ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೇಶದಲ್ಲಿ ಒಂದು ದೇಶ, ಇಂದು ಚುನಾವಣೆ ಜಾರಿಗೆ ತರಲು ಸಿದ್ಧತೆ ಮಾಡಿದ್ದು, ಇದೀಗ ಮೂರು ಮಸೂದೆಗಳ ಅನುಷ್ಠಾನಕ್ಕೆ ಜಾರಿಗೆ ತರಲು ಮುಂದಾಗಿದೆ.
ದೇಶದಲ್ಲಿ ಒಂದು ದೇಶ ಒಂದು ಚುನಾವಣೆ ಜಾರಿ ಮಾಡಲು ಬಿಜೆಪಿ ಸರ್ಕಾರ ಮುಂದಾಗಿದ್ದು, ಯೋಜನೆ ಅನುಷ್ಠಾನಕ್ಕಾಗಿ ಒಂದು ಮಸೂದೆ ಹಾಗೂ ಸಂವಿಧಾನ ತಿದ್ದುಪಡಿಗೆ ಸಂಬಂಧಿಸಿದಂತೆ ಎರಡು ಮಸೂದೆಗಳನ್ನು ಮಂಡಿಸಲು ಸರ್ಕಾರ ತೀರ್ಮಾನ ಕೈಗೊಂಡಿದೆ.
ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ ಉನ್ನತ ಸಮಿತಿಯು ರಾಷ್ಟ್ರದಲ್ಲಿ ಒಂದು ದೇಶ, ಒಂದು ಚುನಾವಣೆ ನಡೆಸುವುದಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಕೇಂದ್ರ ಸರ್ಕಾರದ ಮುಂದೆ ಸಲ್ಲಿಸಿದ್ದ ಶಿಫಾರಸ್ಸು ಜಾರಿಗೆ ತರಲು ಮುನ್ನುಡಿ ಬರೆದಿದೆ.