ನವದೆಹಲಿ: ಹತ್ತು ವರ್ಷಗಳಿಗೊಮ್ಮೆ ನಡೆಸಲಾಗುವ ಜನಗಣತಿಯನ್ನು ಶೀಘ್ರದಲ್ಲೇ ಆರಂಭ ಮಾಡಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಈ ಬಗ್ಗೆ ನವದೆಹಲಿಯಲ್ಲಿ ಮಾತನಾಡಿದ ಅವರು, ಜನಗಣತಿ ಕಾರ್ಯ ಶೀಘ್ರದಲ್ಲೇ ಆರಂಭವಾಗಲಿದೆ. ನಾವು ಜನಗಣತಿಯನ್ನು ಘೋಷಣೆ ಮಾಡಿದಾಗ ಎಲ್ಲಾ ವಿವರಗಳು ಅದರಲ್ಲಿ ಸಿಗಲಿವೆ ಎಂದು ಮಾಹಿತಿ ನೀಡಿದರು.
1881 ರಿಂದಲೂ ಭಾರತದಲ್ಲಿ ಪ್ರತಿ 10 ವರ್ಷಗಳಿಗೊಮ್ಮೆ ಜನಗಣತಿ ನಡೆಸಲಾಗುತ್ತಿದ್ದು, ಅದರಂತೆ 2020ರ ಏಪ್ರಿಲ್.1ರಂದೇ ಜನಗಣತಿ ಆರಂಭವಾಗಬೇಕಿತ್ತು. ಆದರೆ ಕೋವಿಡ್ ಕಾರಣದಿಂದ ಜನಗಣತಿಯನ್ನು ಮುಂದೂಡಿಕೆ ಮಾಡಲಾಗಿತ್ತು.
ಮನೆ ಮನೆಗಳಿಗೆ ತೆರಳಿ ಜನಗಣತಿಯ ಫಾರ್ಮ್ ಭರ್ತಿ ಮಾಡಿ, ಸ್ವ ಸಮೀಕ್ಷೆಗೂ ಜನರಿಗೆ ಅವಕಾಶ ಕಲ್ಪಿಸಲಾಗುತ್ತಿದ್ದು, ಇದಕ್ಕಾಗಿಯೇ ಫೋರ್ಟಲ್ ಲಭ್ಯವಾಗಲಿದೆ.
ಅಲ್ಲಿ ಮಾಹಿತಿ ತುಂಬುವವರು ಆಧಾರ್ ಸಂಖ್ಯೆ ಅಥವಾ ಮೊಬೈಲ್ ಫೋನ್ ಸಂಪರ್ಕ ಸಂಖ್ಯೆಯನ್ನು ಕಡ್ಡಾಯವಾಗಿ ನಮೂದಿಸಬೇಕಾಗುತ್ತದೆ.
ಈ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಅಮಿತ್ ಶಾ ಅವರು, ಅಶ್ವಿನಿ ವೈಷ್ಣವ್ ಅವರೊಂದಿಗೆ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಜಾತಿಗಣತಿ ಬಗ್ಗೆ ಮಾಹಿತಿ ರವಾನಿಸಿದ್ದಾರೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…