ನವದೆಹಲಿ: ದೇಶದಲ್ಲಿ ಹದಿನೆಂಟನೇ ಲೋಕಸಭೆ ರಚನೆಯಾಗಿ ಮೋದಿ ಸರ್ಕಾರವು ತನ್ನ ಮೂರನೇ ಅವಧಿಯ ಮೊದಲ ಬಜೆಟ್ನ್ನು ಮಂಡಿಸಲು ಹೊರಟಿದ್ದು, ಕೇಂದ್ರ ಬಜೆಟ್ 2024ರ ದಿನಾಂಕಗಳನ್ನು ಸಹ ಘೋಷಣೆ ಮಾಡಿದೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಜುಲೈ.೨೩ರಂದು ಸಂಸತ್ತಿನಲ್ಲಿ ಬಜೆಟ್ ಮಂಡಿಸಲಿದ್ದಾರೆ.
ವಾಸ್ತವವಾಗಿ ೧೮ನೇ ಲೋಕಸಭೆಯ ಮೊದಲ ಅಧಿವೇಶನ ಮುಗಿದಿದೆ. ಇದರಲ್ಲಿ ನೂತನವಾಗಿ ಆಯ್ಕೆಯಾದ ಸಂಸದರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆದಿದ್ದು, ಲೋಕಸಭೆ ಮತ್ತು ರಾಜ್ಯಸಭೆಯ ಜಂಟಿ ಸಭೆಯನ್ನು ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಮಾತನಾಡಿದ್ದರು. ಈಗ ಎಲ್ಲರ ಕಣ್ಣು ಕೇಂದ್ರ ಬಜೆಟ್ನತ್ತ ನೆಟ್ಟಿದ್ದು, ಸಂಸತ್ ಅಧಿವೇಶನ ಜುಲೈ.೨೨ರಿಂದ ಆಗಸ್ಟ್.೧೨ರವರೆಗೆ ನಡೆಯಲಿದೆ.
ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ತಮ್ಮ ಎಕ್ಸ್ ಹ್ಯಾಂಡಲ್ನಲ್ಲಿ ಬಜೆಟ್ ಅಧಿವೇಶನದ ಬಗ್ಗೆ ಮಾಹಿತಿ ನೀಡಿದ್ದಾರೆ. ೨೦೨೨-೨೫ನೇ ಸಾಲಿನ ಕೇಂದ್ರ ಬಜೆಟ್ನ್ನು ೨೦೨೪ರ ಜುಲೈ.೨೩ರಂದು ಲೋಕಸಭೆಯಲ್ಲಿ ಮಂಡಿಸಲಾಗುತ್ತದೆ ಎಂದು ಬರೆದುಕೊಂಡಿದ್ದಾರೆ.
ಈ ಬಾರಿಯ ಬಜೆಟ್ ಮಂಡನೆಯೊಂದಿಗೆ ಹಾಲಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹೆಸರಿನಲ್ಲಿ ವಿಶಿಷ್ಟ ದಾಖಲೆಯೊಂದು ದಾಖಲಾಗಲಿದೆ. ಏಕೆಂದರೆ, ಈ ಮೂಲಕ ಸತತ ಏಳು ಬಾರಿ ಕೇಂದ್ರ ಬಜೆಟ್ ಮಂಡಿಸಿದ ಮೊದಲ ಹಣಕಾಸು ಸಚಿವೆ ಎಂಬ ಹೆಗ್ಗಳಿಕೆಗೆ ನಿರ್ಮಲಾ ಸೀತಾರಾಮನ್ ಪಾತ್ರರಾಗಲಿದ್ದಾರೆ. ಈ ವಿಷಯದಲ್ಲಿ ಅವರು ಮೊರಾರ್ಜಿ ದೇಸಾಯಿಯವರನ್ನು ಹಿಂದಿಕ್ಕುತ್ತಾರೆ. ದೇಸಾಯಿ ಅವರು ಸತತ ಆರು ಬಾರಿ ಬಜೆಟ್ ಮಂಡಿಸಿದ್ದರು.
ನವದೆಹಲಿ: ಮದರ್ ಆಫ್ ಆಲ್ ಡೀಲ್ಸ್ ಎಂದೇ ಕರೆಯಲ್ಪಡುವ ಭಾರತ-ಯುರೋಪ್ ಒಕ್ಕೂಟವು ಮುಕಕ್ತ ವ್ಯಾಪಾರ ಒಪ್ಪಂದಕ್ಕೆ ಇಂದು ಅಧಿಕೃತವಾಗಿ ಸಹಿ…
ಬೆಂಗಳೂರು: ಶಿಡ್ಲಘಟ್ಟದಲ್ಲಿ ಪೌರಾಯುಕ್ತಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ಗೌಡನನ್ನು ಸರ್ಕಾರ ರಕ್ಷಣೆ ಮಾಡಲ್ಲ. ಕಾನೂನು ಪ್ರಕಾರ ಶಿಕ್ಷೆ…
ಪಿರಿಯಾಪಟ್ಟಣ: ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪ-ಪಿರಿಯಾಪಟ್ಟಣ ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ…
ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…
ಮಂಡ್ಯ: ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಸಮಾಜದ ಮುಖ್ಯ ವಾಹಿನಿಗೆ ಬರಬೇಕು. ಸಮುದಾಯಗಳು ಮುಖ್ಯ ವಾಹಿನಿಗೆ ಬರಲು ಶಿಕ್ಷಣದಿಂದ ಮಾತ್ರ ಸಾಧ್ಯ…