ದೇಶ- ವಿದೇಶ

ಕಾಡ್ಗಿಚ್ಚು, ಅರಣ್ಯ ಸಂರಕ್ಷಣೆ: ಕೇಂದ್ರ ಸರ್ಕಾರದಿಂದ ರಾಜ್ಯಗಳಿಗೆ ಮಾರ್ಗಸೂಚಿ ಬಿಡುಗಡೆ

ನವದೆಹಲಿ: ಅರಣ್ಯ ಸಂರಕ್ಷಣೆ ಹಾಗೂ ಕಾಡ್ಗಿಚ್ಚಿಗೆ ಸಂಬಂಧಿಸಿದಂತೆ ಕೇಂದ್ರ ಪರಿಸರ ಹಾಗೂ ಅರಣ್ಯ ಇಲಾಖೆ ವತಿಯಿಂದ ಎಲ್ಲಾ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೂ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ.

ಕಾಡ್ಗಿಚ್ಚು ಮತ್ತು ಅರಣ್ಯದಲ್ಲಿ ಸಂಭವಿಸುವ ಪ್ರಾಕೃತಿಕ ವಿಕೋಪಗಳನ್ನು ತಡೆಗಟ್ಟಲು, ಅರಣ್ಯ ಸಂರಕ್ಷಣೆ ಮಾಡಲು ಅರಣ್ಯ ಇಲಾಖೆ ಸಮೀಪ ಅಗತ್ಯ ಸಿಬ್ಬಂದಿ, ಸಂಪನ್ಮೂಲ ಇಲ್ಲದಿದ್ದಾಗ ಸರ್ಕಾರದ ಇತರ ಇಲಾಖೆಗಳ ಸೇವೆಯನ್ನು ಬಳಸಿಕೊಳ್ಳಬಹುದು ಎಂದು ಆದೇಶಿಸಿದೆ.

ಎನ್‌ಡಿಆರ್‌ಎಫ್‌ಗೆ ಉತ್ತರಾಖಂಡದ ಮುಖ್ಯ ಕಾರ್ಯದರ್ಶಿ ಅರಣ್ಯ ಇಲಾಖೆಗಳ ಹತ್ತಿರ ಅಗತ್ಯ ಸೌಕಾರ್ಯ ಇಲ್ಲದಿದ್ದಾಗ ಏನು ಮಾಡಬೇಕು ಎಂಬುದರ ಬಗ್ಗೆ ಸಲಹೆ ಕೇಳಿ ಪತ್ರ ಬರೆದಿದ್ದರು. ಈ ಪತ್ರವನ್ನು ಗಂಭೀರವಾಗಿ ಪರಿಗಣಿಸಿ ಕ್ರಮ ತೆಗೆದುಕೊಂಡ ಪರಿಸರ ಇಲಾಖೆ ಕಳೆದ ತಿಂಗಳು ಸಭೆ ನಡೆಸಿ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.

ಅರಣ್ಯ ವಿಕೋಪಗಳ ಸಂದರ್ಭಗಳಲ್ಲಿ ಕಾಡಿನ ಸಂರಕ್ಷಣೆ ಮತ್ತು ವನ್ಯಜೀವಿ ಸಂರಕ್ಷಣೆ ಕುರಿತಂತೆ ಕೂಡಲೇ ಕ್ರಮದ ಅವಶ್ಯಕತೆ ಇದೆ. ಹೀಗಾಗಿ ಸರ್ಕಾರದ ಇತರ ಇಲಾಖೆಗಳು ಕಾಡಿನಲ್ಲಿ ಫೈರ್‌ ಲೈನ್‌ ಸ್ಥಾಪನೆ ಹಾಗೂ ನಿರ್ವಹಣೆ, ಚೆಕ್‌ಡ್ಯಾಮ್‌, ನೀರಿನ ಟ್ಯಾಂಕ್‌ ಹಾಗೂ ಟ್ರೆಂಚ್‌ಗಳನ್ನು ನಿರ್ಮಾಣ ಮಾಡಬಹುದು. ಅಲ್ಲದೇ ತುರ್ತು ಸನ್ನಿವೇಶಗಳಲ್ಲಿ ಇತರ ಇಲಾಖೆಗಳ ತಂತ್ರಜ್ಞರ ನೆರವಿನೊಟ್ಟಿಗೆ ಅರಣ್ಯ ಇಲಾಖೆಯ ಅನುಮತಿ ಪಡೆಯಬೇಕು. ಜೊತೆಗೆ ತುರ್ತು ಕೆಲಸಗಳು ಅರಣ್ಯ ಮತ್ತು ವನ್ಯಜೀವಿಗಳಿಗೆ ಹಾನಿ ಮಾಡುವಂತಿಲ್ಲ ಎಂದು ಹೇಳಿದೆ.

ಆಂದೋಲನ ಡೆಸ್ಕ್

Recent Posts

ಟಿ-20 ವಿಶ್ವಕಪ್ | ಇಂದು ಭಾರತ-ಪಾಕ್‌ ಹಣಾಹಣಿ

ಕೊಲಂಬೋ : ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವೆ ಭಾನುವಾರ (ಫೆ.15) ಸಂಜೆ ನಡೆಯುವ ರಣರೋಚಕ ಪಂದ್ಯಕ್ಕೆ ಜಗತ್ತಿನಾದ್ಯಂತ ಕ್ರಿಕೆಟ್…

40 seconds ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಫೆ.15 ಭಾನುವಾರ

30 mins ago

ಟಿ-20 ವಿಶ್ವಕಪ್‌ | ಸ್ಕಾಟ್ಲೆಂಡ್‌ ವಿರುದ್ಧ ಇಂಗ್ಲೆಂಡ್‌ 5 ವಿಕೆಟ್‌ ಗೆಲುವು

ಕೋಲ್ಕತ್ತ : ಟಿ-20 ವಿಶ್ವಕಪ್‌ನ ಲೀಗ್ ಹಂತದ ಸಿ ಗುಂಪಿನ ಪಂದ್ಯದಲ್ಲಿ ಸ್ಕಾಟ್ಲೆಂಡ್ ವಿರುದ್ಧ ಇಂಗ್ಲೆಂಡ್ ತಂಡವು 5 ವಿಕೆಟ್‌ಗಳ…

12 hours ago

ಡಿಕೆಶಿ ಮುಖ್ಯಮಂತ್ರಿ ಆಗೇ ಆಗ್ತರೆ : ಶಾಸಕ ಗಣಿಗ ರವಿಕುಮಾರ್‌

ಮಂಡ್ಯ: ಡಿ.ಕೆ. ಶಿವಕುಮಾರ್ ಅವರು ಅತಿ ಶೀಘ್ರದಲ್ಲೇ ಮುಖ್ಯಮಂತ್ರಿ ಆಗೇ ಆಗುತ್ತಾರೆ. ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಪಿ.ರವಿಕುಮಾರ್‌…

12 hours ago

ಮೈಸೂರು | ಶಿವರಾತ್ರಿಗೆ ಎಲ್ಲೆಡೆ ಸಿದ್ಧತೆ

ಮೈಸೂರು : ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಒಂದಾದ ಮಹಾ ಶಿವರಾತ್ರಿ ಆಚರಣೆಗೆ ಶಿವ ದೇವಾಲಯಗಳು ಸಂಪೂರ್ಣ ಸಜ್ಜಾಗಿವೆ. ನಗರದ ಪ್ರಮುಖ…

12 hours ago

ಮೈಸೂರು | 4 ಲಕ್ಷ ಮೌಲ್ಯದ ಡ್ರಗ್ಸ್ ವಶ‌ ; ಆರೋಪಿ ಬಂಧನ

ಮೈಸೂರು : ನಗರದಲ್ಲಿ ಅಕ್ರಮ ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟದ ವಿರುದ್ಧ ಮಂಡಿ ಪೊಲೀಸ್ ಠಾಣಾ ಅಧಿಕಾರಿಗಳು ನಡೆಸಿದ…

12 hours ago