ನವದೆಹಲಿ: ಕುಮಾರಸ್ವಾಮಿ ಮರ್ಯಾದೆಯಿಂದ ಇದ್ದರೆ ಕ್ಷೇಮ ಎಂದು ಹೇಳಿಕೆ ನೀಡಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್ಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.
ಈ ಬಗ್ಗೆ ಮಾಧ್ಯಮ ಹೇಳಿಕೆ ನೀಡಿರುವ ಅವರು, ಮರ್ಯಾದೆಗೇಡಿ, ಕಿಡಿಗೇಡಿ ನನ್ನ ಮೇಲೆ ಮತ್ತೆ ವಿಷಕಕ್ಕಿರುವುದು ಹತಾಶೆ ಅಷ್ಟೇ. ಆಕಾಶಕ್ಕೆ ಉಗಿದರೆ ಮುಖದ ಮೇಲೆಯೇ ಬೀಳುತ್ತದೆ ಮಂಕೆ..! ಇಷ್ಟೂ ಸಾಮಾನ್ಯಜ್ಞಾನವೂ ಇಲ್ಲವೇ? ಕುಂಬಳಕಾಯಿ ಕಳ್ಳನಿಗೆ ಕೋಪ ಬಂದಿದೆ! ಇಂದು ಟಾಂಗ್ ನೀಡಿದ್ದಾರೆ.
ಅಹೋರಾತ್ರಿಯೂ ದ್ರೋಹ ಚಿಂತನೆ, ವಿಶ್ವಾಸದ್ರೋಹ, ಉಂಡ ಮನೆಗೆ ಕನ್ನ, ಸ್ವಪಕ್ಷೀಯರಿಗೇ ಗುನ್ನ.. ಇದೂ ಒಂದು ಬದುಕೇ..? ರಾಜಕೀಯ ವಿರೋಧಿಗಳನ್ನು ಹತ್ತಿಕ್ಕಲು ಕ್ರಿಮಿನಲ್ ಕೃತ್ಯಗಳಲ್ಲಿ ತೊಡಗಿರುವ ವಿಷಸರ್ಪ ನನ್ನಡೆಗೆ ನಾಲಿಗೆ ಚಾಚಿದೆ! ಇಂಥ ಕ್ರಿಮಿನಲ್ ಒಬ್ಬ ಕೆಟ್ಟ ಅಲೋಚನೆಗಳಲ್ಲಿ ದಿನಪೂರ್ತಿ ಮುಳುಗಿರುವುದು ಸಹಜ. ಕ್ರಿಮಿನಲ್’ನ ಚಾಳಿಯೇ ಧಮ್ಕಿ ಹಾಕುವುದು. ವಿಷಕ್ರಿಮಿಯ ಕೆಲಸ ಎಲ್ಲರನ್ನೂ ಕಚ್ಚುವುದು.. ಇದರಲ್ಲಿ ನನಗೇನೂ ಅಚ್ಚರಿ ಇಲ್ಲ ಎಂದು ಕೇಂದ್ರ ಸಚಿವರು ತಿರುಗೇಟು ಕೊಟ್ಟಿದ್ದಾರೆ.
ನಾನು ಭೂ ಒತ್ತುವರಿ ಮಾಡಿದ್ದೇನೋ ಇಲ್ಲವೋ ಕಾನೂನು ವ್ಯಾಪ್ತಿಯಲ್ಲಿ ತೀರ್ಮಾನವಾಗುತ್ತದೆ. ಈಗ ನನ್ನ ಮರ್ಯಾದೆ ವಿಷಯ ಇರಲಿ, ಇವತ್ತು ಸ್ವಪಕ್ಷೀಯರೇ ಈ ಮರ್ಯಾದೆಗೇಡಿಯ ಮಾನವನ್ನು ವಿಧಾನಸೌಧದಲ್ಲಿಯೇ ಹರಾಜು ಹಾಕಿದ್ದಾರೆ! ಅದಕ್ಕೆ ಉತ್ತರವೇನು? ಎಂದು ಅವರು ಪ್ರಶ್ನೆ ಮಾಡಿದ್ದಾರೆ.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…