ಹೊಸದಿಲ್ಲಿ: ಭಾರತದಾದ್ಯಂತ ರೈಲಿನಲ್ಲಿ ಹೆಚ್ಚಾಗಿ ಪ್ರಯಾಣಿಕರು ಓಡಾಡುವುದು ಸಾಮಾನ್ಯ. ಅದರಲ್ಲೂ ಹಬ್ಬದ ಸಂದರ್ಭಗಳಲ್ಲಿ ಪ್ರಯಾಣಿಕರ ದಟ್ಟಣೆ ಹೆಚ್ಚಾಗುವುದರಿಂದ ನಿರ್ವಹಣೆಗಾಗಿ ಹೆಚ್ಚಿನ ರೈಲು ವ್ಯವಸ್ಥೆ ಮಾಡಲು ಕೇಂದ್ರ ರೈಲ್ವೆ ಇಲಾಖೆ ತಿರ್ಮಾನಿಸಿದೆ.
ಪ್ರತಿದಿನ 20 ಮಿಲಿಯನ್ ಪ್ರಯಾಣಿಕರು ರೈಲಿನಲ್ಲಿ ಓಡಾಡುತ್ತಾರೆ. ಹಬ್ಬಗಳ ದಿನ ಪ್ರಯಾಣಿಕರ ಸಂಖ್ಯೆ ಇನ್ನೂ ಹೆಚ್ಚಾಗುವುದರಿಂದ ಕೇಂದ್ರ ಸರ್ಕಾರ ಪ್ರಯಾಣಿಕರಿಗೆ ದೀಪಾವಳಿ ಆಫರ್ ನೀಡಿದೆ. ದೀಪಾವಳಿ ಮತ್ತು ಛಾತ್ ಪೂಜೆ ಪ್ರಯುಕ್ತ ದೇಶದ ರೈಲು ಪ್ರಯಾಣಿಕರಿಗೆ ತಮ್ಮ ಊರು ತಲುಪಲು 7000 ವಿಶೇಷ ರೈಲು ವ್ಯವಸ್ಥೆಯನ್ನು ಮಾಡಿದೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಗುರುವಾರ ಸುದ್ದಿಗಾರರೊಂದಿಗೆ ತಿಳಿಸಿದ್ದಾರೆ.
ರೈಲ್ವೆ ಅಧಿಕಾರಿಗಳ ಪ್ರಕಾರ ಕಳೆದ ಹಬ್ಬದ ಪ್ರಯುಕ್ತ 4500 ವಿಶೇಷ ರೈಲುಗಳನ್ನು ಓಡಿಸಲಾಗಿತ್ತು. ಈ ವರ್ಷವು ಪ್ರಯಾಣಿಕರ ಸಂಖ್ಯೆ ಹೆಚ್ಚಾಗುವುದರಿಂದ 7000 ರೈಲುಗಳನ್ನು ಓಡಿಸಲು ತಿರ್ಮಾನಿಸಲಾಗಿದೆ ಎಂದು ರೈಲ್ವೆ ಇಲಾಖೆ ಹೇಳಿದೆ.
ಉತ್ತರ ರೈಲ್ವೆ ಇಲಾಖೆಯ ಪ್ರಕಾರ ಜನರು ತಮ್ಮ ಸ್ಥಳೀಯ ಸ್ಥಳಗಳನ್ನು ತಲುಪಲು ಸುಮಾರು ೩೦೫೦ ವಿಶೇಷ ರೈಲುಗಳ ಸೌಲಭ್ಯ ಪಡೆದುಕೊಳ್ಳುತ್ತಿದ್ದಾರೆ ಎಂದು ಹೇಳಿದ್ದಾರೆ. ಕೇಂದ್ರ ಸರ್ಕಾರದ ಮೇರೆಗೆ ಭಾತೀಯ ರೈಲ್ವೆ ,2023ರಲ್ಲಿ ವಿಶೇಷ ರೈಲು ಉತ್ಸವ ಮಾಡಿತ್ತು, ಇದಕ್ಕನುಗುಣವಾಗಿ 1082 ವಿಶೇಷ ರೈಲುಗಳನ್ನು ಓಡಿಸುವ ಮೂಲಕ ಓಟ್ಟು 3050 ರೈಲುಗಳ ಓಡಾಟ ನಡೆಸಿದೆ. ಇದು ಶೇಕಡಾ 181ರಷ್ಟು ಹೆಚ್ಚಳವಾಗಿದೆ.
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…