ದೇಶ- ವಿದೇಶ

ಕ್ರಿಮಿನಲ್ ಚಾಳಿಯೇ ಧಮ್ಕಿ ಹಾಕುವುದು, ವಿಷಕ್ರಿಮಿಯ ಕೆಲಸ ಎಲ್ಲರನ್ನೂ ಕಚ್ಚುವುದು: ಡಿಸಿಎಂಗೆ ಟಾಂಗ್‌ ಕೊಟ್ಟ ಎಚ್‌ಡಿಕೆ

ನವದೆಹಲಿ: ಕುಮಾರಸ್ವಾಮಿ ಮರ್ಯಾದೆಯಿಂದ ಇದ್ದರೆ ಕ್ಷೇಮ ಎಂದು ಹೇಳಿಕೆ ನೀಡಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ನೀಡಿರುವ ಅವರು, ಮರ್ಯಾದೆಗೇಡಿ, ಕಿಡಿಗೇಡಿ ನನ್ನ ಮೇಲೆ ಮತ್ತೆ ವಿಷಕಕ್ಕಿರುವುದು ಹತಾಶೆ ಅಷ್ಟೇ. ಆಕಾಶಕ್ಕೆ ಉಗಿದರೆ ಮುಖದ ಮೇಲೆಯೇ ಬೀಳುತ್ತದೆ ಮಂಕೆ..! ಇಷ್ಟೂ ಸಾಮಾನ್ಯಜ್ಞಾನವೂ ಇಲ್ಲವೇ? ಕುಂಬಳಕಾಯಿ ಕಳ್ಳನಿಗೆ ಕೋಪ ಬಂದಿದೆ! ಇಂದು ಟಾಂಗ್ ನೀಡಿದ್ದಾರೆ.

ಅಹೋರಾತ್ರಿಯೂ ದ್ರೋಹ ಚಿಂತನೆ, ವಿಶ್ವಾಸದ್ರೋಹ, ಉಂಡ ಮನೆಗೆ ಕನ್ನ, ಸ್ವಪಕ್ಷೀಯರಿಗೇ ಗುನ್ನ.. ಇದೂ ಒಂದು ಬದುಕೇ..? ರಾಜಕೀಯ ವಿರೋಧಿಗಳನ್ನು ಹತ್ತಿಕ್ಕಲು ಕ್ರಿಮಿನಲ್ ಕೃತ್ಯಗಳಲ್ಲಿ ತೊಡಗಿರುವ ವಿಷಸರ್ಪ ನನ್ನಡೆಗೆ ನಾಲಿಗೆ ಚಾಚಿದೆ! ಇಂಥ ಕ್ರಿಮಿನಲ್ ಒಬ್ಬ ಕೆಟ್ಟ ಅಲೋಚನೆಗಳಲ್ಲಿ ದಿನಪೂರ್ತಿ ಮುಳುಗಿರುವುದು ಸಹಜ. ಕ್ರಿಮಿನಲ್’ನ ಚಾಳಿಯೇ ಧಮ್ಕಿ ಹಾಕುವುದು. ವಿಷಕ್ರಿಮಿಯ ಕೆಲಸ ಎಲ್ಲರನ್ನೂ ಕಚ್ಚುವುದು.. ಇದರಲ್ಲಿ ನನಗೇನೂ ಅಚ್ಚರಿ ಇಲ್ಲ ಎಂದು ಕೇಂದ್ರ ಸಚಿವರು ತಿರುಗೇಟು ಕೊಟ್ಟಿದ್ದಾರೆ.

ನಾನು ಭೂ ಒತ್ತುವರಿ ಮಾಡಿದ್ದೇನೋ ಇಲ್ಲವೋ ಕಾನೂನು ವ್ಯಾಪ್ತಿಯಲ್ಲಿ ತೀರ್ಮಾನವಾಗುತ್ತದೆ. ಈಗ ನನ್ನ ಮರ್ಯಾದೆ ವಿಷಯ ಇರಲಿ, ಇವತ್ತು ಸ್ವಪಕ್ಷೀಯರೇ ಈ ಮರ್ಯಾದೆಗೇಡಿಯ ಮಾನವನ್ನು ವಿಧಾನಸೌಧದಲ್ಲಿಯೇ ಹರಾಜು ಹಾಕಿದ್ದಾರೆ! ಅದಕ್ಕೆ ಉತ್ತರವೇನು? ಎಂದು ಅವರು ಪ್ರಶ್ನೆ ಮಾಡಿದ್ದಾರೆ.

 

 

 

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಮೈಸೂರಿನಲ್ಲಿ ಮಳೆ ನೀರು ಕೊಯ್ಲು ಥೀಮ್ ಪಾರ್ಕ್ ಕನ್ನಡಿಯೊಳಗಿನ ಗಂಟು

ಮೈಸೂರು ನಗರದಲ್ಲಿ ಮಳೆನೀರು ಕೊಯ್ಲು ಥೀಮ್ ಪಾರ್ಕ್ ಸ್ಥಾಪಿಸುವ ಹಿಂದಿನ ಹಾಗೂ ಈಗಿನ ಸರ್ಕಾರಗಳ ಭರವಸೆ ಇನ್ನೂ ಕನ್ನಡಿಯೊಳಗಿನ ಗಂಟಾಗಿಯೇ…

1 hour ago

ಓದುಗರ ಪತ್ರ: ಅಂಕೇಗೌಡರಿಗೆ ಸಿಕ್ಕ ಪದ್ಮಶ್ರೀ ಸಾರಸ್ವತ ಲೋಕಕ್ಕೆ ಸಂದ ಗೌರವ

ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಹರಳಹಳ್ಳಿಯ ಪುಸ್ತಕ ಪ್ರೇಮಿ ೭೮ ವರ್ಷದ ಅಂಕೇಗೌಡ ಅವರಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿರುವುದು ಕನ್ನಡ…

1 hour ago

ಓದುಗರ ಪತ್ರ: ರಾಮಕೃಷ್ಣನಗರಕ್ಕೆ ಮತ್ತಷ್ಟು ಬಸ್ ಸೌಲಭ್ಯ ಕಲ್ಪಿಸಿ

ಮೈಸೂರಿನ ರಾಮಕೃಷ್ಣನಗರ ಮಾರ್ಗಕ್ಕೆ ಪ್ರತಿದಿನ ನಗರ ಸಾರಿಗೆ ಬಸ್ಸುಗಳು ಸಂಚರಿಸುತ್ತವೆ. ಆದರೆ ಈ ಮಾರ್ಗದಲ್ಲಿ ಓಡಾಡುವ ಬಸ್ಸುಗಳ ಸಂಖ್ಯೆ ಮಾತ್ರ…

1 hour ago

ವಿಜೃಂಭಣೆಯಿಂದ ನಡೆದ ಸಂತೆ ಮಾಸ್ತಮ್ಮನವರ ಜಾತ್ರೆ

ಸರಗೂರು: ಪಟ್ಟಣದಲ್ಲಿ ಗ್ರಾಮದೇವತೆ ಶ್ರೀ ಸಂತೆ ಮಾಸ್ತಮ್ಮನವರ ೩೧ನೇ ಜಾತ್ರಾ ಮಹೋತ್ಸವ ಹಾಗೂ ಕೊಂಡೋತ್ಸವ ಶುಕ್ರವಾರ ವಿಜೃಂಭಣೆಯಿಂದ ನೆರವೇರಿತು. ಜಾತ್ರಾ…

1 hour ago

ಕಬಿನಿ ಹಿನ್ನೀರಿನ ರೆಸಾರ್ಟ್‌ಗಳ ದಾಖಲಾತಿ ಪರಿಶೀಲನೆ

ರೆಸಾರ್ಟ್‌ಗಳು, ಹೋಂಸ್ಟೇಗಳಿಗೆ ಅಕ್ರಮ ರೆಸಾರ್ಟ್‌ಗಳ ತನಿಖಾ ಸಮಿತಿಯವರ ದಿಢೀರ್ ಭೇಟಿ ಹೆಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಹಿನ್ನೀರಿನ ನಾಗರಹೊಳೆ ಮತ್ತು ಬಂಡೀಪುರ…

2 hours ago

ಬೀದಿ ನಾಯಿ ಪುನರ್ವಸತಿ ಕೇಂದ್ರ ಸ್ಥಾಪನೆಗೆ ವಿರೋಧ

ಕೆ.ಬಿ.ಶಂಶುದ್ಧೀನ್ ಗ್ರಾಮಕ್ಕೆ ಹುಲಿ, ಚಿರತೆಗಳು ಲಗ್ಗೆಯಿಡುವ ಆತಂಕ; ಹೋರಾಟದ ಎಚ್ಚರಿಕೆ ನೀಡಿದ ಹಕ್ಕೆ ಗ್ರಾಮಸ್ಥರು ಕುಶಾಲನಗರ: ಬೀದಿ ನಾಯಿಗಳ ಹಾವಳಿ…

2 hours ago