ನವದೆಹಲಿ: ಸರ್ಕಾರಿ ನೌಕರರ ಕೆಲಸವನ್ನು ವಿಮರ್ಶಿಸಲು ಕೇಂದ್ರ ಸರ್ಕಾರ ಎಲ್ಲಾ ಸಚಿವಾಲಯಗಳಿಗೆ ಆದೇಶಿಸಿದ್ದು, ನಿಯಾಮಾನುಸಾರ ಕಾರ್ಯನಿರ್ವಹಿಸದವರನ್ನು ಅಕಾಲಿಕವಾಗಿ ಸೇವೆಯಿಂದ ನಿವೃತ್ತಿಗೊಳಿಸುವಂತೆ ಸೂಚನೆ ನೀಡಿದೆ.
ಸಚಿವಾಲಯಗಳ ಕೆಳಗೆ ಕಾರ್ಯನಿರ್ವಹಿಸಲು ಸಾರ್ವಜನಿಕ ವಲಯದ ಉದ್ಯಮಗಳು, ಬ್ಯಾಂಕ್, ಸ್ವಾಯತ್ತ ಹಾಗೂ ಶಾಸನಬದ್ಧ ಸಂಸ್ಥೆಗಳಿಗೆ ನೌಕರರ ಕಾರ್ಯಕ್ಷಮತೆಯನ್ನು ಪರಿಶೀಲಿಸುವಂತೆ ಸಿಬ್ಬಂದಿ ಮತ್ತು ತರಬೇತಿ ಇಲಾಖೆ ನಿರ್ದೇಶಿಸಿದೆ.
ಸರ್ಕಾರಿ ನೌಕರರ ಕೆಲಸವನ್ನು ಪರಿಶೀಲಿಸಿ ಅವರನ್ನು ಉಳಿಸಿಕೊಳ್ಳಬೇಕೆ ಅಥವಾ ಕೆಲಸದಿಂದ ತೆಗೆದುಹಾಕಬೇಕು ಎಂಬುದನ್ನು ನಿರ್ಧರಿಸಲು ಕಾರ್ಯಕ್ಷಮತೆಯ ಆವರ್ತ ಪರಿಶೀಲನೆ ಕೈಗೊಳ್ಳುವಂತೆ ನಿರ್ದೇಶಿಸಲಾಗಿದೆ ಎಂದು ಇಲಾಖೆ ತಿಳಿಸಿದೆ.
ಈ ನಿಟ್ಟಿನಲ್ಲಿ ಹೊರಡಿಸಲಾದ ಮಾರ್ಗಸೂಚಿಗಳನ್ನು ಅನುಸರಿಸಿ ವರದಿಯನ್ನು ಸಲ್ಲಿಸಲು ವಿನಂತಿಸಿದರೂ ಸರ್ಕಾರದ ನಿರ್ದೇಶನಗಳನ್ನು ಪಾಲಿಸದಿರುವ ಬಗ್ಗೆ ಕೇಂದ್ರ ಅಸಮಾಧಾನ ವ್ಯಕ್ತಪಡಿಸಿದೆ.
ಈ ಹಿನ್ನೆಲೆಯಲ್ಲಿ ಸರಿಯಾಗಿ ಕೆಲಸ ಮಾಡದ ಅಧಿಕಾರಿಗಳನ್ನು ಕೆಲಸದಿಂದ ವಜಾಗೊಳಿಸಿ, ಬೇರೆ ನೌಕರರನ್ನು ತೆಗೆದುಕೊಳ್ಳುವಂತೆ ಸಚಿವಾಲಯಕ್ಕೆ ಸೂಚನೆ ನೀಡಿದೆ.
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂಗೊಂಡಿರುವ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಗುಡಿ ಬೀಟ್…
ನವದೆಹಲಿ: ದೇಶದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ. ಭಾರತವು ಕಚ್ಚಾ ತೈಲಕ್ಕಾಗಿ ಸಾಕಷ್ಟು ಸಂಗ್ರಹಣಾ ಸೌಲಭ್ಯಗಳು ಮತ್ತು ವಿಶ್ವಾಸಾರ್ಹ ಪೂರೈಕೆ…
ಮೈಸೂರು: ರಸ್ತೆ ಅಪಘಾತದಿಂದ ಹಲವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ…
ಬೆಂಗಳೂರು: ಮೈಸೂರು ನಗರ ಸೇರಿದಂತೆ ರಾಜ್ಯದಲ್ಲಿರುವ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಹೆಚ್ಚಿನ ಅನುದಾನ ಒದಗಿಸಬೇಕೆಂದು ಎಂಎಲ್ಸಿ ಕೆ.ಶಿವಕುಮಾರ್ ಒತ್ತಾಯಿಸಿದ್ದಾರೆ. ಈ…
ಬೆಂಗಳೂರು: ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಮಾಡಿ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ತಿಮರೋಡಿ ಅವರನ್ನು ದಕ್ಷಿಣ…