Mysore
32
clear sky

Social Media

ಮಂಗಳವಾರ, 03 ಮಾರ್ಚ್ 2026
Light
Dark

ಖಮೇನಿ ಹತ್ಯೆ ಬಳಿಕ ಕೇಂದ್ರ ಸರ್ಕಾರ ಮೌನವಹಿಸಿದೆ: ಸೋನಿಯಾ ಗಾಂಧಿ ಆಕ್ರೋಶ

sonia gandhi

ನವದೆಹಲಿ: ಇರಾನ್‍ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯ ಬಳಿಕ ಕೇಂದ್ರ ಸರ್ಕಾರ ಮೌನವಾಗಿರುವುದಕ್ಕೆ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಕಟುವಾಗಿ ಟೀಕಿಸಿದ್ದಾರೆ.

ಅಂತರಾಷ್ಟ್ರೀಯ ಕಾನೂನುಗಳ ಉಲ್ಲಂಘನೆಯಾದಾಗ ಭಾರತದಂತಹ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಮೌನವಾಗಿರುವುದು ತಟಸ್ಥ ನಿಲುವಲ್ಲ, ಬದಲಾಗಿ ಅದು ತನ್ನ ಜವಾಬ್ದಾರಿಯಿಂದ ನುಣುಚಿಕೊಳ್ಳುವ ಪರಾತ್ಯಾಗ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಮೌನವಾಗಿರುವುದು ತಟಸ್ಥವಲ್ಲ, ಬದಲಾಗಿ ಪರಾತ್ಯಾಗ ಎಂದು ಟಾಂಗ್ ಕೊಟ್ಟಿದ್ದಾರೆ. ಇರಾನ್ ಭಾರತದ ಸಹಾಯಕ್ಕೆ ಬಂದ ಹಲವಾರು ಸಂದರ್ಭಗಳನ್ನು ನರೇಂದ್ರ ಮೋದಿ ಸರ್ಕಾರಕ್ಕೆ ಸೋನಿಯಾ ಗಾಂಧಿ ನೆನಪಿಸಿದ್ದಾರೆ. ಖಮೇನಿಯವರ ಸಾವಿನ ಬಗ್ಗೆ ಕೇಂದ್ರ ಸರ್ಕಾರ ಯಾವುದೇ ಹೇಳಿಕೆ ನೀಡಿಲ್ಲ. ಆದರೆ, ಮಧ್ಯಪ್ರಾಚ್ಯ ಪ್ರದೇಶದಲ್ಲಿ ಸಂಯಮ ಮತ್ತು ಉದ್ವಿಗ್ನತೆಯನ್ನು ಕಡಿಮೆ ಮಾಡಲು ಕರೆ ನೀಡಿದೆ.

ಮಾರ್ಚ್.1ರಂದು, ಇರಾನ್ ತನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಸಯ್ಯದ್ ಅಲಿ ಹೊಸೇನಿ ಖಮೇನಿ ಅವರನ್ನು ಅಮೆರಿಕ ಮತ್ತು ಇಸ್ರೇಲ್ ಹಿಂದಿನ ದಿನ ನಡೆಸಿದ ಗುರಿ ದಾಳಿಯಲ್ಲಿ ಹತ್ಯೆ ಮಾಡಲಾಗಿದೆ ಎಂದು ದೃಢಪಡಿಸಿತು. ನಡೆಯುತ್ತಿರುವ ಮಾತುಕತೆಗಳ ಮಧ್ಯೆ ಹಾಲಿ ರಾಷ್ಟ್ರದ ಮುಖ್ಯಸ್ಥರ ಹತ್ಯೆಯು ಸಮಕಾಲೀನ ಅಂತರರಾಷ್ಟ್ರೀಯ ಸಂಬಂಧಗಳಲ್ಲಿ ಗಂಭೀರ ಬಿರುಕು ಮೂಡಿಸುತ್ತದೆ. ಭಾರತದ ಮೌನವು ಅಷ್ಟೇ ಸ್ಪಷ್ಟವಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.ಖಮೇನಿಯವರ ಸಾವಿನ ಬಗ್ಗೆ ಕೇಂದ್ರ ಸರ್ಕಾರ ಯಾವುದೇ ಹೇಳಿಕೆ ನೀಡಿಲ್ಲ.ಆದರೆ, ಮಧ್ಯಪ್ರಾಚ್ಯ ಪ್ರದೇಶದಲ್ಲಿ ಸಂಯಮ ಮತ್ತು ಉದ್ವಿಗ್ನತೆಯನ್ನು ಕಡಿಮೆ ಮಾಡಲು ಕರೆ ನೀಡಿದೆ.

ಭಾರತ ಮತ್ತು ಇರಾನ್ ನಡುವಿನ ನಾಗರಿಕ ಹಾಗೂ ಕಾರ್ಯತಂತ್ರದ ಸಂಬಂಧಗಳನ್ನು ನೆನಪಿಸಿದ್ದಾರೆ. ವಿಶೇಷವಾಗಿ 1994ರಲ್ಲಿ ಕಾಶ್ಮೀರ ವಿಷಯದಲ್ಲಿ ಇರಾನ್ ಭಾರತಕ್ಕೆ ನೀಡಿದ ಬೆಂಬಲವನ್ನು ಅವರು ಉಲ್ಲೇಖಿಸಿದ್ದಾರೆ. ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಆಯೋಗದಲ್ಲಿ ಭಾರತದ ವಿರುದ್ಧ ಪಾಕಿಸ್ತಾನ ಬೆಂಬಲಿತ ನಿರ್ಣಯ ಮಂಡನೆಯಾಗದಂತೆ ತಡೆಯುವಲ್ಲಿ ಟೆಹ್ರಾನ್ ಮಹತ್ವದ ಪಾತ್ರ ವಹಿಸಿತ್ತು. ಆ ನಿರ್ಣಾಯಕ ಘಟ್ಟದಲ್ಲಿ ಇರಾನ್ ಭಾರತದ ಪರ ನಿಲ್ಲದಿದ್ದರೆ ಕಾಶ್ಮೀರ ಸಮಸ್ಯೆ ಅಂತರಾಷ್ಟ್ರೀಯ ಮಟ್ಟದಲ್ಲಿ ನಮಗೆ ಹಿನ್ನಡೆ ತರುತ್ತಿತ್ತು ಎಂದು ಅವರು ಬರೆದಿದ್ದಾರೆ.

 

Tags:
error: Content is protected !!