ದೇಶ- ವಿದೇಶ

ಕಾಡ್ಗಿಚ್ಚು, ಅರಣ್ಯ ಸಂರಕ್ಷಣೆ: ಕೇಂದ್ರ ಸರ್ಕಾರದಿಂದ ರಾಜ್ಯಗಳಿಗೆ ಮಾರ್ಗಸೂಚಿ ಬಿಡುಗಡೆ

ನವದೆಹಲಿ: ಅರಣ್ಯ ಸಂರಕ್ಷಣೆ ಹಾಗೂ ಕಾಡ್ಗಿಚ್ಚಿಗೆ ಸಂಬಂಧಿಸಿದಂತೆ ಕೇಂದ್ರ ಪರಿಸರ ಹಾಗೂ ಅರಣ್ಯ ಇಲಾಖೆ ವತಿಯಿಂದ ಎಲ್ಲಾ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೂ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ.

ಕಾಡ್ಗಿಚ್ಚು ಮತ್ತು ಅರಣ್ಯದಲ್ಲಿ ಸಂಭವಿಸುವ ಪ್ರಾಕೃತಿಕ ವಿಕೋಪಗಳನ್ನು ತಡೆಗಟ್ಟಲು, ಅರಣ್ಯ ಸಂರಕ್ಷಣೆ ಮಾಡಲು ಅರಣ್ಯ ಇಲಾಖೆ ಸಮೀಪ ಅಗತ್ಯ ಸಿಬ್ಬಂದಿ, ಸಂಪನ್ಮೂಲ ಇಲ್ಲದಿದ್ದಾಗ ಸರ್ಕಾರದ ಇತರ ಇಲಾಖೆಗಳ ಸೇವೆಯನ್ನು ಬಳಸಿಕೊಳ್ಳಬಹುದು ಎಂದು ಆದೇಶಿಸಿದೆ.

ಎನ್‌ಡಿಆರ್‌ಎಫ್‌ಗೆ ಉತ್ತರಾಖಂಡದ ಮುಖ್ಯ ಕಾರ್ಯದರ್ಶಿ ಅರಣ್ಯ ಇಲಾಖೆಗಳ ಹತ್ತಿರ ಅಗತ್ಯ ಸೌಕಾರ್ಯ ಇಲ್ಲದಿದ್ದಾಗ ಏನು ಮಾಡಬೇಕು ಎಂಬುದರ ಬಗ್ಗೆ ಸಲಹೆ ಕೇಳಿ ಪತ್ರ ಬರೆದಿದ್ದರು. ಈ ಪತ್ರವನ್ನು ಗಂಭೀರವಾಗಿ ಪರಿಗಣಿಸಿ ಕ್ರಮ ತೆಗೆದುಕೊಂಡ ಪರಿಸರ ಇಲಾಖೆ ಕಳೆದ ತಿಂಗಳು ಸಭೆ ನಡೆಸಿ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.

ಅರಣ್ಯ ವಿಕೋಪಗಳ ಸಂದರ್ಭಗಳಲ್ಲಿ ಕಾಡಿನ ಸಂರಕ್ಷಣೆ ಮತ್ತು ವನ್ಯಜೀವಿ ಸಂರಕ್ಷಣೆ ಕುರಿತಂತೆ ಕೂಡಲೇ ಕ್ರಮದ ಅವಶ್ಯಕತೆ ಇದೆ. ಹೀಗಾಗಿ ಸರ್ಕಾರದ ಇತರ ಇಲಾಖೆಗಳು ಕಾಡಿನಲ್ಲಿ ಫೈರ್‌ ಲೈನ್‌ ಸ್ಥಾಪನೆ ಹಾಗೂ ನಿರ್ವಹಣೆ, ಚೆಕ್‌ಡ್ಯಾಮ್‌, ನೀರಿನ ಟ್ಯಾಂಕ್‌ ಹಾಗೂ ಟ್ರೆಂಚ್‌ಗಳನ್ನು ನಿರ್ಮಾಣ ಮಾಡಬಹುದು. ಅಲ್ಲದೇ ತುರ್ತು ಸನ್ನಿವೇಶಗಳಲ್ಲಿ ಇತರ ಇಲಾಖೆಗಳ ತಂತ್ರಜ್ಞರ ನೆರವಿನೊಟ್ಟಿಗೆ ಅರಣ್ಯ ಇಲಾಖೆಯ ಅನುಮತಿ ಪಡೆಯಬೇಕು. ಜೊತೆಗೆ ತುರ್ತು ಕೆಲಸಗಳು ಅರಣ್ಯ ಮತ್ತು ವನ್ಯಜೀವಿಗಳಿಗೆ ಹಾನಿ ಮಾಡುವಂತಿಲ್ಲ ಎಂದು ಹೇಳಿದೆ.

ಆಂದೋಲನ ಡೆಸ್ಕ್

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

7 mins ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

34 mins ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

2 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

2 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

3 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

4 hours ago