ನವದೆಹಲಿ: ಕುಮಾರಸ್ವಾಮಿ ಮರ್ಯಾದೆಯಿಂದ ಇದ್ದರೆ ಕ್ಷೇಮ ಎಂದು ಹೇಳಿಕೆ ನೀಡಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್ಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.
ಈ ಬಗ್ಗೆ ಮಾಧ್ಯಮ ಹೇಳಿಕೆ ನೀಡಿರುವ ಅವರು, ಮರ್ಯಾದೆಗೇಡಿ, ಕಿಡಿಗೇಡಿ ನನ್ನ ಮೇಲೆ ಮತ್ತೆ ವಿಷಕಕ್ಕಿರುವುದು ಹತಾಶೆ ಅಷ್ಟೇ. ಆಕಾಶಕ್ಕೆ ಉಗಿದರೆ ಮುಖದ ಮೇಲೆಯೇ ಬೀಳುತ್ತದೆ ಮಂಕೆ..! ಇಷ್ಟೂ ಸಾಮಾನ್ಯಜ್ಞಾನವೂ ಇಲ್ಲವೇ? ಕುಂಬಳಕಾಯಿ ಕಳ್ಳನಿಗೆ ಕೋಪ ಬಂದಿದೆ! ಇಂದು ಟಾಂಗ್ ನೀಡಿದ್ದಾರೆ.
ಅಹೋರಾತ್ರಿಯೂ ದ್ರೋಹ ಚಿಂತನೆ, ವಿಶ್ವಾಸದ್ರೋಹ, ಉಂಡ ಮನೆಗೆ ಕನ್ನ, ಸ್ವಪಕ್ಷೀಯರಿಗೇ ಗುನ್ನ.. ಇದೂ ಒಂದು ಬದುಕೇ..? ರಾಜಕೀಯ ವಿರೋಧಿಗಳನ್ನು ಹತ್ತಿಕ್ಕಲು ಕ್ರಿಮಿನಲ್ ಕೃತ್ಯಗಳಲ್ಲಿ ತೊಡಗಿರುವ ವಿಷಸರ್ಪ ನನ್ನಡೆಗೆ ನಾಲಿಗೆ ಚಾಚಿದೆ! ಇಂಥ ಕ್ರಿಮಿನಲ್ ಒಬ್ಬ ಕೆಟ್ಟ ಅಲೋಚನೆಗಳಲ್ಲಿ ದಿನಪೂರ್ತಿ ಮುಳುಗಿರುವುದು ಸಹಜ. ಕ್ರಿಮಿನಲ್’ನ ಚಾಳಿಯೇ ಧಮ್ಕಿ ಹಾಕುವುದು. ವಿಷಕ್ರಿಮಿಯ ಕೆಲಸ ಎಲ್ಲರನ್ನೂ ಕಚ್ಚುವುದು.. ಇದರಲ್ಲಿ ನನಗೇನೂ ಅಚ್ಚರಿ ಇಲ್ಲ ಎಂದು ಕೇಂದ್ರ ಸಚಿವರು ತಿರುಗೇಟು ಕೊಟ್ಟಿದ್ದಾರೆ.
ನಾನು ಭೂ ಒತ್ತುವರಿ ಮಾಡಿದ್ದೇನೋ ಇಲ್ಲವೋ ಕಾನೂನು ವ್ಯಾಪ್ತಿಯಲ್ಲಿ ತೀರ್ಮಾನವಾಗುತ್ತದೆ. ಈಗ ನನ್ನ ಮರ್ಯಾದೆ ವಿಷಯ ಇರಲಿ, ಇವತ್ತು ಸ್ವಪಕ್ಷೀಯರೇ ಈ ಮರ್ಯಾದೆಗೇಡಿಯ ಮಾನವನ್ನು ವಿಧಾನಸೌಧದಲ್ಲಿಯೇ ಹರಾಜು ಹಾಕಿದ್ದಾರೆ! ಅದಕ್ಕೆ ಉತ್ತರವೇನು? ಎಂದು ಅವರು ಪ್ರಶ್ನೆ ಮಾಡಿದ್ದಾರೆ.
ಬೆಂಗಳೂರು: ನಾವು ಮುಂಚೂಣಿ ನಾಯಕರಾಗಿದ್ದೆವು. ಈಗ ಬೇರೆ ಕುದುರೆಗಳು ಬಂದಿವೆ. ಇದೊಂದು ರೇಸ್. ಈಗ ಅವರ ಕುದುರೆಗಳು ಮುಂದೆ ಇವೆ…
ಸೋಮವಾರಪೇಟೆ: ವಿಪರೀತ ಬಿಸಿಲಿನಿಂದ ಕಂಗೆಟ್ಟಿರುವ ತಾಲ್ಲೂಕಿನ ಗ್ರಾಮೀಣ ಜನರು ಮಳೆಗಾಗಿ ದೇವರ ಮೊರೆ ಹೋಗುತ್ತಿದ್ದಾರೆ. ಹಿರಿಕರ ಗ್ರಾಮದ ಕೃಷಿಕರು, ಗ್ರಾಮದ…
ಕಲಬುರ್ಗಿ: ಇಂದು(ಏಪ್ರಿಲ್.15, 2026) ರಾಜ್ಯದಲ್ಲಿಯೇ ಅತೀ ಹೆಚ್ಚು ಉಷ್ಣಾಂಶ ಕಲಬುರ್ಗಿ ಜಿಲ್ಲೆಯಲ್ಲಿ ದಾಖಲಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಕಲಬುರ್ಗಿ ಜಿಲ್ಲೆಯ ನಾಲ್ಕು…
ಲಕ್ನೋ: ಕರ್ನಾಟಕ ಕಾಂಗ್ರೆಸ್ನ ಹಿರಿಯ ಶಾಸಕರು ಅಯೋಧ್ಯೆ ರಾಮಮಂದಿರಕ್ಕೆ ತೆರಳಿ ರಾಮಲಲ್ಲಾನ ದರ್ಶನ ಪಡೆದರು. 12 ಮಂದಿ ಶಾಸಕರು ಇಂದು…
ಯೋಗೇಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿ ಅಪರಾಧಿ ಎಂದು ತೀರ್ಪು ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ…
ಬೆಂಗಳೂರು: ಮಂಡ್ಯಕ್ಕೆ ಆಗಮಿಸಲು ಬೆಂಗಳೂರಿಗೆ ಬಂದಿಳಿದಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಮನವಿ ಪತ್ರ ಸಲ್ಲಿಸಿದ್ದಾರೆ. ಇಂದು…