ನವದೆಹಲಿ: ಅರಣ್ಯ ಸಂರಕ್ಷಣೆ ಹಾಗೂ ಕಾಡ್ಗಿಚ್ಚಿಗೆ ಸಂಬಂಧಿಸಿದಂತೆ ಕೇಂದ್ರ ಪರಿಸರ ಹಾಗೂ ಅರಣ್ಯ ಇಲಾಖೆ ವತಿಯಿಂದ ಎಲ್ಲಾ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೂ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ.
ಕಾಡ್ಗಿಚ್ಚು ಮತ್ತು ಅರಣ್ಯದಲ್ಲಿ ಸಂಭವಿಸುವ ಪ್ರಾಕೃತಿಕ ವಿಕೋಪಗಳನ್ನು ತಡೆಗಟ್ಟಲು, ಅರಣ್ಯ ಸಂರಕ್ಷಣೆ ಮಾಡಲು ಅರಣ್ಯ ಇಲಾಖೆ ಸಮೀಪ ಅಗತ್ಯ ಸಿಬ್ಬಂದಿ, ಸಂಪನ್ಮೂಲ ಇಲ್ಲದಿದ್ದಾಗ ಸರ್ಕಾರದ ಇತರ ಇಲಾಖೆಗಳ ಸೇವೆಯನ್ನು ಬಳಸಿಕೊಳ್ಳಬಹುದು ಎಂದು ಆದೇಶಿಸಿದೆ.
ಎನ್ಡಿಆರ್ಎಫ್ಗೆ ಉತ್ತರಾಖಂಡದ ಮುಖ್ಯ ಕಾರ್ಯದರ್ಶಿ ಅರಣ್ಯ ಇಲಾಖೆಗಳ ಹತ್ತಿರ ಅಗತ್ಯ ಸೌಕಾರ್ಯ ಇಲ್ಲದಿದ್ದಾಗ ಏನು ಮಾಡಬೇಕು ಎಂಬುದರ ಬಗ್ಗೆ ಸಲಹೆ ಕೇಳಿ ಪತ್ರ ಬರೆದಿದ್ದರು. ಈ ಪತ್ರವನ್ನು ಗಂಭೀರವಾಗಿ ಪರಿಗಣಿಸಿ ಕ್ರಮ ತೆಗೆದುಕೊಂಡ ಪರಿಸರ ಇಲಾಖೆ ಕಳೆದ ತಿಂಗಳು ಸಭೆ ನಡೆಸಿ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.
ಅರಣ್ಯ ವಿಕೋಪಗಳ ಸಂದರ್ಭಗಳಲ್ಲಿ ಕಾಡಿನ ಸಂರಕ್ಷಣೆ ಮತ್ತು ವನ್ಯಜೀವಿ ಸಂರಕ್ಷಣೆ ಕುರಿತಂತೆ ಕೂಡಲೇ ಕ್ರಮದ ಅವಶ್ಯಕತೆ ಇದೆ. ಹೀಗಾಗಿ ಸರ್ಕಾರದ ಇತರ ಇಲಾಖೆಗಳು ಕಾಡಿನಲ್ಲಿ ಫೈರ್ ಲೈನ್ ಸ್ಥಾಪನೆ ಹಾಗೂ ನಿರ್ವಹಣೆ, ಚೆಕ್ಡ್ಯಾಮ್, ನೀರಿನ ಟ್ಯಾಂಕ್ ಹಾಗೂ ಟ್ರೆಂಚ್ಗಳನ್ನು ನಿರ್ಮಾಣ ಮಾಡಬಹುದು. ಅಲ್ಲದೇ ತುರ್ತು ಸನ್ನಿವೇಶಗಳಲ್ಲಿ ಇತರ ಇಲಾಖೆಗಳ ತಂತ್ರಜ್ಞರ ನೆರವಿನೊಟ್ಟಿಗೆ ಅರಣ್ಯ ಇಲಾಖೆಯ ಅನುಮತಿ ಪಡೆಯಬೇಕು. ಜೊತೆಗೆ ತುರ್ತು ಕೆಲಸಗಳು ಅರಣ್ಯ ಮತ್ತು ವನ್ಯಜೀವಿಗಳಿಗೆ ಹಾನಿ ಮಾಡುವಂತಿಲ್ಲ ಎಂದು ಹೇಳಿದೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…