ನವದೆಹಲಿ: ಸರ್ಕಾರಿ ನೌಕರರ ಕೆಲಸವನ್ನು ವಿಮರ್ಶಿಸಲು ಕೇಂದ್ರ ಸರ್ಕಾರ ಎಲ್ಲಾ ಸಚಿವಾಲಯಗಳಿಗೆ ಆದೇಶಿಸಿದ್ದು, ನಿಯಾಮಾನುಸಾರ ಕಾರ್ಯನಿರ್ವಹಿಸದವರನ್ನು ಅಕಾಲಿಕವಾಗಿ ಸೇವೆಯಿಂದ ನಿವೃತ್ತಿಗೊಳಿಸುವಂತೆ ಸೂಚನೆ ನೀಡಿದೆ.
ಸಚಿವಾಲಯಗಳ ಕೆಳಗೆ ಕಾರ್ಯನಿರ್ವಹಿಸಲು ಸಾರ್ವಜನಿಕ ವಲಯದ ಉದ್ಯಮಗಳು, ಬ್ಯಾಂಕ್, ಸ್ವಾಯತ್ತ ಹಾಗೂ ಶಾಸನಬದ್ಧ ಸಂಸ್ಥೆಗಳಿಗೆ ನೌಕರರ ಕಾರ್ಯಕ್ಷಮತೆಯನ್ನು ಪರಿಶೀಲಿಸುವಂತೆ ಸಿಬ್ಬಂದಿ ಮತ್ತು ತರಬೇತಿ ಇಲಾಖೆ ನಿರ್ದೇಶಿಸಿದೆ.
ಸರ್ಕಾರಿ ನೌಕರರ ಕೆಲಸವನ್ನು ಪರಿಶೀಲಿಸಿ ಅವರನ್ನು ಉಳಿಸಿಕೊಳ್ಳಬೇಕೆ ಅಥವಾ ಕೆಲಸದಿಂದ ತೆಗೆದುಹಾಕಬೇಕು ಎಂಬುದನ್ನು ನಿರ್ಧರಿಸಲು ಕಾರ್ಯಕ್ಷಮತೆಯ ಆವರ್ತ ಪರಿಶೀಲನೆ ಕೈಗೊಳ್ಳುವಂತೆ ನಿರ್ದೇಶಿಸಲಾಗಿದೆ ಎಂದು ಇಲಾಖೆ ತಿಳಿಸಿದೆ.
ಈ ನಿಟ್ಟಿನಲ್ಲಿ ಹೊರಡಿಸಲಾದ ಮಾರ್ಗಸೂಚಿಗಳನ್ನು ಅನುಸರಿಸಿ ವರದಿಯನ್ನು ಸಲ್ಲಿಸಲು ವಿನಂತಿಸಿದರೂ ಸರ್ಕಾರದ ನಿರ್ದೇಶನಗಳನ್ನು ಪಾಲಿಸದಿರುವ ಬಗ್ಗೆ ಕೇಂದ್ರ ಅಸಮಾಧಾನ ವ್ಯಕ್ತಪಡಿಸಿದೆ.
ಈ ಹಿನ್ನೆಲೆಯಲ್ಲಿ ಸರಿಯಾಗಿ ಕೆಲಸ ಮಾಡದ ಅಧಿಕಾರಿಗಳನ್ನು ಕೆಲಸದಿಂದ ವಜಾಗೊಳಿಸಿ, ಬೇರೆ ನೌಕರರನ್ನು ತೆಗೆದುಕೊಳ್ಳುವಂತೆ ಸಚಿವಾಲಯಕ್ಕೆ ಸೂಚನೆ ನೀಡಿದೆ.
ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…
ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…
ಪ್ರತಿವರ್ಷ ಆಷಾಢ, ಶ್ರಾವಣ ಮಾಸದ ಸಮಯದಲ್ಲಿ ಎಲ್ಲ ಮಠಾಧೀಶರೂ ಚಾತುರ್ಮಾಸ ವ್ರತವನ್ನು ಆಚರಿಸುವುದು ವಾಡಿಕೆ. ಚಾತುರ್ಮಾಸ ಎಂದರೆ ನಾಲ್ಕು ತಿಂಗಳು.…
ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವು ನಮ್ಮ ನಾಡಿನ ಸಾಂಸ್ಕೃತಿಕ ಅನನ್ಯತೆಯನ್ನು ಎತ್ತಿ ಹಿಡಿಯುತ್ತದೆ. ಕಲೆ, ಸಾಹಿತ್ಯ, ಸಂಸ್ಕೃತಿಯ ಮೂಲಕ…
ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯು ಯಶಸ್ವಿಯಾಗಿ ಮೂರು ವರ್ಷಗಳನ್ನು ಪೂರೈಸಿದೆ. ಗ್ರಾಮೀಣ ಆರ್ಥಿಕತೆಗೆ ನವಚೈತನ್ಯ ತುಂಬಿದೆ. ಮಹಿಳೆಯರಿಗೆ ಆರ್ಥಿಕ…