ಗೆ ಸಭಾಪತಿ ಸೂಚನೆ

ಬೆಂಗಳೂರು : ಸಭಾಪತಿಗಳ ಆದೇಶಕ್ಕೆ ಗೌರವ ನೀಡದೆ, ಗೈರು ಹಾಜರಾಗಿದ್ದ ಹಿನ್ನೆಲೆಯಲ್ಲಿ ಬಿಜೆಪಿ ಸದಸ್ಯ ಸಿ.ಟಿ.ರವಿ ಅವರನ್ನು ವಿಧಾನ ಪರಿಷತ್ತಿನಿಂದ…

4 hours ago

ಮಂಡ್ಯ | 60 ಲಕ್ಷ ಲಂಚಕ್ಕೆ ಬೇಡಿಕೆ ; ಅಬಕಾರಿ ಉಪ ಆಯುಕ್ತ ಅಮಾನತು

ಮಂಡ್ಯ : ಹೊಸದಾಗಿ ಬಾರ್ ಆರಂಭಿಸಲು ಸಿಎಲ್ 7 ಲೈಸೆನ್ಸ್ ನೀಡಲು ಲಂಚ ಕೇಳಿದ ಆರೋಪದಡಿ ಮಂಡ್ಯ ಅಬಕಾರಿ ಉಪ…

5 hours ago

ಮೈಸೂರಿನಲ್ಲಿ ಮತ್ತೆ ಡ್ರಗ್ಸ್‌ ಪತ್ತೆ ; ಮೂವರ ಬಂಧನ

ಮೈಸೂರು : ಮೈಸೂರಲ್ಲಿ ಪದೇ ಪದೇ ಡ್ರಗ್ಸ್‌ ಪ್ರಕರಣಗಳು ಪತ್ತೆಯಾಗುತ್ತಿರುವುದು ಪೊಲೀಸರನ್ನು ನಿದ್ದೆಗೆಡಿಸಿದೆ. ಈ ಸಂಬಂಧ ಹೈಕೋರ್ಟ್‌ ಸಹ ಕಳವಳ…

5 hours ago

ಮೈ-ಬೆಂ ಹೆದ್ದಾರಿಯಲ್ಲಿ ಸುಲಿಗೆ,ದರೋಡೆ ; 34 ಪ್ರಕರಣಗಳಲ್ಲಿ 28 ಕೇಸ್‌ ಸಾಲ್ವ್‌!

ಮಂಡ್ಯ : ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ (ಎನ್‌ಎಚ್-275) ಹಾಗೂ ಸರ್ವಿಸ್ ರಸ್ತೆಗಳಲ್ಲಿ ತಡರಾತ್ರಿ ಪ್ರಯಾಣಿಕರನ್ನು ತಡೆದು ಸುಲಿಗೆ, ದರೋಡೆ ಮಾಡುತ್ತಿರುವುದಕ್ಕೆ…

6 hours ago

ಮೂರು ಬಾಲಕಿಯರನ್ನು ಬಲಿ ಪಡೆದ ಆನ್‌ಲೈನ್‌ ಗೇಮ್‌ ; ಮಹಡಿಯಿಂದ ಹಾರಿ ಆತ್ಮಹತ್ಯೆ

ಗಾಜಿಯಾಬಾದ್ : ಆನ್‌ಲೈನ್ ಗೇಮ್ ಆಡಬೇಡಿ ಎಂದಿದ್ದಕ್ಕೆ ಮೂವರು ಅಪ್ರಾಪ್ತ ಸಹೋದರಿಯರು ಹೌಸಿಂಗ್ ಸೊಸೈಟಿಯ 9ನೇ ಮಹಡಿಯಿಂದ ಹಾರಿ ಆತ್ಮಹತ್ಯೆ…

7 hours ago