ನವದೆಹಲಿ: ಅರಣ್ಯ ಸಂರಕ್ಷಣೆ ಹಾಗೂ ಕಾಡ್ಗಿಚ್ಚಿಗೆ ಸಂಬಂಧಿಸಿದಂತೆ ಕೇಂದ್ರ ಪರಿಸರ ಹಾಗೂ ಅರಣ್ಯ ಇಲಾಖೆ ವತಿಯಿಂದ ಎಲ್ಲಾ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೂ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ.
ಕಾಡ್ಗಿಚ್ಚು ಮತ್ತು ಅರಣ್ಯದಲ್ಲಿ ಸಂಭವಿಸುವ ಪ್ರಾಕೃತಿಕ ವಿಕೋಪಗಳನ್ನು ತಡೆಗಟ್ಟಲು, ಅರಣ್ಯ ಸಂರಕ್ಷಣೆ ಮಾಡಲು ಅರಣ್ಯ ಇಲಾಖೆ ಸಮೀಪ ಅಗತ್ಯ ಸಿಬ್ಬಂದಿ, ಸಂಪನ್ಮೂಲ ಇಲ್ಲದಿದ್ದಾಗ ಸರ್ಕಾರದ ಇತರ ಇಲಾಖೆಗಳ ಸೇವೆಯನ್ನು ಬಳಸಿಕೊಳ್ಳಬಹುದು ಎಂದು ಆದೇಶಿಸಿದೆ.
ಎನ್ಡಿಆರ್ಎಫ್ಗೆ ಉತ್ತರಾಖಂಡದ ಮುಖ್ಯ ಕಾರ್ಯದರ್ಶಿ ಅರಣ್ಯ ಇಲಾಖೆಗಳ ಹತ್ತಿರ ಅಗತ್ಯ ಸೌಕಾರ್ಯ ಇಲ್ಲದಿದ್ದಾಗ ಏನು ಮಾಡಬೇಕು ಎಂಬುದರ ಬಗ್ಗೆ ಸಲಹೆ ಕೇಳಿ ಪತ್ರ ಬರೆದಿದ್ದರು. ಈ ಪತ್ರವನ್ನು ಗಂಭೀರವಾಗಿ ಪರಿಗಣಿಸಿ ಕ್ರಮ ತೆಗೆದುಕೊಂಡ ಪರಿಸರ ಇಲಾಖೆ ಕಳೆದ ತಿಂಗಳು ಸಭೆ ನಡೆಸಿ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.
ಅರಣ್ಯ ವಿಕೋಪಗಳ ಸಂದರ್ಭಗಳಲ್ಲಿ ಕಾಡಿನ ಸಂರಕ್ಷಣೆ ಮತ್ತು ವನ್ಯಜೀವಿ ಸಂರಕ್ಷಣೆ ಕುರಿತಂತೆ ಕೂಡಲೇ ಕ್ರಮದ ಅವಶ್ಯಕತೆ ಇದೆ. ಹೀಗಾಗಿ ಸರ್ಕಾರದ ಇತರ ಇಲಾಖೆಗಳು ಕಾಡಿನಲ್ಲಿ ಫೈರ್ ಲೈನ್ ಸ್ಥಾಪನೆ ಹಾಗೂ ನಿರ್ವಹಣೆ, ಚೆಕ್ಡ್ಯಾಮ್, ನೀರಿನ ಟ್ಯಾಂಕ್ ಹಾಗೂ ಟ್ರೆಂಚ್ಗಳನ್ನು ನಿರ್ಮಾಣ ಮಾಡಬಹುದು. ಅಲ್ಲದೇ ತುರ್ತು ಸನ್ನಿವೇಶಗಳಲ್ಲಿ ಇತರ ಇಲಾಖೆಗಳ ತಂತ್ರಜ್ಞರ ನೆರವಿನೊಟ್ಟಿಗೆ ಅರಣ್ಯ ಇಲಾಖೆಯ ಅನುಮತಿ ಪಡೆಯಬೇಕು. ಜೊತೆಗೆ ತುರ್ತು ಕೆಲಸಗಳು ಅರಣ್ಯ ಮತ್ತು ವನ್ಯಜೀವಿಗಳಿಗೆ ಹಾನಿ ಮಾಡುವಂತಿಲ್ಲ ಎಂದು ಹೇಳಿದೆ.
ಚಾಮರಾಜನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಿಗೆ ಕೋಳಿಮೊಟ್ಟೆ ವಿತರಣೆಗಾಗಿ ನೀಡಲಾಗುವ ಅನುದಾನ ಕಳೆದ ೬ತಿಂಗಳಿಂದ…
ಗುತ್ತಲು ಕೆರೆ, ಕಾಳೇನಹಳ್ಳಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಭೇಟಿ ಮಂಡ್ಯ: ನಗರದ ಗುತ್ತಲು ಕೆರೆಗೆ ತ್ಯಾಜ್ಯ…
ಪ್ರಶಾಂತ್ ಎಸ್. ಆರು ತಿಂಗಳಿನಿಂದ ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತ ನೀರಿನ ಘಟಕ ನಿರ್ವಹಣೆ ಮಾಡುವಲ್ಲಿ ಕೆಎಸ್ಆರ್ಟಿಸಿ ವಿಫಲ…
ಗಿರೀಶ್ ಹುಣಸೂರು ಹೊಸ ವರ್ಷಾಚರಣೆ, ಕ್ರಿಸ್ಮಸ್ ರಜೆ ನಿರೀಕ್ಷೆಯಲ್ಲಿ ವ್ಯಾಪಾರಸ್ಥರು, ಉದ್ಯಮಿಗಳು ಮೈಸೂರು: ೨೦೨೫ನೇ ವರ್ಷಕ್ಕೆ ವಿದಾಯ ಹೇಳಿ, ೨೦೨೬ರ…
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…