ನವದೆಹಲಿ: ದೇಶದಲ್ಲಿ ಹದಿನೆಂಟನೇ ಲೋಕಸಭೆ ರಚನೆಯಾಗಿ ಮೋದಿ ಸರ್ಕಾರವು ತನ್ನ ಮೂರನೇ ಅವಧಿಯ ಮೊದಲ ಬಜೆಟ್ನ್ನು ಮಂಡಿಸಲು ಹೊರಟಿದ್ದು, ಕೇಂದ್ರ ಬಜೆಟ್ 2024ರ ದಿನಾಂಕಗಳನ್ನು ಸಹ ಘೋಷಣೆ ಮಾಡಿದೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಜುಲೈ.೨೩ರಂದು ಸಂಸತ್ತಿನಲ್ಲಿ ಬಜೆಟ್ ಮಂಡಿಸಲಿದ್ದಾರೆ.
ವಾಸ್ತವವಾಗಿ ೧೮ನೇ ಲೋಕಸಭೆಯ ಮೊದಲ ಅಧಿವೇಶನ ಮುಗಿದಿದೆ. ಇದರಲ್ಲಿ ನೂತನವಾಗಿ ಆಯ್ಕೆಯಾದ ಸಂಸದರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆದಿದ್ದು, ಲೋಕಸಭೆ ಮತ್ತು ರಾಜ್ಯಸಭೆಯ ಜಂಟಿ ಸಭೆಯನ್ನು ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಮಾತನಾಡಿದ್ದರು. ಈಗ ಎಲ್ಲರ ಕಣ್ಣು ಕೇಂದ್ರ ಬಜೆಟ್ನತ್ತ ನೆಟ್ಟಿದ್ದು, ಸಂಸತ್ ಅಧಿವೇಶನ ಜುಲೈ.೨೨ರಿಂದ ಆಗಸ್ಟ್.೧೨ರವರೆಗೆ ನಡೆಯಲಿದೆ.
ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ತಮ್ಮ ಎಕ್ಸ್ ಹ್ಯಾಂಡಲ್ನಲ್ಲಿ ಬಜೆಟ್ ಅಧಿವೇಶನದ ಬಗ್ಗೆ ಮಾಹಿತಿ ನೀಡಿದ್ದಾರೆ. ೨೦೨೨-೨೫ನೇ ಸಾಲಿನ ಕೇಂದ್ರ ಬಜೆಟ್ನ್ನು ೨೦೨೪ರ ಜುಲೈ.೨೩ರಂದು ಲೋಕಸಭೆಯಲ್ಲಿ ಮಂಡಿಸಲಾಗುತ್ತದೆ ಎಂದು ಬರೆದುಕೊಂಡಿದ್ದಾರೆ.
ಈ ಬಾರಿಯ ಬಜೆಟ್ ಮಂಡನೆಯೊಂದಿಗೆ ಹಾಲಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹೆಸರಿನಲ್ಲಿ ವಿಶಿಷ್ಟ ದಾಖಲೆಯೊಂದು ದಾಖಲಾಗಲಿದೆ. ಏಕೆಂದರೆ, ಈ ಮೂಲಕ ಸತತ ಏಳು ಬಾರಿ ಕೇಂದ್ರ ಬಜೆಟ್ ಮಂಡಿಸಿದ ಮೊದಲ ಹಣಕಾಸು ಸಚಿವೆ ಎಂಬ ಹೆಗ್ಗಳಿಕೆಗೆ ನಿರ್ಮಲಾ ಸೀತಾರಾಮನ್ ಪಾತ್ರರಾಗಲಿದ್ದಾರೆ. ಈ ವಿಷಯದಲ್ಲಿ ಅವರು ಮೊರಾರ್ಜಿ ದೇಸಾಯಿಯವರನ್ನು ಹಿಂದಿಕ್ಕುತ್ತಾರೆ. ದೇಸಾಯಿ ಅವರು ಸತತ ಆರು ಬಾರಿ ಬಜೆಟ್ ಮಂಡಿಸಿದ್ದರು.
ಬೆಂಗಳೂರು: 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸಿಎಂ ಡಿ.ಕೆ.ಶಿವಕುಮಾರ್ ಅವರು ಸಿಎಂ ಆದ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು. ಸದಾಶಿವನಗರದಲ್ಲಿರುವ ತಮ್ಮ…
ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…
ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…
ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…
ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…
ಟಿ.ಕೆ.ಹರೀಶ್ ಮನೆ ಮುಂದಿನ ರಸ್ತೆಯ ಕಸ ವಿಲೇವಾರಿಗೆ ನಾಗರಿಕರು ಜಾಗೃತರಾಗಬೇಕು ಮೈಸೂರು ಎಂದರೆ ಕೇವಲ ಒಂದು ನಗರವಲ್ಲ. ಅದು ಕರ್ನಾಟಕದ…