ನವದೆಹಲಿ: ಕುಮಾರಸ್ವಾಮಿ ಮರ್ಯಾದೆಯಿಂದ ಇದ್ದರೆ ಕ್ಷೇಮ ಎಂದು ಹೇಳಿಕೆ ನೀಡಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್ಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.
ಈ ಬಗ್ಗೆ ಮಾಧ್ಯಮ ಹೇಳಿಕೆ ನೀಡಿರುವ ಅವರು, ಮರ್ಯಾದೆಗೇಡಿ, ಕಿಡಿಗೇಡಿ ನನ್ನ ಮೇಲೆ ಮತ್ತೆ ವಿಷಕಕ್ಕಿರುವುದು ಹತಾಶೆ ಅಷ್ಟೇ. ಆಕಾಶಕ್ಕೆ ಉಗಿದರೆ ಮುಖದ ಮೇಲೆಯೇ ಬೀಳುತ್ತದೆ ಮಂಕೆ..! ಇಷ್ಟೂ ಸಾಮಾನ್ಯಜ್ಞಾನವೂ ಇಲ್ಲವೇ? ಕುಂಬಳಕಾಯಿ ಕಳ್ಳನಿಗೆ ಕೋಪ ಬಂದಿದೆ! ಇಂದು ಟಾಂಗ್ ನೀಡಿದ್ದಾರೆ.
ಅಹೋರಾತ್ರಿಯೂ ದ್ರೋಹ ಚಿಂತನೆ, ವಿಶ್ವಾಸದ್ರೋಹ, ಉಂಡ ಮನೆಗೆ ಕನ್ನ, ಸ್ವಪಕ್ಷೀಯರಿಗೇ ಗುನ್ನ.. ಇದೂ ಒಂದು ಬದುಕೇ..? ರಾಜಕೀಯ ವಿರೋಧಿಗಳನ್ನು ಹತ್ತಿಕ್ಕಲು ಕ್ರಿಮಿನಲ್ ಕೃತ್ಯಗಳಲ್ಲಿ ತೊಡಗಿರುವ ವಿಷಸರ್ಪ ನನ್ನಡೆಗೆ ನಾಲಿಗೆ ಚಾಚಿದೆ! ಇಂಥ ಕ್ರಿಮಿನಲ್ ಒಬ್ಬ ಕೆಟ್ಟ ಅಲೋಚನೆಗಳಲ್ಲಿ ದಿನಪೂರ್ತಿ ಮುಳುಗಿರುವುದು ಸಹಜ. ಕ್ರಿಮಿನಲ್’ನ ಚಾಳಿಯೇ ಧಮ್ಕಿ ಹಾಕುವುದು. ವಿಷಕ್ರಿಮಿಯ ಕೆಲಸ ಎಲ್ಲರನ್ನೂ ಕಚ್ಚುವುದು.. ಇದರಲ್ಲಿ ನನಗೇನೂ ಅಚ್ಚರಿ ಇಲ್ಲ ಎಂದು ಕೇಂದ್ರ ಸಚಿವರು ತಿರುಗೇಟು ಕೊಟ್ಟಿದ್ದಾರೆ.
ನಾನು ಭೂ ಒತ್ತುವರಿ ಮಾಡಿದ್ದೇನೋ ಇಲ್ಲವೋ ಕಾನೂನು ವ್ಯಾಪ್ತಿಯಲ್ಲಿ ತೀರ್ಮಾನವಾಗುತ್ತದೆ. ಈಗ ನನ್ನ ಮರ್ಯಾದೆ ವಿಷಯ ಇರಲಿ, ಇವತ್ತು ಸ್ವಪಕ್ಷೀಯರೇ ಈ ಮರ್ಯಾದೆಗೇಡಿಯ ಮಾನವನ್ನು ವಿಧಾನಸೌಧದಲ್ಲಿಯೇ ಹರಾಜು ಹಾಕಿದ್ದಾರೆ! ಅದಕ್ಕೆ ಉತ್ತರವೇನು? ಎಂದು ಅವರು ಪ್ರಶ್ನೆ ಮಾಡಿದ್ದಾರೆ.
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…
ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್ಎಸ್ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…
ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…
ಹೇಮಂತ್ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…